Kalaburagi: ಓಪನ್​​ ಮೀಟಿಂಗ್​​ನಲ್ಲೇ ಹಣಕ್ಕೆ ತಹಶೀಲ್ದಾರ್​​ ಡಿಮ್ಯಾಂಡ್​​; ಆಡಿಯೋ ವೈರಲ್​​

ಕಲಬುರಗಿಯ ಜೇವರ್ಗಿ ತಹಶೀಲ್ದಾರ್ ವಿರುದ್ಧ ಸಿಬ್ಬಂದಿ ಬಳಿ ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಆಡಿಯೋ ವೈರಲ್ ಆಗಿದ್ದು, ಸಿಬ್ಬಂದಿ ಮೇಲಾಧಿಕಾರಿಗಳಿಗೆ ದೂರು ಕೂಡ ನೀಡಿದ್ದಾರೆ. ಆದರೆ, ತಹಶೀಲ್ದಾರ್ ಆರೋಪಗಳನ್ನು ನಿರಾಕರಿಸಿದ್ದು, 6 ತಿಂಗಳ ಹಿಂದೆ ಅಮಾನತಾದ ವಿಎ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಘಟನೆ ಸರ್ಕಾರಿ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Kalaburagi: ಓಪನ್​​ ಮೀಟಿಂಗ್​​ನಲ್ಲೇ ಹಣಕ್ಕೆ ತಹಶೀಲ್ದಾರ್​​ ಡಿಮ್ಯಾಂಡ್​​; ಆಡಿಯೋ ವೈರಲ್​​
ತಹಶೀಲ್ದಾರ್​​ ವಿರುದ್ಧ ಆರೋಪ
Edited By:

Updated on: Jan 16, 2026 | 3:12 PM

ಕಲಬುರಗಿ, ಜನವರಿ 16: ಸಿಬ್ಬಂದಿ ಬಳಿ ತಹಶೀಲ್ದಾರ್​​ ಅವರೇ ಹಣಕ್ಕಾಗಿ ಬೇಡಿಕೆ ಇಟ್ಟು ಕಿರುಕುಳ ನೀಡಿರುವ ಆರೋಪ ಕಲಬುರಗಿಯಲ್ಲಿ ಕೇಳಿಬಂದಿದ್ದು, ಜೇವರ್ಗಿ ತಹಶೀಲ್ದಾರ್​​​ ಮತ್ತು ಸಿಬ್ಬಂದಿ ನಡುವಿನ ಆಡಿಯೋ ವೈರಲ್​ ಆಗಿದೆ. ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಓಪನ್ ಮೀಟಿಂಗ್​ನಲ್ಲೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆಂದು ಹೇಳಲಾಗಿದ್ದು, ಕಿರುಕುಳದಿಂದ ಬೇಸತ್ತ ಸಿಬ್ಬಂದಿ ಈ ಬಗ್ಗೆ ಮೇಲಾಧಿಕಾರಿಗಳಿಗೆ ದೂರನ್ನೂ ನೀಡಿರುವ ಪ್ರಸಂಗ ನಡೆದಿದೆ.

ಸಿಬ್ಬಂದಿಗೆ ತಹಶೀಲ್ದಾರ್​​ ಆವಾಜ್


ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತೀರಿ, ಹಾಗಾಗಿ ನನಗೂ ಹಣ ನೀಡಿ ಎಂದು ತಹಶೀಲ್ದಾರ್​​ ಮಲ್ಲಣ್ಣ ಸಿಬ್ಬಂದಿಗೆ ಆವಾಜ್​​ ಹಾಕಿದ್ದಾರೆ ಎಂದು ದೂರಲಾಗಿದೆ. ತಹಶೀಲ್ದಾರ್ ಕಿರುಕುಳಕ್ಕೆ ಬೇಸತ್ತು RI ಜವಾಬ್ದಾರಿಯೇ ಬೇಡ, ನನ್ನನು ಕಚೇರಿ ಕೆಲಸಕ್ಕೆ ಹಾಕಿ, ನನಗೆ ಹಣ ನೀಡಲು ಆಗಲ್ಲ ಎಂದ ಸಿಬ್ಬಂದಿ ಅಲವತ್ತುಕೊಂಡಿದ್ದಾರೆ. ಸರ್ಕಾರಿ ಜಯಂತಿಗಳು, ಶಾಸಕರು ಹೇಳುವ ಕೆಲಸಗಳಿಗೆಲ್ಲ ನಾವು ಹಣ ಕೊಡಬೇಕು. ನಾವು ದುಡ್ಡನ್ನು ಎಲ್ಲಿಂದ ಕೊಡೋದು? ಎಂದು ತಹಶೀಲ್ದಾರ್​ ಮಲ್ಲಣ್ಣಗೆ ಸಿಬ್ಬಂದಿ ಪ್ರಶ್ನೆ ಹಾಕಿದ್ದರೂ ಎಲ್ಲಾ ಇಲಾಖೆಯವರು ಹಣ ಕೊಡ್ತಾರೆ ನೀವು ಕೊಡಿ ಎಂದು ಮಲ್ಲಣ್ಣ ಹೇಳಿದ್ದಾರೆ. ಇಲ್ಲವಾದರೆ ನಿಮ್ಮ ವಿರುದ್ಧ ತನಿಖೆಗೆ ಆದೇಶಿಸುವೆ ಎಂದು ಬೆದರಿಕೆಯನ್ನೂ ಹಾಕಿರೋದಾಗಿ ಸಿಬ್ಬಂದಿ ದೂರಿದ್ದಾರೆ.

ಇದನ್ನೂ ಓದಿ: ಶೂಟ್​ ಮಾಡಿಕೊಂಡು ಪತಿ ಆತ್ಮಹತ್ಯೆ; ನನ್ನ ಗಂಡ ಸೈಕೋ ಎಂದ ಪತ್ನಿ, ಆಗಿದ್ದೇನು?

ತಹಶೀಲ್ದಾರ್​​ ಸ್ಪಷ್ಟನೆ

ಇನ್ನು ತಮ್ಮ ಮೇಲೆ ಕೇಲಿಬಂದಿರುವ ಆರೋಪಗಳ ಕುರಿತು ಜೇವರ್ಗಿ ತಹಶೀಲ್ದಾರ ಮಲ್ಲಣ್ಣ ಯಲಗೋಡ್ ಪ್ರತಿಕ್ರಿಯಿಸಿದ್ದಾರೆ. 6 ತಿಂಗಳ ಹಿಂದೆ ಕನ್ನಡಭವನದಲ್ಲಿ ನಡೆದಿದ್ದ ಕಾರ್ಯಕ್ರಮ ಅಸ್ತವ್ಯಸ್ತವಾಗಿತ್ತು. ಈ ಬಗ್ಗೆ ನಾನು ಸಿಬ್ಬಂದಿ ಜೊತೆ ಸಭೆಯಲ್ಲಿ ಚರ್ಚಿಸಿದ್ದೇನೆಯೇ ಹೊರತು, ಯಾವ ಸಿಬ್ಬಂದಿ ಬಳಿಯೂ ಹಣಕ್ಕೆ ಡಿಮ್ಯಾಂಡ್ ಮಾಡಿಲ್ಲ. ಶರಣು ಎಂಬ ವಿಎಯನ್ನು 6 ತಿಂಗಳ ಹಿಂದೆ ಅಮಾನತು ಮಾಡಿದ್ದು, ಆತನೇ ಇದನ್ನೆಲ್ಲ ಮಾಡಿ ಎಲ್ಲ ಕಡೆ ದೂರು ಕೊಟ್ಟಿದ್ದಾನೆ. ನಾನು ಹಣ ಕೇಳಿದ್ರೆ ಎಲ್ಲ ಸಿಬ್ಬಂದಿ ಸೇರಿ ದೂರು ಕೊಡಬಹುದಾಗಿತ್ತು. ಈ ಹಿಂದಿನ ತಹಶೀಲ್ದಾರ್​​ ಅವರಿಗೂ ಆತ ಬ್ಲ್ಯಾಕ್​​ಮೇಲ್​​ ಮಾಡಿದ್ದಾನೆ‌. ಅದೇ ರೀತಿ ನನಗೂ ಸಹ ಬ್ಲ್ಯಾಕ್‌ಮೇಲ್ ಮಾಡಲು ಬಂದಿದ್ದಾನೆ‌. ಆದರೆ ಆತನ ಬೆದರಿಕೆಗೆ ನಾನು ಹೆದರಿಲ್ಲ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:11 pm, Fri, 16 January 26

ದತ್ತಾತ್ರೇಯ ಪಾಟೀಲ, ಕಲಬುರಗಿ

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us