ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ

ನಿಗಮ ಮಂಡಳಿಗಳಲ್ಲಿ ಖಾಲಿ ಇರುವ 750 ಹುದ್ದೆಗಳಿಗೆ ಕೆಇಎ ನಡೆಸಿದ ಪರೀಕ್ಷೆಯಲ್ಲಿ ಬ್ಲೂಟೂತ್ ಮೂಲಕ ನಕಲು ಮಾಡಿ ಅಕ್ರಮ ಎಸಗಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಂಬಂಧ ಕಲಬುರಗಿ ಜಿಲ್ಲೆಯ ಅಫಜಲಪುರ ಠಾಣೆಯಲ್ಲಿ ಆರ್​ಡಿ ಪಾಟೀಲ್ ಸೇರಿ 9 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, 7 ಮಂದಿಯನ್ನು ಬಂಧಿಸಲಾಗಿತ್ತು. ಇದೀಗ ಮತ್ತೊಬ್ಬನ ಬಂಧನವಾಗಿದೆ.

ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ
ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯ ಬಂಧನ (ಸಾಂದರ್ಭಿಕ ಚಿತ್ರ)Image Credit source: bit.ly/3jzjvwe
Follow us
| Updated By: Rakesh Nayak Manchi

Updated on: Nov 07, 2023 | 9:30 AM

ಕಲಬುರಗಿ, ನ.7: ನಿಗಮ ಮಂಡಳಿಗಳಲ್ಲಿ ಖಾಲಿ ಇರುವ 750 ಹುದ್ದೆಗಳಿಗೆ ಕೆಇಎ (KEA) ನಡೆಸಿದ ಪರೀಕ್ಷೆಯಲ್ಲಿ ಅಭ್ಯರ್ಥಿಗೆ ಬ್ಲುಟೂತ್ ನೆರವು ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಅಫಜಲಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಬ್ಲೂಟೂತ್‌ ನೆರವು ನೀಡಿ ಎಸ್ಕೇಪ್ ಆಗಿದ್ದ ಆಸೀಫ್ ಬಂಧಿತ ಆರೋಪಿ. ಅಕ್ರಮ ಪ್ರಕರಣ ಸಂಬಂಧ ಅಫಜಲಪುರ ಠಾಣೆಯಲ್ಲಿ ಪ್ರಮುಖ ಆರೋಪಿ ಆರ್​ಡಿ ಪಾಟೀಲ್ ಸೇರಿದಂತೆ 9 ಮಂದಿ ವಿರುದ್ದ ಎಫ್​ಐಆರ್ ದಾಖಲಾಗಿದೆ. ಈ ವರೆಗೆ ಎಂಟು ಮಂದಿಯನ್ನು ಬಂಧಿಸಿದ ಪೊಲೀಸರು, ಕಿಂಗ್ ಪಿನ್ ಪಾಟೀಲ್ ಬಂಧನಕ್ಕೆ ತೀವ್ರಶೋಧ ನಡೆಸುತ್ತಿದ್ದಾರೆ.

ಪರೀಕ್ಷಾರ್ಥಿಗಳಿಗೆ ಬ್ಲೂಟುತ್ ಡಿವೈಸ್ ನೀಡಿದ್ದ ಆರ್​ಡಿ ಪಾಟೀಲ್, ಲಕ್ಷಾಂತರ ರೂಪಾಯಿ ಪಡೆದಿದ್ದನು. ಸದ್ಯ ಕಿಂಗ್ ಫಿನ್ ಪತ್ತೆಗಾಗಿ ನೆರೆಯ ಮಹಾರಾಷ್ಟ್ರದಲ್ಲಿ ಕಲಬುರಗಿ ಪೊಲೀಸರು ಹುಡುಕಾಟ‌ ನಡೆಸುತ್ತಿದ್ದಾರೆ. ಆರ್​ಡಿ ಬಲೆಗೆ ಬಿದ್ದರೆ ಪ್ರಕರಣದ ಅಸಲಿ ಸತ್ಯ ಹೊರಬರಲಿದೆ.

ಇದನ್ನೂ ಓದಿ: ಕೆಇಎ ಪರೀಕ್ಷಾ ಅಕ್ರಮ: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ, ಸರ್ಕಾರ ಎಂಬ ಹೆಸರಿನ ಮೇಲೆ ಅಭ್ಯರ್ಥಿಗಳಿಗೆ ಫೋನ್ ಕರೆ

ಪ್ರಶ್ನೆ ಪತ್ರಿಕೆ ಸೋರಿಕೆ ಆಗಿತ್ತೋ ಇಲ್ಲವೋ ಎನ್ನೋದು ಬಹಿರಂಗವಾಗುತ್ತದೆ. ಅಲ್ಲದೇ ಎಷ್ಟು ಜನರಿಗೆ ಬ್ಲುಟೂತ್ ಒದಗಿಸಿದ್ದ ಎಂಬ ಸತ್ಯ ಕೂಡ ಬಹಿರಂಗ ಆಗಲಿದೆ. ಹೀಗಾಗಿ ಆರ್ ಡಿ ಪಾಟೀಲ್ ಬಂಧನಕ್ಕೆ ಪೊಲೀಸರ ಮೇಲೆ ಒತ್ತಡ ಆರಂಭವಾಗಿದೆ.

ಆರ್​ಡಿ ಪಾಟೀಲ್​ಗೆ ಕಂಪೌಂಡ್ ಹಾರುವ ಚಟ

ಪ್ರಕರಣದ ಪ್ರಮುಖ ಆರೋಪಿ ಆರ್ ಡಿ ಪಾಟೀಲ್​ ಪೊಲೀಸರು ದಾಳಿ ನಡೆಸಿದಾಗ ಕಂಪೌಂಡ್ ಹಾರಿ ಎಸ್ಕೇಪ್ ಆಗುವ ಚಟ ಹೊಂದಿದ್ದಾನೆ. ಈ ಹಿಂದೆ ಪಿಎಸ್​ಐ ಪರೀಕ್ಷೆ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದಾಗಲು ಕೂಡಾ ಇದೇ ರೀತಿ ಅಧಿಕಾರಿಗಳನ್ನು ತಳ್ಳಿ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದ.

ಪೊಲೀಸರ ಜೊತೆ ಚೆಲ್ಲಾಟವಾಡುವ ಚಾಳಿ ಬೆಳಸಿಕೊಂಡಿಡುವ ಕಿಂಗ್ ಪಿನ್ ಆರ್​ಡಿ ಪಾಟೀಲ್, ಪೊಲೀಸರ ಕೈಗೆ ಸಿಕ್ಕರೆ ಕಂಬಿ ಹಿಂದೆ ಹೋಗಬೇಕಾಗುತ್ತದೆ. ಸಾಕ್ಷಿಗಳು ನಾಶವಾಗಲಿ‌ ಅನ್ನೋ ಉದ್ದೇಶದಿಂದ ಪಾಟೀಲ್ ಈ ರೀತಿ ಕಳ್ಳಾಟವಾಡುತ್ತಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ