AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಕಲ್ಲಿನ ಪರ್ಸಿಗಳನ್ನ ತುಂಬಿದ್ದ ಲಾರಿ ಪಲ್ಟಿ; 13 ಜನರಿಗೆ ಗಾಯ

ಪ್ರತ್ಯೇಕ ಅಪಘಾತ: ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲ್ಲೂಕಿನ ಮಿರಿಯಾಣ ಗ್ರಾಮದ ಬಳಿ ಕಲ್ಲಿನ ಪರ್ಸಿಗಳನ್ನ(ನೆಲಹಾಸು) ತುಂಬಿದ್ದ ಲಾರಿ ಪಲ್ಟಿಯಾಗಿದ್ದು, 13 ಜನರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಇತ್ತ ಹುಬ್ಬಳ್ಳಿ ಸಮೀಪರ ಕಿರೇಸೂರ ಬಳಿ ಓಮಿನಿ ಹಾಗೂ ಲಾರಿ ನಡುವೆ ಭೀಕರ ಅಪಘಾತವಾಗಿದ್ದು, ಓರ್ವ ಸಾವನ್ನಪ್ಪಿದರೆ, ಐದು ಜನರಿಗೆ ಗಾಯ‌ವಾದ ಘಟನೆ ನಡೆದಿದೆ.

ಕಲಬುರಗಿ: ಕಲ್ಲಿನ ಪರ್ಸಿಗಳನ್ನ ತುಂಬಿದ್ದ ಲಾರಿ ಪಲ್ಟಿ; 13 ಜನರಿಗೆ ಗಾಯ
ಕಲ್ಲಿನ ಪರ್ಸಿಗಳನ್ನ ತುಂಬಿದ್ದ ಲಾರಿ ಪಲ್ಟಿ; 13 ಜನರಿಗೆ ಗಾಯ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Aug 23, 2024 | 10:34 PM

Share

ಕಲಬುರಗಿ, ಆ.23: ಕಲ್ಲಿನ ಪರ್ಸಿಗಳನ್ನ(ನೆಲಹಾಸು) ತುಂಬಿದ್ದ ಲಾರಿ ಪಲ್ಟಿಯಾಗಿದ್ದು, 13 ಜನರಿಗೆ ಗಂಭೀರ ಗಾಯವಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲ್ಲೂಕಿನ ಮಿರಿಯಾಣ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಭೀರ ಗಾಯಗೊಂಡವರನ್ನ ಕಲಬುರಗಿಗೆ ರವಾನೆ ಮಾಡಲಾಗಿದೆ. ಕೃಷ್ಣಾಪುರ ಗ್ರಾಮದಿಂದ ತೆಲಂಗಾಣಕ್ಕೆ ಹೊರಟಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾಗಿದೆ. ಈ ಕುರಿತು ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓಮಿನಿ, ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು, ಐವರಿಗೆ ಗಾಯ‌

ಹುಬ್ಬಳ್ಳಿ : ಓಮಿನಿ ಹಾಗೂ ಲಾರಿ ನಡುವೆ ಭೀಕರ ಅಪಘಾತವಾಗಿದ್ದು, ಓರ್ವ ಸಾವನ್ನಪ್ಪಿದರೆ, ಐದು ಜನರಿಗೆ ಗಾಯ‌ವಾದ ಘಟನೆ ಹುಬ್ಬಳ್ಳಿ ಸಮೀಪರ ಕಿರೇಸೂರ ಬಳಿ ನಡೆದಿದೆ. ಓಮಿನಿ ಟೈರ್ ಸ್ಪೋಟಗೊಂಡು ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಚಿಕ್ಕಮಗಳೂರು: ಓವರ್ ಟೇಕ್ ಮಾಡಲು ಹೋಗಿ ಅಪಘಾತ, ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ವಿಡಿಯೋ ಇದೆ

ಲಾರಿ ಡಿಕ್ಕಿ; ಬಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಉತ್ತರ ತಾಲೂಕಿನ ಮಾಕಳಿ ಬಳಿ ರಸ್ತೆಯಲ್ಲಿ ನಡೆದು ಬರುತ್ತಿದ್ದ ಬಾಲಕನಿಗೆ ಲಾರಿ ಡಿಕ್ಕಿಯಾಗಿದ್ದು, ಪಶ್ಚಿಮ ಬಂಗಾಳ ಮೂಲದ ಬಾಲಕ ಶಕೀಲ್(11) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಾರೋಕ್ಯಾತನಹಳ್ಳಿಯಲ್ಲಿ ಕೂಲಿ ಕೆಲಸ ಮಾಡಿಕೊಂಡು ಮೃತನ ಕುಟುಂಬ ಜೀವನ ಸಾಗಿಸುತ್ತಿದ್ದರು. ಅಪಘಾತದ ಬಳಿಕ ಚಾಲಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಪರಾರಿಯಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!