AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಮಳೆ ಆರ್ಭಟ; ಗೋಡೆ ಕುಸಿದು 80ಕ್ಕೂ ಅಧಿಕ ಕುರಿ, ಮೇಕೆಗಳ ಸಾವು

Kalaburagi Rain: ಮಳೆಯಿಂದ ಗೋಡೆ ಕುಸಿದು 80ಕ್ಕೂ ಅಧಿಕ ಕುರಿಗಳು ಹಾಗೂ ಮೇಕೆಗಳು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಕೊರವಿ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಪೂಜಾರಿ ಮತ್ತು ಅಣ್ಣಪ್ಪ ಪೂಜಾರಿ ಎಂಬುವರಿಗೆ ಸೇರಿದ್ದ ಕುರಿ ಹಾಗೂ ಮೇಕೆಗಳು ಕಳೆದ ರಾತ್ರಿ ಸುರಿದ ಮಳೆಯಿಂದ ಏಕಾಏಕಿ ಗೋಡೆ ಕುಸಿದ ಪರಿಣಾಮ ಕಲ್ಲಿನಡಿ ಸಿಲುಕಿ ಮೃತಪಟ್ಟಿವೆ.

ಕಲಬುರಗಿಯಲ್ಲಿ ಮಳೆ ಆರ್ಭಟ; ಗೋಡೆ ಕುಸಿದು 80ಕ್ಕೂ ಅಧಿಕ ಕುರಿ, ಮೇಕೆಗಳ ಸಾವು
ಕುರಿ, ಮೇಕೆಗಳನ್ನು ಕಳೆದುಕೊಂಡು ಕಂಗಾಲಾದ ಕುಟುಂಬ
ಸಂಜಯ್ಯಾ ಚಿಕ್ಕಮಠ
| Edited By: |

Updated on: Sep 04, 2023 | 7:38 AM

Share

ಕಲಬುರಗಿ, ಸೆ.04: ಕಲಬುರಗಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮತ್ತೆ ಹೆಚ್ಚಾಗಿದೆ(Kalaburagi Rain). ನಿನ್ನೆ ಮಧ್ಯಾಹ್ನದಿಂದ ಬಿಡುವು ನೀಡಿದ್ದ ವರುಣದೇವ ಇಂದು ಬೆಳ್ಳೆಂಬೆಳಗ್ಗೆಯಿಂದಲೇ ಆರ್ಭಟ ಜೋರು ಮಾಡಿದ್ದಾನೆ. ಇಂದು ಕೂಡಾ ಕಲಬುರಗಿ ಜಿಲ್ಲೆಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಕಲಬುರಗಿ ನಗರ ಸೇರಿ ಹಲವೆಡೆ ಜಿಟಿಜಿಟಿ ಮಳೆಯಾಗುತ್ತಿದೆ. ಇದರ ನಡುವೆ ಮಳೆಯಿಂದ ಗೋಡೆ ಕುಸಿದು 80ಕ್ಕೂ ಅಧಿಕ ಕುರಿಗಳು ಹಾಗೂ ಮೇಕೆಗಳು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಕೊರವಿ ಗ್ರಾಮದಲ್ಲಿ ನಡೆದಿದೆ.

ಮಲ್ಲಪ್ಪ ಪೂಜಾರಿ ಮತ್ತು ಅಣ್ಣಪ್ಪ ಪೂಜಾರಿ ಎಂಬುವರಿಗೆ ಸೇರಿದ್ದ ಕುರಿ ಹಾಗೂ ಮೇಕೆಗಳು ಕಳೆದ ರಾತ್ರಿ ಸುರಿದ ಮಳೆಯಿಂದ ಏಕಾಏಕಿ ಗೋಡೆ ಕುಸಿದ ಪರಿಣಾಮ ಕಲ್ಲಿನಡಿ ಸಿಲುಕಿ ಮೃತಪಟ್ಟಿವೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಗೋಡೆ ತೇವಗೊಂಡಿತ್ತು. ಹೀಗಾಗಿ ನಿನ್ನೆ ಸಂಜೆ ಮನೆಯೊಂದರಲ್ಲಿ ಮೇಕೆ ಹಾಗೂ ಕುರಿಗಳನ್ನು ಒಂದೆಡೆ ಕೂಡಿಹಾಕಲಾಗಿತ್ತು. ಆದ್ರೆ ಗೋಡೆ ಕುಸಿದು ಕುರಿ, ಮೇಕೆಗಳು ಮೃತಪಟ್ಟಿವೆ. ಲಕ್ಷಾಂತರ ಮೌಲ್ಯದ ಕುರಿ, ಮೇಕೆಗಳನ್ನು ಕಳೆದುಕೊಂಡ ಕುಟುಂಬ ಕಂಗಾಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಡೆಂಗ್ಯೂ ರೋಗ ಪ್ರಕರಣ ಸಂಖ್ಯೆಯಲ್ಲಿ ಏರಿಕೆ; ಬೆಂಗಳೂರಿನಲ್ಲಿ ಅಧಿಕ ಬಾಧಿತರು

ಸಿಡಿಲು ಬಡಿದು ಮಹಿಳೆ ಸಾವು

ಸಿಡಿಲು ಬಡಿದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮೂವತ್ತೈದು ವರ್ಷದ ಕಲಾವತಿ ಅನ್ನೋ ಮಹಿಳೆ, ನಿನ್ನೆ ಸಂಜೆ ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾಳೆ. ಇನ್ನೋರ್ವ ಮಹಿಳೆ ಘಟನೆಯಲ್ಲಿ ಗಾಯಗೊಂಡಿದ್ದು, ಆಕೆಯನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಫಜಲಪುರ ತಹಶಿಲ್ದಾರ್ ಸಂಜೀವ್ ಕುಮಾರ್ ದಾಸರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ವರುಣ ಬಾರದೇ ಇದ್ದಾಗ ಕಂಗಾಲಾಗಿದ್ದ ಜನರು, ಸೆಪ್ಟಂಬರ್ ತಿಂಗಳಲ್ಲಿ ವರುಣ ಅಬ್ಬರಿಸಿ ಬೊಬ್ಬೆರೆಯಲು ಆರಂಭಿಸಿದ್ದರಿಂದ ಒಂದಡೆ ಸಂತಸ ಪಟ್ಟರೆ, ಮತ್ತೊಂದಡೆ ಮಳೆಯಿಂದ ತೊಂದರೆಗಳಿಗೆ ಕೂಡಾ ಸಿಲುಕುತ್ತಿದ್ದಾರೆ.

ಕಲಬುರಗಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ