AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ಥ; ಕಲಬುರಗಿ-ಸೇಡಂ-ಹೈದ್ರಾಬಾದ್ ರಸ್ತೆ ಸಂಪರ್ಕ ಕಡಿತ

ಬಿಸಿಲನಾಡು ಕಲಬುರಗಿ ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈ ತಿಂಗಳ ಮೊದಲ 15 ದಿನಗಳು ಮಳೆಯಾಗಿರಲಿಲ್ಲ. ಹೀಗಾಗಿ ಕಲಬುರಗಿಯನ್ನ ಬರಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಬೇಕೆನ್ನುವ ಆಗ್ರಹ ಹೆಚ್ಚಾಗಿತ್ತು. ಆದರೀಗ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ಥ; ಕಲಬುರಗಿ-ಸೇಡಂ-ಹೈದ್ರಾಬಾದ್ ರಸ್ತೆ ಸಂಪರ್ಕ ಕಡಿತ
ಕಲಬುರಗಿ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 21, 2023 | 7:44 AM

Share

ಕಲಬುರಗಿ: ಬಿಸಿಲನಾಡು ಕಲಬುರಗಿ(Kalaburagi) ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈ ತಿಂಗಳ ಮೊದಲ 15 ದಿನಗಳು ಮಳೆ(Rain)ಯಾಗಿರಲಿಲ್ಲ. ಹೀಗಾಗಿ ಕಲಬುರಗಿಯನ್ನ ಬರಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಬೇಕೆನ್ನುವ ಆಗ್ರಹ ಹೆಚ್ಚಾಗಿತ್ತು. ರೈತರು ಬಿತ್ತನೆ ಮಾಡಲಿಕ್ಕಾಗದೇ ಪರದಾಡಿದ್ದರು. ಕಬ್ಬು ಸೇರಿದಂತೆ ಅನೇಕ ಬೆಳೆಗಳು ಒಣಗುತ್ತಿದ್ದವು. ಆದ್ರೆ, ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಬಾರಿ ಮಳೆಯಾಗುತ್ತಿದೆ. ಅದರಲ್ಲೂ ಕಳೆದ ರಾತ್ರಿಯಿಂದ ಜಿಲ್ಲೆಯ ಬಹುತೇಕ ಕಡೆ ಬಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ.

ಕಲಬುರಗಿ-ಸೇಡಂ-ಹೈದ್ರಾಬಾದ್ ರಸ್ತೆ ಸಂಪರ್ಕ ಕಡಿತ

ಜಿಲ್ಲೆಯಾದ್ಯಂತ ಭರ್ಜರಿ ಮಳೆ ಆಗುತ್ತಿರುವ ಹಿನ್ನೆಲೆ ಹಲವೆಡೆ ಅವಾಂತರಗಳಾಗಿವೆ. ಭಾರಿ ಮಳೆಯಿಂದ ಕಾಗಿನಾ ನದಿ ಉಕ್ಕಿ ಹರಿಯುತ್ತಿದ್ದು, ಮಳಖೇಡ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಈ ಸಂಬಂಧ ಕಲಬುರಗಿ-ಸೇಡಂ-ಹೈದ್ರಾಬಾದ್ ರಸ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಸೇಡಂ ತಾಲೂಕಿನ ಕಾಗಿನಾ ನದಿಗೆ ಅಡ್ಡಲಾಗಿ ಮಳಖೇಡ ಸೇತುವೆಯನ್ನ ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆ ನೀರಿನಿಂದ ತುಂಬಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬೆಳಗ್ಗೆ ನಾಲ್ಕು ಗಂಟೆಯಿಂದ ಸಂಚಾರ ಸ್ಥಗಿತಗೊಳಿಸಿದ್ದಾರೆ.

ಇದನ್ನೂ ಓದಿ:Karnataka Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಬಾರಿ ಮಳೆ; ಎಲ್ಲೆಲ್ಲಿ, ಏನು ಹಾನಿ? ಇಲ್ಲಿದೆ ಮಾಹಿತಿ

ಮುಲ್ಲಾಮಾರಿ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ನಾಗರಾಳ ಬಳಿಯಿರುವ ಮುಲ್ಲಾಮಾರಿ ಜಲಾಶಯದಿಂದ 2 ಸಾವಿರ ಕ್ಯೂಸೆಕ್​ ನೀರನ್ನು ಬಿಡುಗಡೆ ಮಾಡಿದ್ದು, ಇದರಿಂದ ಕೆಳ ಬಾಗದಲ್ಲಿರುವ ಗ್ರಾಮಗಳಿಗೆ ಸಂಚಾರ ಸ್ಥಗಿತವಾಗುವ ಆತಂಕ ಎದುರಾಗಿದೆ. ಜೊತೆಗೆ ಚಿಂಚೋಳಿ ತಾಲೂಕಿನ ಗರಗಪಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ ನೀರು ಹರಿಯುತ್ತಿರೋದರಿಂದ ರಸ್ತೆ ಸಂಚಾರ ಸ್ಥಗಿತ ಮಾಡಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!