AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟ್ಟಿಗೆ ಎಣ್ಣೆ ಹಾಕುವಾಗ ಗಲಾಟೆ; ಇಟ್ಟಿಗೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ

ಆ ದಂಪತಿ ಮಕ್ಕಳೊಂದಿಗೆ ಸುಖವಾಗಿ ಸಂಸಾರ ಮಾಡುತ್ತಿದ್ದರು. ಒಟ್ಟೊಟ್ಟಿಗೆ ಒಂದೆ ಸ್ಥಳದಲ್ಲೆ ಕೆಲಸ ಮಾಡ್ತಿದ್ದ ಆ ದಂಪತಿ ರಾತ್ರಿ ಒಟ್ಟೊಟ್ಟಿಗೆ ಕಂಠಪೂರ್ತಿ ಎಣ್ಣೆ ಹೊಡೆಯುತ್ತಿದ್ದರು. ಆದರೆ ಕಳೆದ ರಾತ್ರಿ ಸಹ ಒಟ್ಟಿಗೆ ಕಂಠಪೂರ್ತಿ ಎಣ್ಣೆ ಹೊಡೆದಿದ್ದಾಗ ಗಂಡ ಪತ್ನಿಯನ್ನ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಕಲಬುರಗಿಯಲ್ಲೊಂದು ಭಯಾನಕ ಹತ್ಯೆ ನಡೆದಿದೆ.

ಒಟ್ಟಿಗೆ ಎಣ್ಣೆ ಹಾಕುವಾಗ ಗಲಾಟೆ; ಇಟ್ಟಿಗೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Oct 04, 2024 | 8:50 AM

Share

ಕಲಬುರಗಿ, ಅ.04: ಕಲಬುರಗಿ ನಗರ ಹೊರವಲಯದ ಶಹಬಾದ್ ರಸ್ತೆಯ ಇಟ್ಟಿಗೆ ಭಟ್ಟಿಯಲ್ಲಿ ಭೀಕರ ಕೊಲೆ (Murder) ನಡೆದಿದೆ. ಪತಿಯೇ ಪತ್ನಿಯನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ (Husband Wife Fight). ಆಳಂದ ತಾಲೂಕಿನ ಕೊಡಲಹಂಗರಗಾ ಗ್ರಾಮದ ಪ್ರಿಯಾಂಕಾಳನ್ನ (35) ಅದೇ ತಾಲೂಕಿನ ನಿಂಬರ್ಗಾ ಗ್ರಾಮದ ವಕೀಲ್ ರಾಠೋಡ್ ಜೊತೆ ಮದ್ವೆ ಮಾಡಿಕೊಡಲಾಗಿತ್ತು. ಇವರು ಮಕ್ಕಳೊಂದಿಗೆ ಶಹಬಾದ್ ರಸ್ತೆಯಲ್ಲಿನ ಇಟ್ಟಿಗೆ ಭಟ್ಟಿ ಬಳಿ ಪುಟ್ಟದೊಂದು ಮನೆ ಮಾಡಿಕೊಂಡಿದ್ದರು. ಹಿಗೇ ಅದೇ ಇಟ್ಟಿಗೆ ಭಟ್ಟಿಯಲ್ಲಿ ಒಟ್ಟೊಟ್ಟಿಗೆ ಕೆಲಸ ಮಾಡ್ತಿದ್ದ ದಂಪತಿ ನಿತ್ಯವೂ ಕಂಠಪೂರ್ತಿ ಕುಡಿಯುತ್ತಿದ್ದರು. ಅದರಂತೆ ಕಳೆದ ರಾತ್ರಿ ಸಹ ಇಬ್ಬರು ಎಣ್ಣೆ ಹೊಡೆದಿದ್ದಾರೆ. ಎಣ್ಣೆ ಮತ್ತಿನಲ್ಲಿ ಇಬ್ಬರ ಮಧ್ಯೆ ಜಗಳ ಶುರುವಾಗಿದ್ದು, ಜಗಳ ವಿಕೋಪಕ್ಕೆ ಹೋಗಿ ಅಲ್ಲೆ ಇದ್ದ ಇಟ್ಟಿಗೆಯಿಂದ ಪತ್ನಿ ಪ್ರಿಯಾಂಕಾಳ ತಲೆಗೆ ಜಜ್ಜಿ ಜಜ್ಜಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಪತಿ ವಕೀಲ್ ರಾಠೋಡ್ ಮತ್ತು ಪತ್ನಿ ಪ್ರಿಯಾಂಕಾ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಾ, ಸಂಜೆಯಾದರೆ ಸಾಕು ರಾಠೋಡ್ ಮನೆಗೆ ಎಣ್ಣೆ ತರುತ್ತಿದ್ದನು. ಬಳಿಕ ಇಬ್ಬರೂ ಒಟ್ಟೊಟ್ಟಿಗೆ ಎಣ್ಣೆ ಹೊಡೆದು ಇಬ್ಬರು ಮಕ್ಕಳನ್ನ ನಿರ್ಲಕ್ಷ್ಯ ಮಾಡುತ್ತಿದ್ದರಿಂದ, ಕೆಲ ದಿನಗಳ ಹಿಂದೆ ಮಕ್ಕಳನ್ನ ಅಜ್ಜ ಅಜ್ಜಿ ಬಳಿ ಬಿಟ್ಟು ಬಂದಿದ್ದರು. ಇಷ್ಟಾದರೂ ಸಹ ಇಬ್ಬರ ಎಣ್ಣೆ ದಾಹ ಮಾತ್ರ ತೀರುತ್ತಿರಲಿಲ್ಲ. ಅದರಂತೆ ಕಳೆದ ರಾತ್ರಿ ಎಣ್ಣೆ ಪಾರ್ಟಿ ಶುರುವಾದಾಗ, ಎಣ್ಣೆ ಕಡಿದು ಬಿದ್ದಿರೋ ವಿಚಾರಕ್ಕೆ ಇಬ್ಬರ ಮಧ್ಯ ಗಲಾಟೆ ಆಗಿದೆ. ಆ ವೇಳೆ ಅಕ್ಕಪಕ್ಕದವರು ಸಹ ಇವರ ಗಲಾಟೆ ದಿನಾಲೂ ಇದ್ದಿದ್ದೆ ಅಂತಾ ಅವರ ಪಾಡಿಗೆ ಅವರಿದ್ದರು.

ಇದನ್ನೂ ಓದಿ: ಅಣ್ಣನಿಂದಲೇ ಅಪ್ರಾಪ್ತ ಸಹೋದರಿ ಮೇಲೆ ಅತ್ಯಾಚಾರ, ಆಕೆ ಈಗ ಗರ್ಭಿಣಿ

ಜಗಳದ ನಡುವೆ ಪತಿ ವಕೀಲ್ ರಾಠೋಡ್, ನಶೆಯಲ್ಲಿ ಪತ್ನಿಗೆ ಇಟ್ಟಿಗೆಯಿಂದ ಮನಬಂದಂತೆ ಥಳಿಸಿ ಕೊಲೆ ಮಾಡಿದ್ದಾನೆ. ಇನ್ನೂ ಮೃತದೇಹವನ್ನ ನಗರದ ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಇನ್ನೂ ಘಟನೆಗೆ ಸಂಬಂಧಿಸಿದಂತೆ ಆರೋಪಿ ಪತಿಯನ್ನ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಅದೆನೇ ಇರಲಿ ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸದೆ ಗಂಡ ಹೆಂಡ್ತಿ ಒಟ್ಟಿಗೆ ಎಣ್ಣೆ ಹೊಡೆದು ಜಗಳವಾಡಿಕೊಂಡಿದ್ದು ಪತ್ನಿ ಮೃತಪಟ್ಟಿದ್ದಾಳೆ. ಅಪ್ಪ-ಅಮ್ಮನ ಜಗಳಕ್ಕೆ ಮಕ್ಕಳಿಬ್ಬರು ಅನಾಥರಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ