AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಭೂಮಿಯಿಂದ ಮತ್ತೆ ಕೇಳಿ ಬಂತು ಭಾರಿ ಶಬ್ದ!

ಇಂದು ಬೆಳಗ್ಗೆ 9.50ರ ಸುಮಾರಿಗೆ ಮತ್ತೆ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಈಗಾಗಲೇ ಲಘು ಭೂಕಂಪನದಿಂದ ಜನರು ಕಂಗಾಲಾಗಿದ್ದಾರೆ.

ಕಲಬುರಗಿಯಲ್ಲಿ ಭೂಮಿಯಿಂದ ಮತ್ತೆ ಕೇಳಿ ಬಂತು ಭಾರಿ ಶಬ್ದ!
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on: Oct 28, 2021 | 11:58 AM

Share

ಕಲಬುರಗಿ: ಚಿಂಚೋಳಿ ತಾಲೂಕಿನ ಗಡಿಕೇಶ್ವರ ಮತ್ತು ಹೊಸಳ್ಳಿ ಹೆಚ್ ಗ್ರಾಮಗಳಲ್ಲಿ ಭಾರಿ ಶಬ್ದ ಕೇಳಿಬಂದಿದೆ. ಕೆಲ ದಿನಗಳ ಹಿಂದೆ ನಿರಂತರವಾಗಿ ಭೂಮಿ ಕಂಪಿಸುತ್ತಿತ್ತು. ಒಂದು ವಾರದಿಂದ ಯಾವುದೇ ರೀತಿಯ ಶಬ್ದ ಇರಲಿಲ್ಲ. ಆದರೆ ಇಂದು (ಅ.28) ಬೆಳಗ್ಗೆ 9.50ರ ಸುಮಾರಿಗೆ ಮತ್ತೆ ಭೂಮಿಯಿಂದ ಭಾರಿ ಶಬ್ದ ಕೇಳಿಬಂದಿದೆ. ಈಗಾಗಲೇ ಲಘು ಭೂಕಂಪನದಿಂದ ಜನರು ಕಂಗಾಲಾಗಿದ್ದಾರೆ. ಇಂದು ಕೇಳಿ ಬಂದ ಭಾರಿ ಶಬ್ದದಿಂದ ಜನರು ಆತಂಕಗೊಂಡಿದ್ದಾರೆ.

ಜಿಲ್ಲೆಯ ಹಲವೆಡೆ ಪದೇಪದೆ ಭೂಕಂಪ ವಿಚಾರಕ್ಕೆ ಸಂಬಂಧಿಸಿ ಪರಿಶೀಲನೆ ನಡೆಸಲು ಭೂಕಂಪ ಪೀಡಿತ ಗ್ರಾಮಗಳಿಗೆ ಭೂವಿಜ್ಞಾನಿಗಳ ತಂಡ ಭೇಟಿ ಅಕ್ಟೋಬರ್ 13 ರಂದು ನೀಡಿದ್ದರು. ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ತಂಡದಿಂದ ಪರಿಶೀಲನೆ ಮಾಡಲಾಗಿತ್ತು. ಕಿರಿಯ ಭೂವಿಜ್ಞಾನಿ ರಮೇಶ್ ದಿಕ್ಬಾಲ್, ವೈಜ್ಞಾನಿಕ ಸಹಾಯಕ ಸಂತೋಷ್ ಸೇರಿ ಆರು ಜನರು ಭೇಟಿ ಮಾಡಿದ್ದರು. ಗಡಿಕೇಶ್ವರ, ಹಲಚೇರಾ, ಹೊಸಳ್ಳಿ ಸೇರಿ ಕೆಲ ಗ್ರಾಮಕ್ಕೆ ಭೇಟಿ ಕೊಟ್ಟಿದ್ದಾರೆ. ಭೂಕಂಪದ ಕೇಂದ್ರ ಬಿಂದುವಿಗೂ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು.

ಕಾಳಗಿ, ಚಿಂಚೋಳಿ ತಾಲೂಕಿನ ಅನೇಕ ಹಳ್ಳಿಗಳಲ್ಲಿ ಭೂಕಂಪನ ಆಗಿತ್ತು. ಕಳೆದ ಕೆಲವು ದಿನಗಳಲ್ಲಿ ಕೆಲವು ಬಾರಿ ಭೂಕಂಪನ ಉಂಟಾಗಿತ್ತು. ಇದರಿಂದ ಜನರು ಬಹಳಷ್ಟು ಆತಂಕಕ್ಕೆ ಒಳಗಾಗಿದ್ದರು. ಗಡಿಕೇಶ್ವರ ಗ್ರಾಮದಲ್ಲಿ ನಿರಂತರವಾಗಿ ಭೂಕಂಪನ ಹಿನ್ನೆಲೆ ಸ್ಥಳೀಯ ಜನರು ಗ್ರಾಮ ತೊರೆದು ಹೋಗಲು ಶುರುಮಾಡಿದ್ದಾರೆ. ಇಂದು ಕೂಡಾ ಜನರು ಗ್ರಾಮ ತೊರೆದು ಹೋಗುತ್ತಿರುವ ದೃಶ್ಯ ಕಂಡುಬಂದಿತ್ತು. ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಭೂಕಂಪ ಭಯ ಹಿನ್ನೆಲೆಯಲ್ಲಿ ಜನರು ಮನೆ ತೊರದು ಬೇರಡೆ ಹೋಗುತ್ತಿದ್ದಾರೆ. ಸಂಬಂಧಿಕರ ಬೇರೆ ಬೇರೆ ಗ್ರಾಮಗಳಿಗೆ ಜನ ತೆರಳಿದ್ದಾರೆ.

ಇದನ್ನೂ ಓದಿ

ವಿಮಾನದಲ್ಲಿ ತಯಾರಾಯ್ತು ರೆಸ್ಟೋರೆಂಟ್; ಗುಜರಾತ್​ನ ಫ್ಲೈಟ್ ಥೀಮ್ ರೆಸ್ಟೋರೆಂಟ್ ವಿಶೇಷತೆ ಏನು ಗೊತ್ತಾ?

ಜಮೀನು ವಿವಾದಕ್ಕೆ 2 ಗ್ರಾಮಗಳ ನಡುವೆ ಮಾರಾಮಾರಿ; 13 ಜನರಿಗೆ ಗಾಯ, ಇಬ್ಬರು ಅರೆಸ್ಟ್

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ