AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ, ಬಾವಿಯಲ್ಲಿ ಶವ ಪತ್ತೆ

ಕಲಬುರಗಿಯಲ್ಲಿ ದುರಂತ ಘಟನೆಯೊಂದು ಸಂಭವಿಸಿದೆ 12 ವರ್ಷದ ಬಾಲಕಿಯ ಶವ ಬಾವಿಯಲ್ಲಿ ಪತ್ತೆಯಾಗಿದ್ದು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಕಲಬುರಗಿ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ, ಬಾವಿಯಲ್ಲಿ ಶವ ಪತ್ತೆ
ಸಾಂದರ್ಭಿಕ ಚಿತ್ರ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 18, 2023 | 1:49 PM

Share

ಕಲಬುರಗಿ: 12 ವರ್ಷದ ಅಪ್ರಾಪ್ತ ಬಾಲಕಿ(12 Years Old Girl) ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿರುವ ದುರಂತ ಘಟನೆ ಕಲಬುರಗಿ(Kalaburagi) ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು (ಜುಲೈ 18) ಘಟನೆ ಬೆಳಕಿಗೆ ಬಂದಿದ್ದು ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

12 ವರ್ಷದ ಬಾಲಕಿ ಜುಲೈ 15 ರಂದು ತನ್ನ ಮನೆಯಿಂದ ಹೊರಟು, ಹತ್ತಿರದಲ್ಲಿ ವಾಸಿಸುತ್ತಿರುವ ತಮ್ಮ ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿ ಹೊರಟಿದ್ದಳು. ಆದ್ರೆ ಎರಡು ಮೂರು ದಿನ ಕಳೆದರೂ ಬಾಲಕಿ ಸಿಕ್ಕಿಲ್ಲ. ಹೀಗಾಗಿ ಮನೆಯವರೆಲ್ಲ ಹುಡುಕಾಡಿದ್ದಾರೆ. ಇಂದು (ಜುಲೈ 18) ಗ್ರಾಮದ ಹೊರವಲಯದ ಬಾವಿಯಲ್ಲಿ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬಾವಿಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಆರೋಪಿಯ ಗುರುತು ಪತ್ತೆಯಾಗಿಲ್ಲ. ಪೊಲೀಸರು ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ. ಸದ್ಯ ಆಳಂದ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಪ್ರಕರಣ ದಾಖಲಾಗಿದ್ದು ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಇದನ್ನೂ ಓದಿ: IKEAದಲ್ಲಿ ಮಹಿಳೆಯೊಬ್ಬರ ಊಟದ ಟೇಬಲ್​ ಮೇಲೆ ಬಿದ್ದ ಸತ್ತ ಇಲಿ

ಪುತ್ರನ ಕೈಯಿಂದಲೇ ಪೋಷಕರ ದುರಂತ ಅಂತ್ಯ

ಬೆಂಗಳೂರಿನಲ್ಲಿ ಮಂಗಳೂರು ಮೂಲದ ದಂಪತಿ ಬರ್ಬರ ಹತ್ಯೆಯಾಗಿದೆ. ಕುಡಿದ ಮತ್ತಿನಲ್ಲಿ ಬಂದ ಪುತ್ರ ತಂದೆ-ತಾಯಿಯನ್ನೇ ಹತ್ಯೆಗೈದಿದ್ದಾನೆ. ತಂದೆ ಭಾಸ್ಕರ್, ತಾಯಿ ಶಾಂತಾಳನ್ನು ಕೊಲೆಯಾದ ದಂಪತಿ. ಶರತ್, ಪೋಷಕರನ್ನು ಕೊಲೆ ಮಾಡಿದ ಮಗ. 20 ವರ್ಷಗಳಿಂದ ಭಾಸ್ಕರ್, ಶಾಂತಾ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಇತ್ತೀಚೆಗೆ ಶಾಂತಾ ಅವರು ಕೇಂದ್ರದ ನೌಕರಿಯಿಂದ ನಿವೃತ್ತಿ ಹೊಂದಿದ್ದರು. ಭಾಸ್ಕರ್ ಖಾಸಗಿ ಕ್ಯಾಂಟೀನ್​ವೊಂದರಲ್ಲಿ ಕ್ಯಾಶಿಯರ್ ಆಗಿದ್ದರು. ಮಗ ಶರತ್ ಮನೆಯಲ್ಲಿ ಆಗಾಗ ಸೈಕೋ ರೀತಿ ವರ್ತಿಸುತ್ತಿದ್ದ. ನಿನ್ನೆ ಸಂಜೆ ಕುಡಿದು ಬಂದು ತಂದೆ-ತಾಯಿ ಜೊತೆ ಗಲಾಟೆ ಮಾಡಿದ್ದ. ಈ ವೇಳೆ ರಾಡ್​ನಿಂದ ಹೊಡೆದು ಹತ್ಯೆಗೈದಿದ್ದಾನೆ. ತಂದೆ-ತಾಯಿಯನ್ನು ಕೊಲೆಗೈದು ಮನೆ ಲಾಕ್ ಮಾಡಿ ಪರಾರಿಯಾಗಿದ್ದಾನೆ. ದೊಡ್ಡ ಮಗ ಇಂದು ಬೆಳಗ್ಗೆ ತಂದೆ-ತಾಯಿಗೆ ಕರೆ ಮಾಡಿದ್ದಾನೆ. ಪೋಷಕರು ಕರೆ ಸ್ವೀಕರಿಸದ ಹಿನ್ನೆಲೆ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾನೆ. ಪಕ್ಕದ ಮನೆಯವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?