ಯುದ್ಧ ನಿಲ್ಲಿಸಿ, ಶಾಂತಿ ನೆಲಸಲಿ: ಕಲಬುರಗಿಯಲ್ಲಿ ಪ್ಯಾಲೆಸ್ಟೈನ್ ಪರವಾಗಿ ವಿವಿಧ ಸಂಘಟನೆಗಳಿಂದ ಧರಣಿ

ಗಾಜಾ ಮತ್ತು ಪ್ಯಾಲೆಸ್ಟೈನ್​ನಲ್ಲಿ ನರಮೇಧ ನಡೆಯುತ್ತಿದೆ. ಮಕ್ಕಳು, ಅಮಾಯಕರು ಇಸ್ರೇಲ್​ ದಾಳಿಗೆ ಬಲಿಯಾಗುತ್ತಿದ್ದಾರೆ‌. ಯುದ್ಧದಿಂದ ಪ್ಯಾಲೆಸ್ಟೈನ್​ನಲ್ಲಿ ನರಮೇಧ ನಡೆಯುತ್ತಿದ್ದು, ಯುದ್ಧ ನಿಲ್ಲಿಸಿ ಶಾಂತಿ ನೆಲೆಸಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಯುದ್ಧ ನಿಲ್ಲಿಸಿ, ಶಾಂತಿ ನೆಲಸಲಿ: ಕಲಬುರಗಿಯಲ್ಲಿ ಪ್ಯಾಲೆಸ್ಟೈನ್ ಪರವಾಗಿ ವಿವಿಧ ಸಂಘಟನೆಗಳಿಂದ ಧರಣಿ
ಪ್ಯಾಲೆಸ್ಟೈನ್​​ ಪರವಾಗಿ ಘೋಷಣೆ
Edited By: ವಿವೇಕ ಬಿರಾದಾರ

Updated on: Nov 13, 2023 | 12:52 PM

ಕಲಬುರಗಿ ನ.13: ಇಸ್ರೇಲ್​ ಮತ್ತು ಪ್ಯಾಲೆಸ್ಟೈನ್​ನ ಹಮಾಸ್ (Israel-Hamas War) ​ಉಗ್ರರ ನಡುವೆ ಯುದ್ಧ ನಡೆದಿದೆ. ಪ್ಯಾಲೆಸ್ಟೈನ್​​ನಲ್ಲಿ ನಡೆಯುತ್ತಿರುವ ನರಮೇಧ ನಿಲ್ಲಿಸುವಂತೆ ಕಲಬುರಗಿ (Kalaburgi) ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಆಗ್ರಹಿಸಿದವು. ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಇಸ್ರೇಲ್‌- ಗಾಜಾ ಮಧ್ಯೆ ನಡೆಯುತ್ತಿರುವ ಯುದ್ಧದಿಂದ ಸಾಮಾನ್ಯ ಪ್ರಜೆಗಳು ಸಾವಿಗೀಡಾಗುತ್ತಿದ್ದಾರೆ. ಇದು ಯುದ್ಧ ರೀತಿ ಕಂಡು ಬರುತ್ತಿಲ್ಲ.

ಗಾಜಾ ಮತ್ತು ಪ್ಯಾಲೆಸ್ಟೈನ್​ನಲ್ಲಿ ನರಮೇಧ ನಡೆಯುತ್ತಿದೆ. ಮಕ್ಕಳು, ಅಮಾಯಕರು ಇಸ್ರೇಲ್​ ದಾಳಿಗೆ ಬಲಿಯಾಗುತ್ತಿದ್ದಾರೆ‌. ಯುದ್ಧದಿಂದ ಪ್ಯಾಲೆಸ್ಟೈನ್​ನಲ್ಲಿ ನರಮೇಧ ನಡೆಯುತ್ತಿದ್ದು, ಯುದ್ಧ ನಿಲ್ಲಿಸಿ ಶಾಂತಿ ನೆಲೆಸಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ವಿಜಯಪುರದಲ್ಲಿ ಪ್ಯಾಲೆಸ್ಟೈನ್ ಪರ ಘೋಷಣೆ

ವಿಜಯಪುರದ ಜುಮ್ಮಾ ಮಸೀದಿ ರಸ್ತೆಯಲ್ಲಿ ನವೆಂಬರ್​ 6ರಂದು ಎಸ್​ಡಿಪಿಐ ಕಾರ್ಯಕರ್ತರು ಪ್ಯಾಲೆಸ್ಟೈನ್ ಪರವಾಗಿ ಘೋಷಣೆ ಕೂಗಿ, ಪ್ರತಿಭಟನೆ ನಡೆಸಿದ್ದರು. ಎಸ್​ಡಿಪಿಐ ಜಿಲ್ಲಾಧ್ಯಕ್ಷ ಅತಾವುಲ್ಲಾ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಪ್ಯಾಲೆಸ್ಟೈನ್ ಪರ ಭಿತ್ತಿಪತ್ರ ಪ್ರದರ್ಶನ ಮಾಡಲಾಗಿತ್ತು. ಪ್ರತಿಭಟನೆಯಲ್ಲಿ ಅಪ್ರಾಪ್ತ ಮಕ್ಕಳು ಸಹಿತ ಭಾಗಿಯಾಗಿದ್ದರು. ಎಸ್​ಡಿಪಿಐ ಜಿಲ್ಲಾಧ್ಯಕ್ಷ ಅತಾವುಲ್ಲ ವಿರುದ್ಧ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Israel-Hamas War: ಮದುವೆ, ಮನರಂಜನೆ ರದ್ದು ಮಾಡಿ ಪ್ಯಾಲೆಸ್ಟೈನ್​ಗೆ ಹಣ ನೀಡುವಂತೆ ಭಟ್ಕಳ ಮುಸ್ಲಿಂ ಯೂಥ್ ಫೆಡರೇಶನ್ ಕರೆ

ಪ್ಯಾಲೆಸ್ಟೈನ್ ​ ಬೆಂಬಲಿಸಿ ವಿಡಿಯೋ ಹಂಚಿಕೊಂಡಿದ್ದ ಮುಸ್ಲಿಂ ಯುವಕ

ಪ್ಯಾಲೆಸ್ತೀನ್​ ಬೆಂಬಲಿಸಿ ವಿಡಿಯೋ ಹಂಚಿಕೊಂಡಿದ್ದ ಹೊಸಪೇಟೆಯ ಆಲಂ ಬಾಷಾ ವಿರುದ್ಧ ಸುಮುಟೋ ಪ್ರಕರಣ ದಾಖಲು ಮಾಡಲಾಗಿತ್ತು. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ PSI ಮುನಿರತ್ನ ನೀಡಿದ ದೂರಿನ ಆಧಾರದ ಮೇಲೆ CRPC 108-151 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಯುವಕನನ್ಮು ಪೊಲೀಸರು ವಶಕ್ಕೆ ಪಡೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us