AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi DC: ಜಿಲ್ಲಾಧಿಕಾರಿಯ ಕಾರ್ಯವೈಖರಿ ವೀಕ್ಷಣೆಗೆ ಪದವಿ ವಿದ್ಯಾರ್ಥಿನಿಗೆ ಸಿಕ್ತು ಅಪೂರ್ವ ಅವಕಾಶ!

ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಶಿಕ್ಷಣದ ಹೊರತಾಗಿ ನಾವು ಕೌಶಲ್ಯ ಹೇಗೆ ಬೆಳಸಿಕೊಳ್ಳಬೇಕೆಂಬ ವಿಷಯದ ಮೇಲೆ ಆನ್ ಲೈನ್ ಮೂಲಕ ನಾನು ಪ್ರಬಂಧ ಮಂಡಿಸಿದ್ದೆ. ಅದಕ್ಕೆ ಜಿಲ್ಲಾ ಮಟ್ಟದ ಪ್ರಥಮ ಸ್ಥಾನ‌ ಪಡೆದು ಇಂದು ಡಿ.ಸಿ. ಕಾರ್ಯ ವೀಕ್ಷಣೆಗೆ ಅವಕಾಶ ಸಿಕ್ಕಿದ್ದು ಹೆಮ್ಮೆ ಅನಿಸುತ್ತಿದೆ ಎಂದು ವಿದ್ಯಾರ್ಥಿನಿ ಕು. ರಕ್ಷಿತಾ ಸಂತಸ‌ ಹಂಚಿಕೊಂಡರು.

Kalaburagi DC: ಜಿಲ್ಲಾಧಿಕಾರಿಯ ಕಾರ್ಯವೈಖರಿ ವೀಕ್ಷಣೆಗೆ ಪದವಿ ವಿದ್ಯಾರ್ಥಿನಿಗೆ ಸಿಕ್ತು ಅಪೂರ್ವ ಅವಕಾಶ!
Kalaburagi DC: ಜಿಲ್ಲಾಧಿಕಾರಿಯ ಕಾರ್ಯವೈಖರಿ ವೀಕ್ಷಣೆಗೆ ಪದವಿ ವಿದ್ಯಾರ್ಥಿನಿಗೆ ಸಿಕ್ತು ಅಪೂರ್ವ ಅವಕಾಶ!
TV9 Web
| Updated By: ಸಾಧು ಶ್ರೀನಾಥ್​|

Updated on: Aug 23, 2022 | 4:11 PM

Share

ಕಲಬುರಗಿ: ವಿಶ್ವ ಕೌಶಲ್ಯ ದಿನಾಚರಣೆ ಪ್ರಯುಕ್ತ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕಳೆದ ಜುಲೈ ಮಾಹೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಅಯೋಜಿಸಿದ “ಕೌಶಲ್ಯ ಸ್ಪೂರ್ತಿ” ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕುಮಾರಿ ರಕ್ಷಿತಾ ಅವರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯು ಮಂಗಳವಾರ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರ (Deputy Commissioner IAS Yashwanth Kurugar) ಒಂದು ದಿನದ ಕೆಲಸ ಕಾರ್ಯಗಳ ವೀಕ್ಷಣೆಗೆ ಅಪೂರ್ವ ಅವಕಾಶ ಒದಗಿಸಿತು (Kalaburagi DC).

ಜಿಲ್ಲಾಧಿಕಾರಿಗಳ ಇಡೀ ದಿನದ ಕಾರ್ಯವೈಖರಿಯನ್ನು ವೀಕ್ಷಿಸಲು ಬೆಳಿಗ್ಗೆ ಡಿ.ಸಿ. ಕಚೇರಿಗೆ ಬಂದ ಜೇವರ್ಗಿ ಮೂಲದ ಕಲಬುರಗಿಯ ವಿ.ಜಿ. ಮಹಿಳಾ ಮಹಾವಿದ್ಯಾಲಯದ ಬಿ.ಎಸ್ಸಿ. ಎರಡನೇ ಸೆಮಿಸ್ಟರ್ ವಿದ್ಯಾರ್ಥಿನಿ ರಕ್ಷಿತಾ ಮತ್ತರು ಅವರ ತಂದೆ ರಾಜಶೇಖರ ಅವರನ್ನು‌ ಹೂಗುಚ್ಛ ನೀಡಿ ಜಿಲ್ಲಾಧಿಕಾರಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಡಿ.ಸಿ. ಯಶವಂತ ವಿ. ಗುರುಕರ್ ಮಾತನಾಡಿ ಇಡೀ ದಿನ ನನ್ನೊಂದಿಗೆ ಇದ್ದು, ಸಭೆ-ಕೆಲಸ‌ ಕಾರ್ಯಗಳು ವೀಕ್ಷಿಸಬೇಕು. ಸಾಯಂಕಾಲ‌ 5.30 ಗಂಟೆಗೆ‌ ನನ್ನ ಕಾರಿನಲ್ಲಿಯೇ ಮನೆಗೆ ಕಳುಹಿಸುವೆ ಎಂದು ವಿದ್ಯಾರ್ಥಿನಿಗೆ ಮತ್ತು ಅವರ ತಂದೆ ವೃತ್ತಿಯಿಂದ ಕಾರ್ಪೆಂಟರ್ ಆಗಿರುವ ರಾಜಶೇಖರ ವಿಶ್ವಕರ್ಮ ಅವರಿಗೆ ಹೇಳಿದರು.

ಹೆಮ್ಮ ಅನಿಸುತ್ತಿದೆ: ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಶಿಕ್ಷಣದ ಹೊರತಾಗಿ ನಾವು ಕೌಶಲ್ಯ ಹೇಗೆ ಬೆಳಸಿಕೊಳ್ಳಬೇಕೆಂಬ ವಿಷಯದ ಮೇಲೆ ಆನ್ ಲೈನ್ ಮೂಲಕ ನನ್ನ ಪ್ರಬಂಧ ಮಂಡಿಸಿದ್ದೆ. ಅದಕ್ಕೆ ಜಿಲ್ಲಾ ಮಟ್ಟದ ಪ್ರಥಮ ಸ್ಥಾನ‌ ಪಡೆದು ಇಂದು ಡಿ.ಸಿ. ಕಾರ್ಯ ವೀಕ್ಷಣೆಗೆ ಅವಕಾಶ ಸಿಕ್ಕಿದ್ದು ಹೆಮ್ಮೆ ಅನಿಸುತ್ತಿದೆ ಎಂದು ವಿದ್ಯಾರ್ಥಿನಿ ಕು. ರಕ್ಷಿತಾ ಸಂತಸ‌ ಹಂಚಿಕೊಂಡರು.

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?