AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ

ನಿಗಮ ಮಂಡಳಿಗಳಲ್ಲಿ ಖಾಲಿ ಇರುವ 750 ಹುದ್ದೆಗಳಿಗೆ ಕೆಇಎ ನಡೆಸಿದ ಪರೀಕ್ಷೆಯಲ್ಲಿ ಬ್ಲೂಟೂತ್ ಮೂಲಕ ನಕಲು ಮಾಡಿ ಅಕ್ರಮ ಎಸಗಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಂಬಂಧ ಕಲಬುರಗಿ ಜಿಲ್ಲೆಯ ಅಫಜಲಪುರ ಠಾಣೆಯಲ್ಲಿ ಆರ್​ಡಿ ಪಾಟೀಲ್ ಸೇರಿ 9 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, 7 ಮಂದಿಯನ್ನು ಬಂಧಿಸಲಾಗಿತ್ತು. ಇದೀಗ ಮತ್ತೊಬ್ಬನ ಬಂಧನವಾಗಿದೆ.

ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ
ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯ ಬಂಧನ (ಸಾಂದರ್ಭಿಕ ಚಿತ್ರ)Image Credit source: bit.ly/3jzjvwe
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: Rakesh Nayak Manchi

Updated on: Nov 07, 2023 | 9:30 AM

ಕಲಬುರಗಿ, ನ.7: ನಿಗಮ ಮಂಡಳಿಗಳಲ್ಲಿ ಖಾಲಿ ಇರುವ 750 ಹುದ್ದೆಗಳಿಗೆ ಕೆಇಎ (KEA) ನಡೆಸಿದ ಪರೀಕ್ಷೆಯಲ್ಲಿ ಅಭ್ಯರ್ಥಿಗೆ ಬ್ಲುಟೂತ್ ನೆರವು ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಅಫಜಲಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಬ್ಲೂಟೂತ್‌ ನೆರವು ನೀಡಿ ಎಸ್ಕೇಪ್ ಆಗಿದ್ದ ಆಸೀಫ್ ಬಂಧಿತ ಆರೋಪಿ. ಅಕ್ರಮ ಪ್ರಕರಣ ಸಂಬಂಧ ಅಫಜಲಪುರ ಠಾಣೆಯಲ್ಲಿ ಪ್ರಮುಖ ಆರೋಪಿ ಆರ್​ಡಿ ಪಾಟೀಲ್ ಸೇರಿದಂತೆ 9 ಮಂದಿ ವಿರುದ್ದ ಎಫ್​ಐಆರ್ ದಾಖಲಾಗಿದೆ. ಈ ವರೆಗೆ ಎಂಟು ಮಂದಿಯನ್ನು ಬಂಧಿಸಿದ ಪೊಲೀಸರು, ಕಿಂಗ್ ಪಿನ್ ಪಾಟೀಲ್ ಬಂಧನಕ್ಕೆ ತೀವ್ರಶೋಧ ನಡೆಸುತ್ತಿದ್ದಾರೆ.

ಪರೀಕ್ಷಾರ್ಥಿಗಳಿಗೆ ಬ್ಲೂಟುತ್ ಡಿವೈಸ್ ನೀಡಿದ್ದ ಆರ್​ಡಿ ಪಾಟೀಲ್, ಲಕ್ಷಾಂತರ ರೂಪಾಯಿ ಪಡೆದಿದ್ದನು. ಸದ್ಯ ಕಿಂಗ್ ಫಿನ್ ಪತ್ತೆಗಾಗಿ ನೆರೆಯ ಮಹಾರಾಷ್ಟ್ರದಲ್ಲಿ ಕಲಬುರಗಿ ಪೊಲೀಸರು ಹುಡುಕಾಟ‌ ನಡೆಸುತ್ತಿದ್ದಾರೆ. ಆರ್​ಡಿ ಬಲೆಗೆ ಬಿದ್ದರೆ ಪ್ರಕರಣದ ಅಸಲಿ ಸತ್ಯ ಹೊರಬರಲಿದೆ.

ಇದನ್ನೂ ಓದಿ: ಕೆಇಎ ಪರೀಕ್ಷಾ ಅಕ್ರಮ: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ, ಸರ್ಕಾರ ಎಂಬ ಹೆಸರಿನ ಮೇಲೆ ಅಭ್ಯರ್ಥಿಗಳಿಗೆ ಫೋನ್ ಕರೆ

ಪ್ರಶ್ನೆ ಪತ್ರಿಕೆ ಸೋರಿಕೆ ಆಗಿತ್ತೋ ಇಲ್ಲವೋ ಎನ್ನೋದು ಬಹಿರಂಗವಾಗುತ್ತದೆ. ಅಲ್ಲದೇ ಎಷ್ಟು ಜನರಿಗೆ ಬ್ಲುಟೂತ್ ಒದಗಿಸಿದ್ದ ಎಂಬ ಸತ್ಯ ಕೂಡ ಬಹಿರಂಗ ಆಗಲಿದೆ. ಹೀಗಾಗಿ ಆರ್ ಡಿ ಪಾಟೀಲ್ ಬಂಧನಕ್ಕೆ ಪೊಲೀಸರ ಮೇಲೆ ಒತ್ತಡ ಆರಂಭವಾಗಿದೆ.

ಆರ್​ಡಿ ಪಾಟೀಲ್​ಗೆ ಕಂಪೌಂಡ್ ಹಾರುವ ಚಟ

ಪ್ರಕರಣದ ಪ್ರಮುಖ ಆರೋಪಿ ಆರ್ ಡಿ ಪಾಟೀಲ್​ ಪೊಲೀಸರು ದಾಳಿ ನಡೆಸಿದಾಗ ಕಂಪೌಂಡ್ ಹಾರಿ ಎಸ್ಕೇಪ್ ಆಗುವ ಚಟ ಹೊಂದಿದ್ದಾನೆ. ಈ ಹಿಂದೆ ಪಿಎಸ್​ಐ ಪರೀಕ್ಷೆ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದಾಗಲು ಕೂಡಾ ಇದೇ ರೀತಿ ಅಧಿಕಾರಿಗಳನ್ನು ತಳ್ಳಿ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದ.

ಪೊಲೀಸರ ಜೊತೆ ಚೆಲ್ಲಾಟವಾಡುವ ಚಾಳಿ ಬೆಳಸಿಕೊಂಡಿಡುವ ಕಿಂಗ್ ಪಿನ್ ಆರ್​ಡಿ ಪಾಟೀಲ್, ಪೊಲೀಸರ ಕೈಗೆ ಸಿಕ್ಕರೆ ಕಂಬಿ ಹಿಂದೆ ಹೋಗಬೇಕಾಗುತ್ತದೆ. ಸಾಕ್ಷಿಗಳು ನಾಶವಾಗಲಿ‌ ಅನ್ನೋ ಉದ್ದೇಶದಿಂದ ಪಾಟೀಲ್ ಈ ರೀತಿ ಕಳ್ಳಾಟವಾಡುತ್ತಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ