AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಬ್ಯಾಂಕ್​ ನೋಟಿಸ್​​ಗೆ ಹೆದರಿ ಪೆಟ್ರೋಲ್​ ಸುರಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲೂಕಿನ ಪೊತಂಗಲ ಗ್ರಾಮದಲ್ಲಿ ಬ್ಯಾಂಕ್​ ನೋಟಿಸ್​​ಗೆ ಹೆದರಿ ಪೆಟ್ರೋಲ್​ ಸುರಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾಂಡಪ್ಪ ತಿಪ್ಪಣ್ಣ ಕೊರುವನ್ (45) ಆತ್ಮಹತ್ಯೆ ಮಾಡಿಕೊಂಡ ರೈತ. ಈ ಕುರಿತು ಸುಲೇಪೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಲಬುರಗಿ: ಬ್ಯಾಂಕ್​ ನೋಟಿಸ್​​ಗೆ ಹೆದರಿ ಪೆಟ್ರೋಲ್​ ಸುರಿದುಕೊಂಡು ರೈತ ಆತ್ಮಹತ್ಯೆ
ಪಾಂಡಪ್ಪ ತಿಪ್ಪಣ್ಣ ಕೊರುವನ್ (45) ಆತ್ಮಹತ್ಯೆ ಮಾಡಿಕೊಂಡ ರೈತ
ಸಂಜಯ್ಯಾ ಚಿಕ್ಕಮಠ
| Edited By: |

Updated on:Sep 27, 2024 | 3:43 PM

Share

ಕಲಬುರಗಿ, ಸೆ.27: ಬ್ಯಾಂಕ್​ ನೋಟಿಸ್​​ಗೆ ಹೆದರಿ ಪೆಟ್ರೋಲ್​ ಸುರಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲೂಕಿನ ಪೊತಂಗಲ ಗ್ರಾಮದಲ್ಲಿ ನಿನ್ನೆ(ಸೆ.26) ನಡೆದಿದೆ. ಪಾಂಡಪ್ಪ ತಿಪ್ಪಣ್ಣ ಕೊರುವನ್ (45) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ವ್ಯಕ್ತಿ ತೊಗರಿ ಬೆಳೆಯಲು ಬ್ಯಾಂಕ್​ ಹಾಗೂ ಖಾಸಗಿಯಾಗಿ ಲಕ್ಷಾಂತರ ರೂ.ಸಾಲ ಮಾಡಿದ್ದ. ಆದರೆ, ದುರಾದೃಷ್ಟವಶಾತ್​ ನಿರಂತರವಾಗಿ ಸುರಿದ ಮಳೆಗೆ ಜಮೀನಿನಲ್ಲಿ ಬೆಳೆದಿದ್ದ ತೊಗರಿ ನಾಶವಾಗಿತ್ತು. ಇತ್ತ ಬ್ಯಾಂಕ್​ ಅಧಿಕಾರಿಗಳ ಸಾಲದ ಕಿರುಕುಳಕ್ಕೆ ಹೆದರಿ ತಿಪ್ಪಣ್ಣ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಸುಲೇಪೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಳೆ ನಾಶವಾಗಿದಕ್ಕೆ ಮನನೊಂದು ರೈತ ವಿಷಸೇವಿಸಿ ಆತ್ಮಹತ್ಯೆ

ರಾಯಚೂರು: ತಾಲೂಕಿನ ಚಿಕ್ಕಸೂಗೂರು ಗ್ರಾಮದಲ್ಲಿ ಕಷ್ಟಪಟ್ಟು ಬೆಳೆದಿದ್ದ ಹತ್ತಿ ಬೆಳೆ ನಾಶವಾಗಿದ್ದಕ್ಕೆ ಮನನೊಂದ ರೈತ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಹಾದೇವ ಸಾಗರ್(42) ಮೃತ ರೈತ. ನಿರಂತರ ಮಳೆಯಿಂದ ತೇವಾಂಶ ಹೆಚ್ಚಾಗಿ 4 ಎಕರೆ ಹತ್ತಿ ಬೆಳೆ ಹಾನಿಯಾಗಿದೆ. ಈ ಹಿನ್ನಲೆ ಮನೆಯಿಂದ ಜಮೀನಿಗೆ ಹೋಗುವುದಾಗಿ ಹೇಳಿ ಹೋಗಿ ರೈತ ವಿಷಸೇವನೆ ಮಾಡಿದ್ದ. ಕೂಡಲೇ ಆತನನ್ನು ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ರೈತ ಮಹಾದೇವ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ಬೆಂಗಳೂರಿನ ಮಹಾಲಕ್ಷ್ಮೀಯನ್ನು 50ಕ್ಕೂ ಹೆಚ್ಚು ಪೀಸ್ ಪೀಸ್ ಮಾಡಿದ್ದ ಹಂತಕ ಆತ್ಮಹತ್ಯೆ

ಮಣ್ಣಿನಡಿ ಸಿಲುಕಿ ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ

ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಹನಿಕೆ ಬಳಿ ಮಣ್ಣಿನಡಿ ಸಿಲುಕಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಹೊಳೆನರಸೀಪುರ ಮೂಲದ ದರ್ಶನ್‌ಕುಮಾರ್(29) ಮೃತ ವ್ಯಕ್ತಿ. ಕೆರೆ ಕೋಡಿ ದುರಸ್ತಿ ವೇಳೆ ಈ ದುರ್ಘಟನೆ ನಡೆದಿದ್ದು, ಗಾಯಗೊಂಡ ಲೋಕಪ್ಪ ಹಾಗೂ ವಸಂತ್‌ಕುಮಾರ್​​ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Fri, 27 September 24

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ