Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಬ್ಯಾಂಕ್​ ನೋಟಿಸ್​​ಗೆ ಹೆದರಿ ಪೆಟ್ರೋಲ್​ ಸುರಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲೂಕಿನ ಪೊತಂಗಲ ಗ್ರಾಮದಲ್ಲಿ ಬ್ಯಾಂಕ್​ ನೋಟಿಸ್​​ಗೆ ಹೆದರಿ ಪೆಟ್ರೋಲ್​ ಸುರಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾಂಡಪ್ಪ ತಿಪ್ಪಣ್ಣ ಕೊರುವನ್ (45) ಆತ್ಮಹತ್ಯೆ ಮಾಡಿಕೊಂಡ ರೈತ. ಈ ಕುರಿತು ಸುಲೇಪೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಲಬುರಗಿ: ಬ್ಯಾಂಕ್​ ನೋಟಿಸ್​​ಗೆ ಹೆದರಿ ಪೆಟ್ರೋಲ್​ ಸುರಿದುಕೊಂಡು ರೈತ ಆತ್ಮಹತ್ಯೆ
ಪಾಂಡಪ್ಪ ತಿಪ್ಪಣ್ಣ ಕೊರುವನ್ (45) ಆತ್ಮಹತ್ಯೆ ಮಾಡಿಕೊಂಡ ರೈತ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 27, 2024 | 3:43 PM

ಕಲಬುರಗಿ, ಸೆ.27: ಬ್ಯಾಂಕ್​ ನೋಟಿಸ್​​ಗೆ ಹೆದರಿ ಪೆಟ್ರೋಲ್​ ಸುರಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲೂಕಿನ ಪೊತಂಗಲ ಗ್ರಾಮದಲ್ಲಿ ನಿನ್ನೆ(ಸೆ.26) ನಡೆದಿದೆ. ಪಾಂಡಪ್ಪ ತಿಪ್ಪಣ್ಣ ಕೊರುವನ್ (45) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ವ್ಯಕ್ತಿ ತೊಗರಿ ಬೆಳೆಯಲು ಬ್ಯಾಂಕ್​ ಹಾಗೂ ಖಾಸಗಿಯಾಗಿ ಲಕ್ಷಾಂತರ ರೂ.ಸಾಲ ಮಾಡಿದ್ದ. ಆದರೆ, ದುರಾದೃಷ್ಟವಶಾತ್​ ನಿರಂತರವಾಗಿ ಸುರಿದ ಮಳೆಗೆ ಜಮೀನಿನಲ್ಲಿ ಬೆಳೆದಿದ್ದ ತೊಗರಿ ನಾಶವಾಗಿತ್ತು. ಇತ್ತ ಬ್ಯಾಂಕ್​ ಅಧಿಕಾರಿಗಳ ಸಾಲದ ಕಿರುಕುಳಕ್ಕೆ ಹೆದರಿ ತಿಪ್ಪಣ್ಣ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಸುಲೇಪೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಳೆ ನಾಶವಾಗಿದಕ್ಕೆ ಮನನೊಂದು ರೈತ ವಿಷಸೇವಿಸಿ ಆತ್ಮಹತ್ಯೆ

ರಾಯಚೂರು: ತಾಲೂಕಿನ ಚಿಕ್ಕಸೂಗೂರು ಗ್ರಾಮದಲ್ಲಿ ಕಷ್ಟಪಟ್ಟು ಬೆಳೆದಿದ್ದ ಹತ್ತಿ ಬೆಳೆ ನಾಶವಾಗಿದ್ದಕ್ಕೆ ಮನನೊಂದ ರೈತ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಹಾದೇವ ಸಾಗರ್(42) ಮೃತ ರೈತ. ನಿರಂತರ ಮಳೆಯಿಂದ ತೇವಾಂಶ ಹೆಚ್ಚಾಗಿ 4 ಎಕರೆ ಹತ್ತಿ ಬೆಳೆ ಹಾನಿಯಾಗಿದೆ. ಈ ಹಿನ್ನಲೆ ಮನೆಯಿಂದ ಜಮೀನಿಗೆ ಹೋಗುವುದಾಗಿ ಹೇಳಿ ಹೋಗಿ ರೈತ ವಿಷಸೇವನೆ ಮಾಡಿದ್ದ. ಕೂಡಲೇ ಆತನನ್ನು ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ರೈತ ಮಹಾದೇವ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ಬೆಂಗಳೂರಿನ ಮಹಾಲಕ್ಷ್ಮೀಯನ್ನು 50ಕ್ಕೂ ಹೆಚ್ಚು ಪೀಸ್ ಪೀಸ್ ಮಾಡಿದ್ದ ಹಂತಕ ಆತ್ಮಹತ್ಯೆ

ಮಣ್ಣಿನಡಿ ಸಿಲುಕಿ ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ

ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಹನಿಕೆ ಬಳಿ ಮಣ್ಣಿನಡಿ ಸಿಲುಕಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಹೊಳೆನರಸೀಪುರ ಮೂಲದ ದರ್ಶನ್‌ಕುಮಾರ್(29) ಮೃತ ವ್ಯಕ್ತಿ. ಕೆರೆ ಕೋಡಿ ದುರಸ್ತಿ ವೇಳೆ ಈ ದುರ್ಘಟನೆ ನಡೆದಿದ್ದು, ಗಾಯಗೊಂಡ ಲೋಕಪ್ಪ ಹಾಗೂ ವಸಂತ್‌ಕುಮಾರ್​​ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Fri, 27 September 24

ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ