AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ನಿರ್ಲಕ್ಷ್ಯ; ಅಂಗವಿಕಲರಿಗೆ ವಿತರಣೆಯಾಗದೇ ತುಕ್ಕು ಹಿಡಿತಿವೆ 180 ಬೈಕ್​​ಗಳು!

ದೇವರು ವರ ಕೊಟ್ಟರು, ಪೂಜಾರಿ ಕೊಡಲ್ಲ ಎನ್ನುವ ಗಾದೆ ಮಾತು ಅಕ್ಷರಶಃ ಈ ಇಲಾಖೆಗೆ ಅನ್ವಯಿಸುತ್ತದೆ. ಹೌದು, ಅಂಗವಿಕಲರಿಗೆ ತ್ರೀಚಕ್ರ ಬೈಕ್‌ಗಳನ್ನ ನೀಡುವುದಕ್ಕೆ ಸರ್ಕಾರ ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಬೈಕ್‌ಗಳನ್ನ ಸರಬರಾಜು ಮಾಡಿದೆ. ಆದರೆ, ಕಲಬುರಗಿ ಜಿಲ್ಲೆಯಲ್ಲಿ ಮಾತ್ರ ಫಲಾನುಭವಿಗಳಿಗೆ ವಿತರಣೆಯಾಗದೇ ನೂರಾರು ಬೈಕ್‌ಗಳು ನಿಂತಲ್ಲಿಯೇ ತುಕ್ಕು ಹಿಡಿಯುವ ಸ್ಥಿತಿಗೆ ಬಂದಿದೆ. ಅಲ್ಲದೇ ಹಣ ಪಡೆದು ತಮಗೆ ಬೇಕಾದವರಿಗೆ ಬೈಕ್ ನೀಡಲಾಗುತ್ತಿದೆ ಎಂದ ಆರೋಪ ಕೇಳಿ ಬಂದಿದೆ.

ಅಧಿಕಾರಿಗಳ ನಿರ್ಲಕ್ಷ್ಯ; ಅಂಗವಿಕಲರಿಗೆ ವಿತರಣೆಯಾಗದೇ ತುಕ್ಕು ಹಿಡಿತಿವೆ 180 ಬೈಕ್​​ಗಳು!
ಅಂಗವಿಕಲರಿಗೆ ವಿತರಣೆಯಾಗದೇ ತುಕ್ಕು ಹಿಡಿತಿವೆ 180 ಬೈಕ್​​ಗಳು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 09, 2024 | 7:51 PM

Share

ಕಲಬುರಗಿ, ಆ.09: ಕಳೆದ ಬಾರಿ ಸಿಎಂ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್‌ನಲ್ಲಿ ರಾಜ್ಯಾದ್ಯಂತ ಅಂಗವಿಕಲರಿಗೆ 4 ಸಾವಿರ ಬೈಕ್‌ಗಳನ್ನ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಕಲಬುರಗಿ(Kalaburagi) ಜಿಲ್ಲೆಗೆ 4 ಸಾವಿರ ಬೈಕ್‌ಗಳ ಪೈಕಿ 180 ಬೈಕ್‌ಗಳು ಸರಬರಾಜು ಆಗಿ ಏಳು ತಿಂಗಳು ಕಳೆದಿವೆ. ಆದರೆ, ಈ ಏಳು ತಿಂಗಳಿನಿಂದ ಬೈಕ್‌ಗಳು ಫಲಾನುಭವಿಗಳಿಗೆ ನೀಡದೇ ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ನಿರ್ಲಕ್ಷ್ಯ ಮಾಡಿದೆ.

ಫಲಾನುಭವಿಗಳಿಂದ ಕಮಿಷನ್ ಪಡೆದು ಬೈಕ್‌ಗಳ ವಿತರಣೆ ಆರೋಪ

ಇಲಾಖೆ ಆವರಣದಲ್ಲಿ 180 ಬೈಕ್‌ಗಳನ್ನ ನಿಲ್ಲಿಸಲಾಗಿದ್ದು, ಬಿಸಿಲು, ಮಳೆಗೆ ಬೈಕ್‌ನ ಕಲರ್ ಶೇಡ್ ಆಗಿದ್ದಲ್ಲದೇ ಬಹುತೇಕ ಬೈಕ್‌ಗಳು ನಿಂತಲ್ಲೆ ತುಕ್ಕು ಹಿಡಿದು ಹೋಗಿವೆ.‌ ಅಲ್ಲದೇ ಕೆಲವೊಂದು ಬೈಕ್‌ಗಳ ಟೈರ್ ಗಾಳಿ ಸಹ ಇಳಿದು ಅಧೋಗತಿಗೆ ತಲುಪಿವೆ. ಇನ್ನು ಇಷ್ಟು ದಿನ ಬೈಕ್ ವಿತರಣೆ ಆಗದಿರೋದಕ್ಕೆ ಅಧಿಕಾರಿಗಳ ಕಳ್ಳಾಟವೇ ಕಾರಣ ಎನ್ನುವ ಆರೋಪ ಕೇಳಿಬಂದಿದೆ.  ಸರ್ಕಾರದಿಂದ ಶೇಕಡಾ 75 ರಷ್ಟು ದೈಹಿಕ ನ್ಯೂನತೆ ಇರುವವರಿಗೆ ಉಚಿತವಾಗಿ ಬೈಕ್‌ಗಳನ್ನ ನೀಡಲಾಗುತ್ತದೆ. ಆದರೆ, ಅಧಿಕಾರಿಗಳು ಫಲಾನುಭವಿಗಳಿಂದ 10 ರಿಂದ 20 ಸಾವಿರ ರೂಪಾಯಿ ಕಮಿಷನ್ ಪಡೆದು ಬೈಕ್‌ಗಳನ್ನ ಕೊಡಲಾಗುತ್ತಿದೆ ಎಂದು ಫಲಾನುಭವಿಗಳು ಆರೋಪಿಸುತ್ತಿದ್ದಾರೆ‌. ಹೀಗಾಗೇ ಇಷ್ಟು ದಿನ ತಡವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ:ಕಲಬುರಗಿಯಲ್ಲಿ ಬಾಲಕನನ್ನ ಕೂಡಿಹಾಕಿ ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ; ಐವರು ವಶಕ್ಕೆ

ಕಲಬುರಗಿ ಜಿಲ್ಲೆಗೆ ಸರ್ಕಾರದಿಂದ 180 ಬೈಕ್‌ಗಳು ಮಂಜೂರಾದರೆ, 476 ಅರ್ಜಿಗಳು ಸಲ್ಲಿಕೆಯಾಗಿವೆ. 2024 ರ ಫೆಬ್ರವರಿ ತಿಂಗಳಲ್ಲಿ ಬೈಕ್ ವಿತರಣೆ ಮಾಡಬೇಕಿತ್ತು. ಆದರೆ, ಅದಾದ ಬಳಿಕ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರಿಂದ ನೆನಗುದಿಗೆ ಬಿದ್ದಿತ್ತು. ಕೊನೆಯಪಕ್ಷ ಲೋಕಸಭಾ ಚುನಾವಣೆ ಬಳಿಕವಾದರೂ ಬೈಕ್ ಸಿಗುತ್ತದೆ ಎಂದು ಜಾತಕ ಪಕ್ಷಿಗಳಂತೆ ಕಾಯ್ತಿದ್ದ ಅಂಗವಿಕಲರಿಗೆ ಮತ್ತೆ ನಿರಾಸೆಯಾಗಿದೆ. ಈ ಬಗ್ಗೆ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ಸಾಜೀದ್ ಹುಸೇನ್ ಅವರನ್ನ ಕೇಳಿದರೆ, ‘ಫಲಾನುಭವಿಗಳಿಗೆ ಬೈಕ್ ವಿತರಣೆ ಮಾಡುವ ವಿಚಾರದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ.‌ ನಿಯಮದಂತೆ ಫಲಾನುಭವಿಗಳ ಹೆಸರಲ್ಲಿ ಈಗಾಗಲೇ ಬೈಕ್ ವಿತರಣೆ ಮಾಡಲಾಗಿದೆ. ಆಗಷ್ಟ್ 15 ರಂದು ಸ್ವಾತಂತ್ರೋತ್ಸವ ದಿನದಂದು ಆಯ್ಕೆಯಾದ 180 ಫಲಾನುಭವಿಗಳಿಗೆ ಬೈಕ್ ವಿತರಣೆ ಮಾಡಲಾಗುವುದೆಂದು ಹೇಳಿದ್ದಾರೆ.

ಅದೆನೇ ಇರಲಿ ಸರ್ಕಾರದಿಂದ ಅಂಗವಿಕಲರಿಗೆ ಬೈಕ್ ಮಂಜೂರಾಗಿ ಏಳೆಂಟು ತಿಂಗಳು ಕಳೆದರೂ ಸಹ ಕಲಬುರಗಿ ಜಿಲ್ಲಾ ಅಂಗವಿಕಲ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿಂತಲ್ಲೆ 180 ಬೈಕ್ ದುಸ್ಥಿಗೆ ತಲುಪಿದ್ದು ದುರಂತವೇ ಸರಿ. ಇನ್ನಾದರೂ ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಲಿ ಎನ್ನೊದು ನಮ್ಮ ಆಶಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದತ್ತಾತ್ರೇಯ ಪಾಟೀಲ, ಕಲಬುರಗಿ
ದತ್ತಾತ್ರೇಯ ಪಾಟೀಲ, ಕಲಬುರಗಿ

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್