AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಹಿಜಾಬ್‌ಗೆ ಅಡ್ಡಿಪಡಿಸಿದ್ರೆ ತುಂಡುತುಂಡು ಮಾಡುತ್ತೇವೆ ಮುಕ್ರಂ ಖಾನ್ ವಿವಾದಾತ್ಮಕ ಹೇಳಿಕೆ: ಖಂಡನೆ, ಧರಣಿ

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಕಲಬುರಗಿ‌ ಜಿಲ್ಲೆ‌ ಸೇಡಂ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಹಿಜಾಬ್ ಬೆಂಬಲಿಸಿ ನಡೆದ ಪ್ರತಿಭಟನೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನೀವು ಯಾವ ಬಟ್ಟೆಯಾದ್ರು ಧರಿಸಿ, ಆದ್ರೆ ನಮ್ಮ ಹಿಜಾಬ್ಗೆ ಯಾಕೆ ಅಡ್ಡಿ ಅಂತ ಪ್ರಶ್ನಿಸಿದ್ದರು.

ಮಕ್ಕಳ ಹಿಜಾಬ್‌ಗೆ ಅಡ್ಡಿಪಡಿಸಿದ್ರೆ ತುಂಡುತುಂಡು ಮಾಡುತ್ತೇವೆ ಮುಕ್ರಂ ಖಾನ್ ವಿವಾದಾತ್ಮಕ ಹೇಳಿಕೆ: ಖಂಡನೆ, ಧರಣಿ
ಮಕ್ಕಳ ಹಿಜಾಬ್‌ಗೆ ಅಡ್ಡಿಪಡಿಸಿದ್ರೆ ತುಂಡುತುಂಡು ಮಾಡುತ್ತೇವೆ ಮುಕ್ರಂ ಖಾನ್ ವಿವಾದಾತ್ಮಕ ಹೇಳಿಕೆ: ಖಂಡನೆ, ಧರಣಿ
TV9 Web
| Updated By: ಆಯೇಷಾ ಬಾನು|

Updated on: Feb 17, 2022 | 8:34 AM

Share

ಕಲಬುರಗಿ: ಶಾಲೆ-ಕಾಲೇಜುಗಳಲ್ಲಿ ಹಿಜಾಬ್(Hijab) ವಿವಾದ ಮುಂದುವರೆದಿದೆ. ನಿನ್ನೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯರು ಹಿಜಾಬ್, ಬುರ್ಖಾ ತೆಗೆಯಲ್ಲವೆಂದು ಪಟ್ಟು ಹಿಡಿದಿದ್ದರು. ಅದೆಷ್ಟೋ ವಿದ್ಯಾರ್ಥಿನಿಯರು ತರಗತಿಗೆ ಹೋಗದೆ ಮನೆಗೆ ವಾಪಸಾಗಿದ್ದರು. ಇದರ ನಡುವೆ ‘ಮಕ್ಕಳ ಹಿಜಾಬ್‌ಗೆ ಅಡ್ಡಿಪಡಿಸಿದ್ರೆ ತುಂಡುತುಂಡು ಮಾಡುತ್ತೇವೆ’ ಎಂದು ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದು ವಿರೋಧ ವ್ಯಕ್ತವಾಗಿದೆ.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಕಲಬುರಗಿ‌ ಜಿಲ್ಲೆ‌ ಸೇಡಂ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಹಿಜಾಬ್ ಬೆಂಬಲಿಸಿ ನಡೆದ ಪ್ರತಿಭಟನೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನೀವು ಯಾವ ಬಟ್ಟೆಯಾದ್ರು ಧರಿಸಿ, ಆದ್ರೆ ನಮ್ಮ ಹಿಜಾಬ್ಗೆ ಯಾಕೆ ಅಡ್ಡಿ ಅಂತ ಪ್ರಶ್ನಿಸಿದ್ದರು. ‘ಮಕ್ಕಳ ಹಿಜಾಬ್‌ಗೆ ಅಡ್ಡಿಪಡಿಸಿದ್ರೆ ತುಂಡುತುಂಡು ಮಾಡುತ್ತೇವೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮುಕ್ರಂ ಖಾನ್ ಹೇಳಿಕೆಗೆ ಹಿಂದೂಪರ‌ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ.

ಹಿಂದೂಪರ‌ ಸಂಘಟನೆಗಳು ಕೈ ಮುಖಂಡ ಮುಕ್ರಂ ಖಾನ್ ಹೇಳಿಕೆ ಖಂಡಿಸಿ ಕಲಬುರಗಿ ಜಿಲ್ಲೆಯ ಸೇಡಂ ಪೊಲೀಸ್ ಠಾಣೆ ಎದುರು ನಿನ್ನೆ ಪ್ರತಿಭಟನೆ ನಡೆಸಿದ್ದಾರೆ. ಮುಕ್ರಂ ಖಾನ್ ವಿರುದ್ಧ ದೂರು ದಾಖಲಿಸಬೇಕು ಅಂತ ಆಗ್ರಹಿಸಿದ್ದಾರೆ. ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಇನ್ನು ಈ ಸಂಬಂಧ ಜಿಲ್ಲಾ ಸಂಘಟನಾ ಕಾರ್ಯದರ್ಶಿ,  ವಿಹೆಚ್​ಪಿ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ವಿವಾದಾತ್ಮಕ ಹೇಳಿಕೆ ನೀಡಿರೋ ಮುಕ್ರಂ ಖಾನ್ ವಿರುದ್ಧ ಎಫ್​ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು. ದ್ವೇಷ ಬಿತ್ತುವ ಹೇಳಿಕೆಯನ್ನು ನೀಡಿದವರನ್ನು ಸುಮ್ಮನೆ ಬಿಡಬಾರದು. ನಮಗೂ ಮಾತನಾಡಲಿಕ್ಕೆ ಬರುತ್ತದೆ. ಆದ್ರೆ ನಮ್ಮ ಮಾತುಗಳು ಅಶಾಂತಿಗೆ ಕಾರಣವಾಗಬಾರದು ಅಂತ ಸುಮ್ಮನಿದ್ದೇವೆ ಎಂದರು.

ಇದನ್ನೂ ಓದಿ: ಅವರಿಬ್ಬರೂ ಕುಚುಕು ಗೆಳೆಯರಾಗಿದ್ದರೂ ಒಬ್ಬ ಮತ್ತೊಬ್ಬನನ್ನು ಸಾಯಿಸಿದ, ಕಾರಣ ಎನು ಗೊತ್ತಾ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ