AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್ ಖರ್ಗೆ ಕೊಟ್ಟಿದ್ದ 6ನೇ ಗ್ಯಾರಂಟಿ ಜಾರಿ; ಕೆಕೆಆರ್​ಡಿಬಿಯಲ್ಲಿ ನಡೆದ ಭ್ರಷ್ಟಾಚಾರ ತನಿಖೆ ಆರಂಭ

ತಮ್ಮ ಸರ್ಕಾರ ಬಂದ್ರೆ, ಕಲಬುರಗಿಯಲ್ಲಿ ನಡೆದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡಿಸುತ್ತೇವೆ, ತಪ್ಪಿತಸ್ಥರ ವಿರುದ್ದ ಕ್ರಮ ಗ್ಯಾರಂಟಿ. ಇದು ನಾನು ಕೊಡುತ್ತಿರುವ ಆರನೇ ಗ್ಯಾರಂಟಿ ಎಂದು ಈ ಹಿಂದೆ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದೀಗ ಕಲಬುರಗಿಯಲ್ಲಿ ಆರನೇ ಗ್ಯಾರಂಟಿ ಜಾರಿಯಾಗಿದ್ದು, ಕೆಕೆಆರ್​ಡಿಬಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಅನ್ನಲಾದ ಭ್ರಷ್ಟಾಚಾರದ ಬಗ್ಗೆ ತನಿಖೆ ಆರಂಭವಾಗಿದೆ.

ಪ್ರಿಯಾಂಕ್ ಖರ್ಗೆ ಕೊಟ್ಟಿದ್ದ 6ನೇ ಗ್ಯಾರಂಟಿ ಜಾರಿ; ಕೆಕೆಆರ್​ಡಿಬಿಯಲ್ಲಿ ನಡೆದ ಭ್ರಷ್ಟಾಚಾರ ತನಿಖೆ ಆರಂಭ
ಕಲಬುರಗಿ
ಕಿರಣ್ ಹನುಮಂತ್​ ಮಾದಾರ್
|

Updated on: Jun 14, 2023 | 11:12 AM

Share

ಕಲಬುರಗಿ: ತಮ್ಮ ಸರ್ಕಾರ ಬಂದರೆ, ಕಲಬುರಗಿಯಲ್ಲಿ ನಡೆದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡಿಸುತ್ತೇವೆ, ತಪ್ಪಿತಸ್ಥರ ವಿರುದ್ದ ಕ್ರಮ ಗ್ಯಾರಂಟಿ. ಇದು ನಾನು ಕೊಡುತ್ತಿರುವ ಆರನೇ ಗ್ಯಾರಂಟಿ ಎಂದು ಈ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಹೇಳಿದ್ದರು. ಅದರಂತೆ ಇದೀಗ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿ(KKRDB) ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕ್ರತಿಕ ಸಂಘದ ಅಕ್ರಮಗಳ ತನಿಖೆಯನ್ನು ಅಧಿಕಾರಿಗಳ ತಂಡ ಆರಂಭಿಸಿದೆ. ಇದರಿಂದ ಭ್ರಷ್ಟಾಚಾರಿಗಳಿಗೆ ನಡುಕ ಶುರುವಾಗಿದೆ.

ಸಾವಿರಾರು ಕೋಟಿ ಹಗರಣ ಆರೋಪ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಗೆ ಬಿಡುಗಡೆ ಮಾಡಿ ವೆಚ್ಚ ಮಾಡಿರುವ 3000 ಕೋಟಿ ರೂ. ಅನುದಾನದಲ್ಲಿ ನಡೆದಿರುವ ವ್ಯಾಪಕ ಅಕ್ರಮಗಳು ಹಾಗೂ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಗಾಗಿ ಬಿಡುಗಡೆ ಮಾಡಿ ವೆಚ್ಚ ಮಾಡಲಾಗಿರುವ ರೂ 3.50 ಕೋಟಿ ಅನುದಾನವನ್ನು ಕೆ.ಟಿ.ಪಿ.ಪಿ ಕಾಯ್ದೆಯಡಿ ಪ್ರಕ್ರಿಯೆ ನಡೆಸದೆ ಹೆಚ್ಚುವರಿಯಾಗಿ ರೂ. 50 ಲಕ್ಷ ವೆಚ್ಚ ಮಾಡುವಲ್ಲಿ ನಡೆದ ಅಕ್ರಮ ಮತ್ತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕ್ರತಿಕ ಸಂಘಕ್ಕೆ ಬಿಡುಗಡೆ ಮಾಡಿ ವೆಚ್ಚ ಮಾಡಿರುವ ರೂ 300 ಕೋಟಿ ಅನುದಾನದಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ದೂರುಗಳು ಬಂದ ಹಿನ್ನೆಲೆ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ:3 ಇಲಾಖೆ,‌ 50ಕೋಟಿ ರೂ.ಗೂ ಅಧಿಕ ಅನುದಾನ: ಕೆರೆ ಅಭಿವೃದ್ಧಿ ಹೆಸರಲ್ಲಿ ಸಿಟಿ ರವಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ: ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್

ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತನಿಖೆ ನಡೆಸುವಂತೆ ಕೋರಿದ್ದ ಸಚಿವ ಪ್ರಿಯಾಂಕ್ ಖರ್ಗೆ

ಹೌದು ಎಲ್ಲ ದೂರುಗಳು ಕುರಿತಂತೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತನಿಖೆ ನಡೆಸುವಂತೆ ಕೋರಿದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯ ತನಿಖೆಗೆ ಕಳೆದ ಮೇ.29 ರಂದು ತನಿಖೆಗೆ ಆದೇಶಿಸಿದ್ದರು. ಅದರಂತೆ ತನಿಖೆಗಾಗಿ ಯೋಜನಾ ಇಲಾಖೆಯ ಐವರು ಅಧಿಕಾರಿಗಳ ತಂಡವನ್ನು ಸರ್ಕಾರ ರಚಿಸಿದ್ದು, ಅಧಿಕಾರಿಗಳ ತಂಡ ಜೂ.12ರಿಂದ ಕಲಬುರಗಿಯಲ್ಲಿ ಬೀಡು ಬಿಟ್ಟು ತನಿಖೆ ನಡೆಸುತ್ತಿದೆ. ಕೆಕೆಆರ್​ಡಿಬಿಯಲ್ಲಿರುವ ದಾಖಲಾತಿಗಳು ಮತ್ತು ಕೈಗೊಂಡ ಕಾಮಗಾರಿಗಳ ಕುರಿತು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದೆ.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಕೆಆರ್​ಡಿಬಿಯನ್ನು ತಮ್ಮ ಆದಾಯದ ಕಾಮಧೇನು ಮಾಡಿಕೊಂಡಿದ್ದಾರೆ. ಕಾಮಗಾರಿಗಳಲ್ಲಿ, ಮತ್ತು ಟೆಂಡರ್​ಗಳಲ್ಲಿ ಸಾಕಷ್ಟು ಅಕ್ರಮ ನಡೆಸಿದ್ದಾರೆ ಎಂದು ಈ ಹಿಂದೆ ಶಾಸಕರಾಗಿದ್ದ ಪ್ರಿಯಾಂಕ್ ಖರ್ಗೆ ಮೇಲಿಂದ ಮೇಲೆ ಆರೋಪಿಸುತ್ತಲೇ ಇದ್ದರು. ತಮ್ಮ ಸರ್ಕಾರ ಜಾರಿಗೆ ಬಂದ್ರೆ, ಕೆಕೆಆರ್​ಡಿಬಿಯಲ್ಲಿ ನಡೆದ ಎಲ್ಲಾ ಭ್ರಷ್ಟಾಚಾರವನ್ನು ತನಿಖೆ ಮಾಡಿಸುತ್ತೇವೆ. ಇದು ಕಲಬುರಗಿ ಜನರಿಗೆ ನಾವು ಕೊಡುತ್ತಿರುವ 6ನೇ ಗ್ಯಾರಂಟಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದೀಗ ಪ್ರಿಯಾಂಕ್ ಖರ್ಗೆ ಮನವಿ ಮೇರೆಗೆ ರಾಜ್ಯ ಸರ್ಕಾರದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:ಭ್ರಷ್ಟಾಚಾರ ರಹಿತ ಕಾರ್ಪೊರೇಷನ್ ಆಗಬೇಕು; ಬಿಬಿಎಂಪಿ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ನೀಡಿದ ಖಡಕ್ ಸೂಚನೆಗಳಿವು

ಮೂರು ದಿನಗಳ ಕಾಲ ತನಿಖೆ ನಡೆಸಲಿರುವ ಅಧಿಕಾರಿಗಳ ತಂಡ, ವರದಿಯನ್ನು ಸರ್ಕಾರಕ್ಕೆ ನೀಡಲಿದೆ. ವರದಿಯಲ್ಲಿ ಯಾವೆಲ್ಲ ಅಕ್ರಮಗಳು ನಡೆದಿವೆ, ಎಷ್ಟು ಮೊತ್ತದ ಅಕ್ರಮ ನಡೆದಿದೆ ಅನ್ನೋದು ಗೊತ್ತಾಗಲಿದ್ದು, ಅಕ್ರಮದಲ್ಲಿ ಭಾಗಿಯಾಗಿರೋ ಕೆಲ ಅಧಿಕಾರಿಗಳಿಗೆ ಈಗಾಗಲೇ ನಡುಕ ಆರಂಭವಾಗಿದೆ. ಹೌದು ಅವರ ವಿರುದ್ದ ಕಠೀಣ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆಯೆಂದು ಹೇಳಲಾಗುತ್ತಿದೆ. ವರದಿ ಬಂದ ನಂತರವೇ ಅಕ್ರಮದ ಅಸಲಿಯತ್ತು ಗೊತ್ತಾಗಲಿದೆ.

ವರದಿ: ಸಂಜಯ್ ಟಿವಿ9 ಕಲಬುರಗಿ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ