AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಕಲ್ಲಿನ ಪರ್ಸಿಗಳನ್ನ ತುಂಬಿದ್ದ ಲಾರಿ ಪಲ್ಟಿ; 13 ಜನರಿಗೆ ಗಾಯ

ಪ್ರತ್ಯೇಕ ಅಪಘಾತ: ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲ್ಲೂಕಿನ ಮಿರಿಯಾಣ ಗ್ರಾಮದ ಬಳಿ ಕಲ್ಲಿನ ಪರ್ಸಿಗಳನ್ನ(ನೆಲಹಾಸು) ತುಂಬಿದ್ದ ಲಾರಿ ಪಲ್ಟಿಯಾಗಿದ್ದು, 13 ಜನರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಇತ್ತ ಹುಬ್ಬಳ್ಳಿ ಸಮೀಪರ ಕಿರೇಸೂರ ಬಳಿ ಓಮಿನಿ ಹಾಗೂ ಲಾರಿ ನಡುವೆ ಭೀಕರ ಅಪಘಾತವಾಗಿದ್ದು, ಓರ್ವ ಸಾವನ್ನಪ್ಪಿದರೆ, ಐದು ಜನರಿಗೆ ಗಾಯ‌ವಾದ ಘಟನೆ ನಡೆದಿದೆ.

ಕಲಬುರಗಿ: ಕಲ್ಲಿನ ಪರ್ಸಿಗಳನ್ನ ತುಂಬಿದ್ದ ಲಾರಿ ಪಲ್ಟಿ; 13 ಜನರಿಗೆ ಗಾಯ
ಕಲ್ಲಿನ ಪರ್ಸಿಗಳನ್ನ ತುಂಬಿದ್ದ ಲಾರಿ ಪಲ್ಟಿ; 13 ಜನರಿಗೆ ಗಾಯ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 23, 2024 | 10:34 PM

Share

ಕಲಬುರಗಿ, ಆ.23: ಕಲ್ಲಿನ ಪರ್ಸಿಗಳನ್ನ(ನೆಲಹಾಸು) ತುಂಬಿದ್ದ ಲಾರಿ ಪಲ್ಟಿಯಾಗಿದ್ದು, 13 ಜನರಿಗೆ ಗಂಭೀರ ಗಾಯವಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲ್ಲೂಕಿನ ಮಿರಿಯಾಣ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಭೀರ ಗಾಯಗೊಂಡವರನ್ನ ಕಲಬುರಗಿಗೆ ರವಾನೆ ಮಾಡಲಾಗಿದೆ. ಕೃಷ್ಣಾಪುರ ಗ್ರಾಮದಿಂದ ತೆಲಂಗಾಣಕ್ಕೆ ಹೊರಟಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾಗಿದೆ. ಈ ಕುರಿತು ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓಮಿನಿ, ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು, ಐವರಿಗೆ ಗಾಯ‌

ಹುಬ್ಬಳ್ಳಿ : ಓಮಿನಿ ಹಾಗೂ ಲಾರಿ ನಡುವೆ ಭೀಕರ ಅಪಘಾತವಾಗಿದ್ದು, ಓರ್ವ ಸಾವನ್ನಪ್ಪಿದರೆ, ಐದು ಜನರಿಗೆ ಗಾಯ‌ವಾದ ಘಟನೆ ಹುಬ್ಬಳ್ಳಿ ಸಮೀಪರ ಕಿರೇಸೂರ ಬಳಿ ನಡೆದಿದೆ. ಓಮಿನಿ ಟೈರ್ ಸ್ಪೋಟಗೊಂಡು ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಚಿಕ್ಕಮಗಳೂರು: ಓವರ್ ಟೇಕ್ ಮಾಡಲು ಹೋಗಿ ಅಪಘಾತ, ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ವಿಡಿಯೋ ಇದೆ

ಲಾರಿ ಡಿಕ್ಕಿ; ಬಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಉತ್ತರ ತಾಲೂಕಿನ ಮಾಕಳಿ ಬಳಿ ರಸ್ತೆಯಲ್ಲಿ ನಡೆದು ಬರುತ್ತಿದ್ದ ಬಾಲಕನಿಗೆ ಲಾರಿ ಡಿಕ್ಕಿಯಾಗಿದ್ದು, ಪಶ್ಚಿಮ ಬಂಗಾಳ ಮೂಲದ ಬಾಲಕ ಶಕೀಲ್(11) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಾರೋಕ್ಯಾತನಹಳ್ಳಿಯಲ್ಲಿ ಕೂಲಿ ಕೆಲಸ ಮಾಡಿಕೊಂಡು ಮೃತನ ಕುಟುಂಬ ಜೀವನ ಸಾಗಿಸುತ್ತಿದ್ದರು. ಅಪಘಾತದ ಬಳಿಕ ಚಾಲಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಪರಾರಿಯಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ