AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲು

ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲಾದ ಘಟನೆ ಅಫಜಲಪುರ ತಾಲೂಕಿನ ಬನ್ನಹಟ್ಟಿ ಗ್ರಾಮದಲ್ಲಿ ನಡೆದಿದೆ. ಸಧ್ಯ ಓರ್ವ ಬಾಲಕಿಯ ಶವವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ಮತ್ತೋರ್ವ ಬಾಲಕಿ ಶವಕ್ಕಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲು
ಮೃತ ಬಾಲಕಿಯರು
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 10, 2024 | 4:54 PM

ಕಲಬುರಗಿ, ಅ.10: ಅಫಜಲಪುರ ತಾಲೂಕಿನ ಬನ್ನಹಟ್ಟಿ ಗ್ರಾಮದ ಬಳಿಯಿರುವ ಭೀಮಾ ನದಿ(Bhima River)ಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲಾದ ಘಟನೆ ನಡೆದಿದೆ. ಭೂಮಿಕಾ ದೊಡ್ಮನಿ(8) ಹಾಗೂ ಶ್ರಾವಣಿ ನಾಟೀಕಾರ(11) ನೀರುಪಾಲಾದವರು. ಇಂದು(ಅ.10) ನದಿಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಬಾಲಕಿಯರು, ಬಟ್ಟೆ ತೊಳೆದ ನಂತರ ನದಿಯಲ್ಲಿ ಈಜಾಡಲು ಮುಂದಾಗಿದ್ದರು.

ಈ ವೇಳೆ ನದಿ ನೀರಿನ ರಭಸಕ್ಕೆ ಭೂಮಿಕಾ ದೊಡ್ಡಮನಿ ಕೊಚ್ಚಿ ಹೋಗಿದ್ದಾರೆ. ಕೂಡಲೇ ಭೂಮಿಕಾ ರಕ್ಷಿಸಲು ಶ್ರಾವಣಿ‌ ಮುಂದಾಗಿದ್ದಳು. ಆದರೆ, ದುರಾದೃಷ್ಟವಶಾತ್​ ಇಬ್ಬರು ಬಾಲಕಿಯರು ಕೊಚ್ಚಿ ಹೋಗಿದ್ದಾರೆ. ಸಧ್ಯ ಚಿಂಚೋಳಿ ಗ್ರಾಮದ ಶ್ರಾವಣಿ ನಾಟೀಕಾರ್(11) ಶವವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ಭೂಮಿಕಾ ದೊಡ್ಮನಿ ಶವಕ್ಕಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಲಬುರಗಿ: ಅಷ್ಟ ತೀರ್ಥದಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಬಾಲಕರು ನೀರುಪಾಲು

ವಿದ್ಯುತ್ ತಂತಿ ತುಳಿದು ಡಿ ಗ್ರೂಪ್ ನೌಕರ ಸ್ಥಳದಲ್ಲೆ ಸಾವು

ಕಲಬುರಗಿ: ವಿದ್ಯುತ್ ತಂತಿ ತುಳಿದು ಡಿ ಗ್ರೂಪ್ ನೌಕರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ‌ಕರಜಗಿ ಗ್ರಾಮದಲ್ಲಿ ನಡೆದಿದೆ. ಶಿವಪುತ್ರ ಹಾವಳಗಿ (32) ಮೃತ ದುದೈವಿ. ಕರಜಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಿ ಗ್ರೂಪ್ ನೌಕರನಾಗಿರುವ ಶಿವಪುತ್ರ, ಸಿಂಟೆಕ್ಸ್‌ನಲ್ಲಿ ನೀರು ಚೆಕ್ ಮಾಡಲು ತೆರಳಿದ್ದ ವೇಳೆ ವಿದ್ಯುತ್ ತಂತಿ ತುಳಿದು ದುರ್ಘಟನೆ ನಡೆದಿದೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ