AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ನಗರದಲ್ಲಿ ಹೆಚ್ಚಾದ ಬೈಕ್ ಕಳ್ಳತನ ಪ್ರಕರಣಗಳು; ಲಕ್ಷಾಂತರ ಮೌಲ್ಯದ ಬೈಕ್ ಕಳೆದುಕೊಂಡು ಕಂಗಾಲಾಗುತ್ತಿರೋ ಜನ

ಕಲಬುರಗಿ ಜಿಲ್ಲೆಯಲ್ಲಿ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಜನರು ಕಂಗಾಲಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಪ್ರತಿನಿತ್ಯ ನಗರದಲ್ಲಿ ಹತ್ತಾರು ಬೈಕ್​ಗಳು ಕಳ್ಳತನವಾಗುತ್ತಿವೆ. ಸದ್ಯ ದ್ವಿಚಕ್ರವಾಹನಗಳ ಬೆಲೆ ಗಗನಕ್ಕೆ ಮುಟ್ಟಿದೆ. ಇದರಿಂದ ಸಾಮಾನ್ಯ ವ್ಯಕ್ತಿಗಳು ದ್ವಿ ಚಕ್ರವಾಹನಗಳನ್ನು ಖರೀದಿಸಲಿಕ್ಕೆ ಪಡಬಾರದ ಕಷ್ಟ ಪಡುತ್ತಿದ್ದಾರೆ.

ಕಲಬುರಗಿ ನಗರದಲ್ಲಿ ಹೆಚ್ಚಾದ ಬೈಕ್ ಕಳ್ಳತನ ಪ್ರಕರಣಗಳು; ಲಕ್ಷಾಂತರ ಮೌಲ್ಯದ ಬೈಕ್ ಕಳೆದುಕೊಂಡು ಕಂಗಾಲಾಗುತ್ತಿರೋ ಜನ
ಕಲಬುರಗಿ ಬೈಕ್​ ಕಳ್ಳತನ
ಕಿರಣ್ ಹನುಮಂತ್​ ಮಾದಾರ್
|

Updated on: Jun 03, 2023 | 2:35 PM

Share

ಕಲಬುರಗಿ: ಜಿಲ್ಲೆಯ ದೇವಿ ನಗರದಲ್ಲಿ ಕಳೆದ ಕೆಲ ದಿನಗಳ ಹಿಂದೆ ರಾತ್ರಿ 12 ಗಂಟೆ ಸಮಯದಲ್ಲಿ ಕಳ್ಳನೋರ್ವ ಮನೆ ಮುಂದೆ ನಿಲ್ಲಿಸಿದ ಬೈಕ್​ನ್ನು ಕದ್ದುಕೊಂಡು ಹೋಗಿದ್ದಾನೆ. ಇದೀಗ ಸುತ್ತಮುತ್ತಲಿನ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು ಯಾಕಂದ್ರೆ ಏರಿಯಾದಲ್ಲಿ ಯಾವಾಗಲೋ ಒಂದು ಬೈಕ್ ಕಳ್ಳತನ(Bike theft)ವಾಗಿದ್ದರೆ, ಜನರು ಸುಮ್ಮನಿರುತ್ತಿದ್ದರು. ಆದ್ರೆ, ಮೇಲಿಂದ ಮೇಲೆ ಈ ಏರಿಯಾಗಳಲ್ಲಿ ಬೈಕ್ ಕಳ್ಳತನವಾಗುತ್ತಲೇ ಇದ್ದಾವೆ. ಅದರಲ್ಲೂ ಕಳೆದ ಕೆಲ ದಿನಗಳಿಂದ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಸಾರ್ವಜನಿಕರ ಆತಂಕ ಹೆಚ್ಚಾಗುವಂತೆ ಮಾಡಿದೆ.

ಕಳೆದ ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ಬೈಕ್​ಗಳು ಈ ಏರಿಯಾದಲ್ಲಿ ಕಳ್ಳತನವಾಗಿವೆ. ಬೈಕ್ ಮಾತ್ರವಲ್ಲಾ, ಆಟೋ, ಮನೆಯಲ್ಲಿರುವ ಗ್ಯಾಸ್ ಸಿಲಿಂಡರ್, ಕಬ್ಬಿಣದ ಗೇಟ್​ಗಳನ್ನು ಕೂಡ ಕಳ್ಳರು ಯಾರ ಅಂಜಿಕೆ, ಅಳುಕಿಲ್ಲದೇ ಕದ್ದುಕೊಂಡು ಹೋಗುತ್ತಿದ್ದಾರಂತೆ. ಇದೀಗ ಒಂದು ಬೈಕ್ ಖರೀದಿಸಬೇಕಾದ್ರೆ, ಕನಿಷ್ಟ ಒಂದು ಲಕ್ಷ ರೂಪಾಯಿ ಹಣ ಬೇಕು. ಮಧ್ಯಮ ವರ್ಗದವರೇ ಹೆಚ್ಚಾಗಿರುವ ಅನೇಕರು, ತಮ್ಮ ದೈನಂದಿನ ಕೆಲಸಕ್ಕೆ ಅನಕೂಲವಾಗಲಿ ಅಂತ ಬೈಕ್​ಗಳನ್ನು ಖರೀದಿಸಿ ತಂದ್ರೆ, ಕಳ್ಳರು, ಅವುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಮನೆಗಳ್ಳತನ, ಮೆಟ್ರೋ ನಿಲ್ದಾಣಗಳ ಬಳಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್

ನಕಲಿ ಕೀ ಬಳಸಿ ಬೈಕ್​ ಕಳ್ಳತನ

ಇನ್ನು ರಾತ್ರಿ ಮಾತ್ರವಲ್ಲ, ಹಗಲೊತ್ತಿನಲ್ಲಿ ಕೂಡ ಕಲಬುರಗಿ ಕಳ್ಳತನ ನಡೆಯುತ್ತಿದೆಯಂತೆ. ಬೈಕ್​ಗಳನ್ನು ಮನೆ ಮುಂದೆ ನಿಲ್ಲಿಸಿ, ಒಳಗಡೆ ಹೋದ್ರೆ, ಕೆಲವೇ ನಿಮಿಷಗಳಲ್ಲಿ ಕಳ್ಳರು ನಕಲಿ ಕೀ ಗಳನ್ನು ಬಳಸಿ, ಬೈಕ್​ಗಳನ್ನು ಕದ್ದುಕೊಂಡು ಪರಾರಿಯಾಗುತ್ತಿದ್ದಾರಂತೆ. ಅದರಲ್ಲೂ ನಗರದ ಜಿಮ್ಸ್ ಆಸ್ಪತ್ರೆ ಸೇರಿದಂತೆ ಕೆಲ ಮಾಲ್​ಗಳ ಮುಂದೆ ನಿಲ್ಲಿಸಿದ್ದ ಬೈಕ್​ಗಳು ಹೆಚ್ಚು ಕಳ್ಳತನವಾಗುತ್ತಿವೆ. ಇನ್ನು ಮೇಲಿಂದ ಮೇಲೆ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದರೂ ಕೂಡ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವಂತೆ. ಬೈಕ್ ಕಳ್ಳತನವಾದಾಗ, ಪೊಲೀಸ್ ಠಾಣೆಗೆ ದೂರು ನೀಡಿದ್ರು, ಸರಿಯಾಗಿ ದೂರು ಸ್ವೀಕರಿಸೋದಿಲ್ಲ. ದೂರು ದಾಖಲಾದ್ರು ಕೂಡ ಕಳ್ಳರನ್ನು, ಬೈಕ್​ಗಳನ್ನು ಪತ್ತೆ ಮಾಡುವ ಕೆಲಸವನ್ನು ಪೊಲೀಸರು ಮಾಡ್ತಿಲ್ಲ. ಈ ಭಾಗದಲ್ಲಿ ಸರಿಯಾಗಿ ಬೀಟ್ ವ್ಯವಸ್ಥೆ ಕೂಡ ಇಲ್ಲ. ಇದರಿಂದ ಕಳ್ಳರು, ಯಾರ ಅಂಜಿಕೆ, ಅಳುಕಿಲ್ಲದೇ ತಮ್ಮ ಕಳ್ಳತನ ಕೆಲಸವನ್ನು ಮಾಡ್ತಿದ್ದಾರೆ ಅಂತ ಸಾರ್ವಜನಿಕರು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ಕೆಲ ದಿನಗಳಿಂದ ಕಳ್ಳರು ಕಲಬುರಗಿ ನಗರದ ನಿವಾಸಿಗಳ ನಿದ್ದೆ ಹಾರುವಂತೆ ಮಾಡಿದ್ದಾರೆ. ಲಕ್ಷಾಂತರ ಮೌಲ್ಯದ ಬೈಕ್​ಗಳನ್ನು ಕದ್ದು ಪರಾರಿಯಾಗುತ್ತಿದ್ದಾರೆ. ಹೀಗಾಗಿ ಪೊಲೀಸರು ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಕಳ್ಳರನ್ನು ಪತ್ತೆ ಮಾಡುವ ಕೆಲಸ ಮಾಡಬೇಕಿದೆ. ಆ ಮೂಲಕ ಸಾರ್ವಜನಿಕರ ನೆಮ್ಮದಿ ಹಾಳಾಗದಂತೆ ನೋಡಿಕೊಳ್ಳುವ ಕೆಲಸ ಮಾಡಬೇಕಿದೆ.

ವರದಿ: ಸಂಜಯ್ ಟಿವಿ9 ಕಲಬುರಗಿ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ