ಕಲಬುರಗಿ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ, ಬಾವಿಯಲ್ಲಿ ಶವ ಪತ್ತೆ

ಕಲಬುರಗಿಯಲ್ಲಿ ದುರಂತ ಘಟನೆಯೊಂದು ಸಂಭವಿಸಿದೆ 12 ವರ್ಷದ ಬಾಲಕಿಯ ಶವ ಬಾವಿಯಲ್ಲಿ ಪತ್ತೆಯಾಗಿದ್ದು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಕಲಬುರಗಿ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ, ಬಾವಿಯಲ್ಲಿ ಶವ ಪತ್ತೆ
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Jul 18, 2023 | 1:49 PM

ಕಲಬುರಗಿ: 12 ವರ್ಷದ ಅಪ್ರಾಪ್ತ ಬಾಲಕಿ(12 Years Old Girl) ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿರುವ ದುರಂತ ಘಟನೆ ಕಲಬುರಗಿ(Kalaburagi) ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು (ಜುಲೈ 18) ಘಟನೆ ಬೆಳಕಿಗೆ ಬಂದಿದ್ದು ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

12 ವರ್ಷದ ಬಾಲಕಿ ಜುಲೈ 15 ರಂದು ತನ್ನ ಮನೆಯಿಂದ ಹೊರಟು, ಹತ್ತಿರದಲ್ಲಿ ವಾಸಿಸುತ್ತಿರುವ ತಮ್ಮ ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿ ಹೊರಟಿದ್ದಳು. ಆದ್ರೆ ಎರಡು ಮೂರು ದಿನ ಕಳೆದರೂ ಬಾಲಕಿ ಸಿಕ್ಕಿಲ್ಲ. ಹೀಗಾಗಿ ಮನೆಯವರೆಲ್ಲ ಹುಡುಕಾಡಿದ್ದಾರೆ. ಇಂದು (ಜುಲೈ 18) ಗ್ರಾಮದ ಹೊರವಲಯದ ಬಾವಿಯಲ್ಲಿ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬಾವಿಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಆರೋಪಿಯ ಗುರುತು ಪತ್ತೆಯಾಗಿಲ್ಲ. ಪೊಲೀಸರು ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ. ಸದ್ಯ ಆಳಂದ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಪ್ರಕರಣ ದಾಖಲಾಗಿದ್ದು ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಇದನ್ನೂ ಓದಿ: IKEAದಲ್ಲಿ ಮಹಿಳೆಯೊಬ್ಬರ ಊಟದ ಟೇಬಲ್​ ಮೇಲೆ ಬಿದ್ದ ಸತ್ತ ಇಲಿ

ಪುತ್ರನ ಕೈಯಿಂದಲೇ ಪೋಷಕರ ದುರಂತ ಅಂತ್ಯ

ಬೆಂಗಳೂರಿನಲ್ಲಿ ಮಂಗಳೂರು ಮೂಲದ ದಂಪತಿ ಬರ್ಬರ ಹತ್ಯೆಯಾಗಿದೆ. ಕುಡಿದ ಮತ್ತಿನಲ್ಲಿ ಬಂದ ಪುತ್ರ ತಂದೆ-ತಾಯಿಯನ್ನೇ ಹತ್ಯೆಗೈದಿದ್ದಾನೆ. ತಂದೆ ಭಾಸ್ಕರ್, ತಾಯಿ ಶಾಂತಾಳನ್ನು ಕೊಲೆಯಾದ ದಂಪತಿ. ಶರತ್, ಪೋಷಕರನ್ನು ಕೊಲೆ ಮಾಡಿದ ಮಗ. 20 ವರ್ಷಗಳಿಂದ ಭಾಸ್ಕರ್, ಶಾಂತಾ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಇತ್ತೀಚೆಗೆ ಶಾಂತಾ ಅವರು ಕೇಂದ್ರದ ನೌಕರಿಯಿಂದ ನಿವೃತ್ತಿ ಹೊಂದಿದ್ದರು. ಭಾಸ್ಕರ್ ಖಾಸಗಿ ಕ್ಯಾಂಟೀನ್​ವೊಂದರಲ್ಲಿ ಕ್ಯಾಶಿಯರ್ ಆಗಿದ್ದರು. ಮಗ ಶರತ್ ಮನೆಯಲ್ಲಿ ಆಗಾಗ ಸೈಕೋ ರೀತಿ ವರ್ತಿಸುತ್ತಿದ್ದ. ನಿನ್ನೆ ಸಂಜೆ ಕುಡಿದು ಬಂದು ತಂದೆ-ತಾಯಿ ಜೊತೆ ಗಲಾಟೆ ಮಾಡಿದ್ದ. ಈ ವೇಳೆ ರಾಡ್​ನಿಂದ ಹೊಡೆದು ಹತ್ಯೆಗೈದಿದ್ದಾನೆ. ತಂದೆ-ತಾಯಿಯನ್ನು ಕೊಲೆಗೈದು ಮನೆ ಲಾಕ್ ಮಾಡಿ ಪರಾರಿಯಾಗಿದ್ದಾನೆ. ದೊಡ್ಡ ಮಗ ಇಂದು ಬೆಳಗ್ಗೆ ತಂದೆ-ತಾಯಿಗೆ ಕರೆ ಮಾಡಿದ್ದಾನೆ. ಪೋಷಕರು ಕರೆ ಸ್ವೀಕರಿಸದ ಹಿನ್ನೆಲೆ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾನೆ. ಪಕ್ಕದ ಮನೆಯವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’