AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರ ಹತ್ಯೆ, ಅನೈತಿಕ ಸಂಬಂಧದ ವಾಸನೆ, ಫೋನ್ ಬಂತು ಅಂತಾ ಮನೆಯಿಂದ ಹೊರಹೋಗಿದ್ದ!

Illicit relation: ಹತ್ಯೆಗೀಡಾದ ಯುವಕ ಸಂತೋಷನಿಗೆ ಮದುವೆ ನಿಶ್ಚಿತಾರ್ಥ ಆಗಿತ್ತಂತೆ. ಆದ್ರೆ ಮದುವೆ ಮಾಡಿಕೊಂಡು ವೈವಾಹಿಕ ಜೀವನ ನಡೆಸಬೇಕಿದ್ದ ಸಂತೋಷ್ ಕೊಲೆಯಾಗಿದ್ದಾನೆ. ಇನ್ನು ಸಂತೋಷ್ ಕೊಲೆಯ ಹಿಂದೆ, ಮಹಿಳೆಯ ಹೆಸರು ಹರಿದಾಡುತ್ತಿದೆ. 

ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರ ಹತ್ಯೆ, ಅನೈತಿಕ ಸಂಬಂಧದ ವಾಸನೆ, ಫೋನ್ ಬಂತು ಅಂತಾ ಮನೆಯಿಂದ ಹೊರಹೋಗಿದ್ದ!
ಮದುವೆ ನಿಶ್ಚಯವಾಗಿದ್ದ ಯುವಕ ಬರ್ಬರ ಹತ್ಯೆ
TV9 Web
| Edited By: |

Updated on:Apr 10, 2023 | 10:18 AM

Share

ಆತ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಆದ್ರೆ ಮೊನ್ನೆ ಶನಿವಾರ ಯಾರದ್ದೋ ಪೋನ್ ಬಂತು ಅಂತ ಮನೆಯಿಂದ ಹೊರಹೋಗಿದ್ದ. ಆದ್ರೆ ನಿನ್ನೆ ಭಾನುವಾರ ಮುಂಜಾನೆ ಶವವಾಗಿ ಪತ್ತೆಯಾಗಿದ್ದಾನೆ. ಮದುವೆ ನಿಶ್ಚಯವಾಗಿದ್ದ (Wedding) ಯುವಕ ಬರ್ಬರ ಕೊಲೆಯಾಗಿದ್ದಾನೆ (Murder). ಯುವಕನ ಕೊಲೆಯ ಹಿಂದೆ ಅನೈತಿಕ ಸಂಬಂಧದ ವಾಸನೆ ಹರಿದಾಡುತ್ತಿದೆ. ಮತ್ತೊಂದಡೆ ಮನೆಗೆ ಆಧಾರವಾಗಿದ್ದ ಯುವಕನನ್ನು (Youth) ಕಳೆದುಕೊಂಡು ಗೋಳಾಡುತ್ತಿರುವ ಮಹಿಳೆಯರು. ದಿಕ್ಕೇ ತೋಚದಂತೆ ನಿಂತಿರುವ ಕುಟುಂಬದವರು. ಇಂತಹದೊಂದು ದೃಶ್ಯ ಕಂಡುಬಂದಿದ್ದು ಕಲಬುರಗಿ ಜಿಲ್ಲೆಯ ಜೇವರ್ಗಿ (Jevargi) ತಾಲೂಕಿನ ಸೊನ್ನ ಗ್ರಾಮದಲ್ಲಿ. ಅಷ್ಟಕ್ಕೂ ಇವರ ನೋವಿಗೆ ಕಾರಣ ಯುವಕನೋರ್ವನ ಕೊಲೆ (Kalaburgi News).

ಹೌದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದ ಜನರು ಬೆಚ್ಚಿಬಿದ್ದಿದ್ದರು. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿತ್ತು. ಸಮೀಪ ಹೋಗಿ ನೋಡಿದಾಗ ಗೊತ್ತಾಗಿದ್ದು ಅದು ಇದೇ ಸೊನ್ನ ಗ್ರಾಮದ ಸಂತೋಷ್ ಹೆಗಡೆ ಅನ್ನೋ ಯುವಕನದ್ದು ಅನ್ನೋದು. ಹೌದು 25 ವರ್ಷದ ಸಂತೋಷ್ ಶನಿವಾರ ಮುಂಜಾನೆ ಮನೆಯಿಂದ ಹೊರಹೋಗಿದ್ದ. ಯಾರೋ ಪೋನ್ ಮಾಡಿದ್ದರು. ಹೋಗಿ ಬರ್ತೇನೆ ಅಂತ ಹೇಳಿ ಸಂತೋಷ್ ಹೋಗಿದ್ದ. ನಂತರ ಮಧ್ಯಾಹ್ನ ಕರೆ ಮಾಡಿದಾಗ, ಫೋನ್ ರಿಸೀವ್ ಮಾಡಿದ್ದ ಸಂತೋಷ್. ಮನೆಗೆ ಬರ್ತೇನೆ ಅಂತಾನೂ ಹೇಳಿದ್ದನಂತೆ.

ಆದ್ರೆ ಸಂಜೆ ಕಾಲ್ ಮಾಡಿದಾಗ, ಸಂತೋಷ್ ಪೋನ್ ರಿಂಗ್ ಆಗುತ್ತಿದ್ದರೂ ಕೂಡಾ ಫೋನ್ ರಿಸೀವ್ ಮಾಡಿರಲಿಲ್ಲಾ. ಹೀಗಾಗಿ ಕುಟುಂಬದವರು ಎಲ್ಲಾದರೂ ಹೋಗಿರಬಹುದು, ಬರ್ತಾನೆ ಅಂತ ಸುಮ್ಮನಾಗಿದ್ದರು. ಆದ್ರೆ ರಾತ್ರಿ ಕಳೆದು ಬೆಳಗಾಗೋದರಲ್ಲಿ ಸಂತೋಷ್ ಶವವಾಗಿ ಪತ್ತೆಯಾಗಿದ್ದಾನೆ. ಸಂತೋಷ್ ನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಕೆಲವೆಡೆ ಮಾರಕಾಸ್ತ್ರದಿಂದ ಇರಿದಿದ್ದಾರೆ. ಕಲ್ಲಿನಿಂದ ಜಜ್ಜಿದ್ದಾರೆ. ಬರ್ಬರ ಕೊಲೆ ಮಾಡಿದ್ದ ದುಷ್ಕರ್ಮಿಗಳು, ಗ್ರಾಮದ ಹೊರವಲಯದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಶವ ಬಿಟ್ಟು ಪರಾರಿಯಾಗಿದ್ದಾರೆ.

ಇನ್ನು ಸಂತೋಷ್, ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ. ಕೆಲ ತಿಂಗಳ ಹಿಂದೆ ಮದುವೆ ನಿಶ್ಚಿತಾರ್ಥ ಕೂಡಾ ಆಗಿತ್ತಂತೆ. ಕೆಲವೇ ತಿಂಗಳಲ್ಲಿ ಮದುವೆ ಮಾಡಲು ಕುಟುಂಬದವರು ನಿರ್ಧಾರ ಮಾಡಿದ್ದರಂತೆ. ಆದ್ರೆ ಮದುವೆ ಮಾಡಿಕೊಂಡು ವೈವಾಹಿಕ ಜೀವನ ನಡೆಸಬೇಕಿದ್ದ ಸಂತೋಷ್ ಕೊಲೆಯಾಗಿದ್ದಾನೆ. ಇನ್ನು ಸಂತೋಷ್ ಕೊಲೆಯ ಹಿಂದೆ, ಮಹಿಳೆಯ ಹೆಸರು ಹರಿದಾಡುತ್ತಿದೆ.

ಮತ್ತಷ್ಟು ಓದಿ: Delhi: ಕರ್ಕಶ ಸಂಗೀತ ನಿಲ್ಲಿಸಲು ಕೇಳಿದ್ದಕ್ಕೆ ಗರ್ಭಿಣಿಯ ಮೇಲೆ ನಡೆಯಿತು ಗುಂಡಿನ ದಾಳಿ, ಸ್ಥಳದಲ್ಲೇ ಗರ್ಭಪಾತ

ಹೌದು ಇದೇ ಸೊನ್ನ ಗ್ರಾಮದಲ್ಲಿರುವ ವಿವಾಹಿತ ಮಹಿಳೆ, ಸಂತೋಷ್ ಜೊತೆ ಅನೈತಿಕ ಸಂಬಂಧ ಹೊಂದಿದ್ದಳಂತೆ. ಸಂತೋಷ್ ನಿಗೆ ಬೆದರಿಸಿ, ತನ್ನ ಜೊತೆ ಸಂಬಂಧ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ, ನಿಮ್ಮ ಮನೆಯವರಿಗೆ ನಮ್ಮ ಸಂಬಂಧದ ಬಗ್ಗೆ ಹೇಳ್ತೇನೆ ಅಂತ ಬೆದರಿಕೆ ಕೂಡಾ ಹಾಕಿದ್ದಳಂತೆ. ನಿನ್ನೆ ಅದೇ ಮಹಿಳೆಯೇ ಕಾಲ್ ಮಾಡಿ ಕರೆಸಿಕೊಂಡು ಕೊಲೆ ಮಾಡಿರಬಹುದು ಅನ್ನೋ ಅನುಮಾನ ಕುಟುಂಬದವರನ್ನು ಕಾಡುತ್ತಿದೆ.

ಸದ್ಯ ಸಂತೋಷ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕೊನೆಯ ಕರೆ ಮಾಡಿದವರು ಯಾರು, ನಂತರ ಯಾರೆಲ್ಲಾ ಸೇರಿ ಕೊಲೆ ಮಾಡಿದ್ದಾರೆ ಅನ್ನೋದನ್ನು ಪತ್ತೆ ಮಾಡುತ್ತಿದ್ದಾರೆ. ಆದ್ರೆ ಬಾಳಿ ಬದುಕಬೇಕಿದ್ದ ಯುವಕ, ಬರ್ಬರ ಕೊಲೆಯಾಗಿರುವದು ಮಾತ್ರ ದುರಂತವೇ ಸರಿ.

ವರದಿ: ಸಂಜಯ್, ಟಿವಿ9, ಕಲಬುರಗಿ

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:10 am, Mon, 10 April 23

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ