AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲು

ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲಾದ ಘಟನೆ ಅಫಜಲಪುರ ತಾಲೂಕಿನ ಬನ್ನಹಟ್ಟಿ ಗ್ರಾಮದಲ್ಲಿ ನಡೆದಿದೆ. ಸಧ್ಯ ಓರ್ವ ಬಾಲಕಿಯ ಶವವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ಮತ್ತೋರ್ವ ಬಾಲಕಿ ಶವಕ್ಕಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲು
ಮೃತ ಬಾಲಕಿಯರು
ದತ್ತಾತ್ರೇಯ ಪಾಟೀಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 10, 2024 | 4:54 PM

Share

ಕಲಬುರಗಿ, ಅ.10: ಅಫಜಲಪುರ ತಾಲೂಕಿನ ಬನ್ನಹಟ್ಟಿ ಗ್ರಾಮದ ಬಳಿಯಿರುವ ಭೀಮಾ ನದಿ(Bhima River)ಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲಾದ ಘಟನೆ ನಡೆದಿದೆ. ಭೂಮಿಕಾ ದೊಡ್ಮನಿ(8) ಹಾಗೂ ಶ್ರಾವಣಿ ನಾಟೀಕಾರ(11) ನೀರುಪಾಲಾದವರು. ಇಂದು(ಅ.10) ನದಿಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಬಾಲಕಿಯರು, ಬಟ್ಟೆ ತೊಳೆದ ನಂತರ ನದಿಯಲ್ಲಿ ಈಜಾಡಲು ಮುಂದಾಗಿದ್ದರು.

ಈ ವೇಳೆ ನದಿ ನೀರಿನ ರಭಸಕ್ಕೆ ಭೂಮಿಕಾ ದೊಡ್ಡಮನಿ ಕೊಚ್ಚಿ ಹೋಗಿದ್ದಾರೆ. ಕೂಡಲೇ ಭೂಮಿಕಾ ರಕ್ಷಿಸಲು ಶ್ರಾವಣಿ‌ ಮುಂದಾಗಿದ್ದಳು. ಆದರೆ, ದುರಾದೃಷ್ಟವಶಾತ್​ ಇಬ್ಬರು ಬಾಲಕಿಯರು ಕೊಚ್ಚಿ ಹೋಗಿದ್ದಾರೆ. ಸಧ್ಯ ಚಿಂಚೋಳಿ ಗ್ರಾಮದ ಶ್ರಾವಣಿ ನಾಟೀಕಾರ್(11) ಶವವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ಭೂಮಿಕಾ ದೊಡ್ಮನಿ ಶವಕ್ಕಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಲಬುರಗಿ: ಅಷ್ಟ ತೀರ್ಥದಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಬಾಲಕರು ನೀರುಪಾಲು

ವಿದ್ಯುತ್ ತಂತಿ ತುಳಿದು ಡಿ ಗ್ರೂಪ್ ನೌಕರ ಸ್ಥಳದಲ್ಲೆ ಸಾವು

ಕಲಬುರಗಿ: ವಿದ್ಯುತ್ ತಂತಿ ತುಳಿದು ಡಿ ಗ್ರೂಪ್ ನೌಕರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ‌ಕರಜಗಿ ಗ್ರಾಮದಲ್ಲಿ ನಡೆದಿದೆ. ಶಿವಪುತ್ರ ಹಾವಳಗಿ (32) ಮೃತ ದುದೈವಿ. ಕರಜಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಿ ಗ್ರೂಪ್ ನೌಕರನಾಗಿರುವ ಶಿವಪುತ್ರ, ಸಿಂಟೆಕ್ಸ್‌ನಲ್ಲಿ ನೀರು ಚೆಕ್ ಮಾಡಲು ತೆರಳಿದ್ದ ವೇಳೆ ವಿದ್ಯುತ್ ತಂತಿ ತುಳಿದು ದುರ್ಘಟನೆ ನಡೆದಿದೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ