AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಮಳೆ ಆರ್ಭಟ; ಗೋಡೆ ಕುಸಿದು 80ಕ್ಕೂ ಅಧಿಕ ಕುರಿ, ಮೇಕೆಗಳ ಸಾವು

Kalaburagi Rain: ಮಳೆಯಿಂದ ಗೋಡೆ ಕುಸಿದು 80ಕ್ಕೂ ಅಧಿಕ ಕುರಿಗಳು ಹಾಗೂ ಮೇಕೆಗಳು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಕೊರವಿ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಪೂಜಾರಿ ಮತ್ತು ಅಣ್ಣಪ್ಪ ಪೂಜಾರಿ ಎಂಬುವರಿಗೆ ಸೇರಿದ್ದ ಕುರಿ ಹಾಗೂ ಮೇಕೆಗಳು ಕಳೆದ ರಾತ್ರಿ ಸುರಿದ ಮಳೆಯಿಂದ ಏಕಾಏಕಿ ಗೋಡೆ ಕುಸಿದ ಪರಿಣಾಮ ಕಲ್ಲಿನಡಿ ಸಿಲುಕಿ ಮೃತಪಟ್ಟಿವೆ.

ಕಲಬುರಗಿಯಲ್ಲಿ ಮಳೆ ಆರ್ಭಟ; ಗೋಡೆ ಕುಸಿದು 80ಕ್ಕೂ ಅಧಿಕ ಕುರಿ, ಮೇಕೆಗಳ ಸಾವು
ಕುರಿ, ಮೇಕೆಗಳನ್ನು ಕಳೆದುಕೊಂಡು ಕಂಗಾಲಾದ ಕುಟುಂಬ
ಸಂಜಯ್ಯಾ ಚಿಕ್ಕಮಠ
| Edited By: |

Updated on: Sep 04, 2023 | 7:38 AM

Share

ಕಲಬುರಗಿ, ಸೆ.04: ಕಲಬುರಗಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮತ್ತೆ ಹೆಚ್ಚಾಗಿದೆ(Kalaburagi Rain). ನಿನ್ನೆ ಮಧ್ಯಾಹ್ನದಿಂದ ಬಿಡುವು ನೀಡಿದ್ದ ವರುಣದೇವ ಇಂದು ಬೆಳ್ಳೆಂಬೆಳಗ್ಗೆಯಿಂದಲೇ ಆರ್ಭಟ ಜೋರು ಮಾಡಿದ್ದಾನೆ. ಇಂದು ಕೂಡಾ ಕಲಬುರಗಿ ಜಿಲ್ಲೆಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಕಲಬುರಗಿ ನಗರ ಸೇರಿ ಹಲವೆಡೆ ಜಿಟಿಜಿಟಿ ಮಳೆಯಾಗುತ್ತಿದೆ. ಇದರ ನಡುವೆ ಮಳೆಯಿಂದ ಗೋಡೆ ಕುಸಿದು 80ಕ್ಕೂ ಅಧಿಕ ಕುರಿಗಳು ಹಾಗೂ ಮೇಕೆಗಳು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಕೊರವಿ ಗ್ರಾಮದಲ್ಲಿ ನಡೆದಿದೆ.

ಮಲ್ಲಪ್ಪ ಪೂಜಾರಿ ಮತ್ತು ಅಣ್ಣಪ್ಪ ಪೂಜಾರಿ ಎಂಬುವರಿಗೆ ಸೇರಿದ್ದ ಕುರಿ ಹಾಗೂ ಮೇಕೆಗಳು ಕಳೆದ ರಾತ್ರಿ ಸುರಿದ ಮಳೆಯಿಂದ ಏಕಾಏಕಿ ಗೋಡೆ ಕುಸಿದ ಪರಿಣಾಮ ಕಲ್ಲಿನಡಿ ಸಿಲುಕಿ ಮೃತಪಟ್ಟಿವೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಗೋಡೆ ತೇವಗೊಂಡಿತ್ತು. ಹೀಗಾಗಿ ನಿನ್ನೆ ಸಂಜೆ ಮನೆಯೊಂದರಲ್ಲಿ ಮೇಕೆ ಹಾಗೂ ಕುರಿಗಳನ್ನು ಒಂದೆಡೆ ಕೂಡಿಹಾಕಲಾಗಿತ್ತು. ಆದ್ರೆ ಗೋಡೆ ಕುಸಿದು ಕುರಿ, ಮೇಕೆಗಳು ಮೃತಪಟ್ಟಿವೆ. ಲಕ್ಷಾಂತರ ಮೌಲ್ಯದ ಕುರಿ, ಮೇಕೆಗಳನ್ನು ಕಳೆದುಕೊಂಡ ಕುಟುಂಬ ಕಂಗಾಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಡೆಂಗ್ಯೂ ರೋಗ ಪ್ರಕರಣ ಸಂಖ್ಯೆಯಲ್ಲಿ ಏರಿಕೆ; ಬೆಂಗಳೂರಿನಲ್ಲಿ ಅಧಿಕ ಬಾಧಿತರು

ಸಿಡಿಲು ಬಡಿದು ಮಹಿಳೆ ಸಾವು

ಸಿಡಿಲು ಬಡಿದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮೂವತ್ತೈದು ವರ್ಷದ ಕಲಾವತಿ ಅನ್ನೋ ಮಹಿಳೆ, ನಿನ್ನೆ ಸಂಜೆ ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾಳೆ. ಇನ್ನೋರ್ವ ಮಹಿಳೆ ಘಟನೆಯಲ್ಲಿ ಗಾಯಗೊಂಡಿದ್ದು, ಆಕೆಯನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಫಜಲಪುರ ತಹಶಿಲ್ದಾರ್ ಸಂಜೀವ್ ಕುಮಾರ್ ದಾಸರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ವರುಣ ಬಾರದೇ ಇದ್ದಾಗ ಕಂಗಾಲಾಗಿದ್ದ ಜನರು, ಸೆಪ್ಟಂಬರ್ ತಿಂಗಳಲ್ಲಿ ವರುಣ ಅಬ್ಬರಿಸಿ ಬೊಬ್ಬೆರೆಯಲು ಆರಂಭಿಸಿದ್ದರಿಂದ ಒಂದಡೆ ಸಂತಸ ಪಟ್ಟರೆ, ಮತ್ತೊಂದಡೆ ಮಳೆಯಿಂದ ತೊಂದರೆಗಳಿಗೆ ಕೂಡಾ ಸಿಲುಕುತ್ತಿದ್ದಾರೆ.

ಕಲಬುರಗಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!