AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ, ಬಾವಿಯಲ್ಲಿ ಶವ ಪತ್ತೆ

ಕಲಬುರಗಿಯಲ್ಲಿ ದುರಂತ ಘಟನೆಯೊಂದು ಸಂಭವಿಸಿದೆ 12 ವರ್ಷದ ಬಾಲಕಿಯ ಶವ ಬಾವಿಯಲ್ಲಿ ಪತ್ತೆಯಾಗಿದ್ದು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಕಲಬುರಗಿ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ, ಬಾವಿಯಲ್ಲಿ ಶವ ಪತ್ತೆ
ಸಾಂದರ್ಭಿಕ ಚಿತ್ರ
ಸಂಜಯ್ಯಾ ಚಿಕ್ಕಮಠ
| Edited By: ಆಯೇಷಾ ಬಾನು|

Updated on: Jul 18, 2023 | 1:49 PM

Share

ಕಲಬುರಗಿ: 12 ವರ್ಷದ ಅಪ್ರಾಪ್ತ ಬಾಲಕಿ(12 Years Old Girl) ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿರುವ ದುರಂತ ಘಟನೆ ಕಲಬುರಗಿ(Kalaburagi) ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು (ಜುಲೈ 18) ಘಟನೆ ಬೆಳಕಿಗೆ ಬಂದಿದ್ದು ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

12 ವರ್ಷದ ಬಾಲಕಿ ಜುಲೈ 15 ರಂದು ತನ್ನ ಮನೆಯಿಂದ ಹೊರಟು, ಹತ್ತಿರದಲ್ಲಿ ವಾಸಿಸುತ್ತಿರುವ ತಮ್ಮ ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿ ಹೊರಟಿದ್ದಳು. ಆದ್ರೆ ಎರಡು ಮೂರು ದಿನ ಕಳೆದರೂ ಬಾಲಕಿ ಸಿಕ್ಕಿಲ್ಲ. ಹೀಗಾಗಿ ಮನೆಯವರೆಲ್ಲ ಹುಡುಕಾಡಿದ್ದಾರೆ. ಇಂದು (ಜುಲೈ 18) ಗ್ರಾಮದ ಹೊರವಲಯದ ಬಾವಿಯಲ್ಲಿ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬಾವಿಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಆರೋಪಿಯ ಗುರುತು ಪತ್ತೆಯಾಗಿಲ್ಲ. ಪೊಲೀಸರು ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ. ಸದ್ಯ ಆಳಂದ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಪ್ರಕರಣ ದಾಖಲಾಗಿದ್ದು ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಇದನ್ನೂ ಓದಿ: IKEAದಲ್ಲಿ ಮಹಿಳೆಯೊಬ್ಬರ ಊಟದ ಟೇಬಲ್​ ಮೇಲೆ ಬಿದ್ದ ಸತ್ತ ಇಲಿ

ಪುತ್ರನ ಕೈಯಿಂದಲೇ ಪೋಷಕರ ದುರಂತ ಅಂತ್ಯ

ಬೆಂಗಳೂರಿನಲ್ಲಿ ಮಂಗಳೂರು ಮೂಲದ ದಂಪತಿ ಬರ್ಬರ ಹತ್ಯೆಯಾಗಿದೆ. ಕುಡಿದ ಮತ್ತಿನಲ್ಲಿ ಬಂದ ಪುತ್ರ ತಂದೆ-ತಾಯಿಯನ್ನೇ ಹತ್ಯೆಗೈದಿದ್ದಾನೆ. ತಂದೆ ಭಾಸ್ಕರ್, ತಾಯಿ ಶಾಂತಾಳನ್ನು ಕೊಲೆಯಾದ ದಂಪತಿ. ಶರತ್, ಪೋಷಕರನ್ನು ಕೊಲೆ ಮಾಡಿದ ಮಗ. 20 ವರ್ಷಗಳಿಂದ ಭಾಸ್ಕರ್, ಶಾಂತಾ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಇತ್ತೀಚೆಗೆ ಶಾಂತಾ ಅವರು ಕೇಂದ್ರದ ನೌಕರಿಯಿಂದ ನಿವೃತ್ತಿ ಹೊಂದಿದ್ದರು. ಭಾಸ್ಕರ್ ಖಾಸಗಿ ಕ್ಯಾಂಟೀನ್​ವೊಂದರಲ್ಲಿ ಕ್ಯಾಶಿಯರ್ ಆಗಿದ್ದರು. ಮಗ ಶರತ್ ಮನೆಯಲ್ಲಿ ಆಗಾಗ ಸೈಕೋ ರೀತಿ ವರ್ತಿಸುತ್ತಿದ್ದ. ನಿನ್ನೆ ಸಂಜೆ ಕುಡಿದು ಬಂದು ತಂದೆ-ತಾಯಿ ಜೊತೆ ಗಲಾಟೆ ಮಾಡಿದ್ದ. ಈ ವೇಳೆ ರಾಡ್​ನಿಂದ ಹೊಡೆದು ಹತ್ಯೆಗೈದಿದ್ದಾನೆ. ತಂದೆ-ತಾಯಿಯನ್ನು ಕೊಲೆಗೈದು ಮನೆ ಲಾಕ್ ಮಾಡಿ ಪರಾರಿಯಾಗಿದ್ದಾನೆ. ದೊಡ್ಡ ಮಗ ಇಂದು ಬೆಳಗ್ಗೆ ತಂದೆ-ತಾಯಿಗೆ ಕರೆ ಮಾಡಿದ್ದಾನೆ. ಪೋಷಕರು ಕರೆ ಸ್ವೀಕರಿಸದ ಹಿನ್ನೆಲೆ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾನೆ. ಪಕ್ಕದ ಮನೆಯವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್