AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ವಿಶ್ವ ಗುರುವಾದರೆ, ನಾವು ವಿಶ್ವ ಮಾನವರು: ನಟ ಪ್ರಕಾಶ್ ರಾಜ್​​

ಕಲಬುರಗಿ ನಗರದ ರಂಗಮಂದಿರದಲ್ಲಿ ವಿವಿಧ ಸಂಘಟನೆಗಳು ಆಯೋಜಿಸಿರುವ ಸಂವಾದ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಬಹುಭಾಷಾ ನಟ ಪ್ರಕಾಶ್ ರಾಜ್​, ಪ್ರಧಾನಿ ನರೇಂದ್ರ ಮೋದಿ ವಿಶ್ವ ಗುರುವಾದರೆ, ನಾವು ವಿಶ್ವ ಮಾನವರು ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ವಿಶ್ವ ಗುರುವಾದರೆ, ನಾವು ವಿಶ್ವ ಮಾನವರು: ನಟ ಪ್ರಕಾಶ್ ರಾಜ್​​
ಬಹುಭಾಷಾ ನಟ ಪ್ರಕಾಶ್ ರಾಜ್​
ಸಂಜಯ್ಯಾ ಚಿಕ್ಕಮಠ
| Edited By: |

Updated on: Sep 10, 2023 | 8:44 PM

Share

ಕಲಬುರಗಿ, ಸೆಪ್ಟೆಂಬರ್​ 10: ಪ್ರಧಾನಿ ನರೇಂದ್ರ ಮೋದಿ ವಿಶ್ವ ಗುರುವಾದರೆ, ನಾವು ವಿಶ್ವ ಮಾನವರು ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj)​ ಹೇಳಿದ್ದಾರೆ. ನಗರದ ರಂಗಮಂದಿರದಲ್ಲಿ ವಿವಿಧ ಸಂಘಟನೆಗಳು ಆಯೋಜಿಸಿರುವ ಸಂವಾದ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ವಿಶ್ವಮಾನವರ ಸಂದೇಶ ಮುಖ್ಯ, ಬೇರೇನೂ ಅಲ್ಲ. ಕೆಲಸ ಇಲ್ಲದವರು ನನ್ನ ಬಗ್ಗೆ ಏನೇನೋ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

ಸಚಿವ ಉದಯನಿಧಿ ಸ್ಟಾಲಿನ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸನಾತನ ಧರ್ಮ ಡೆಂಘೀ, ಮಲೇರಿಯಾಗೆ ಹೋಲಿಸಿದರೆ ತಪ್ಪೇನು ಎಂದು ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಸಮರ್ಥಿಸಿದರು. ನಾನು ಯಾವುದೇ ಧರ್ಮದ ಪರ ಅಲ್ಲ, ಜನರ ಪರ ಇದ್ದೇನೆ ಎಂದರು.

ಇದನ್ನೂ ಓದಿ: ಬೆಳಗಾವಿ: ಹಲವರ ಖಾತೆಗೆ ಬರದ ಗೃಹಲಕ್ಷ್ಮೀ ಹಣ; ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಿಷ್ಟು?

ಧರ್ಮಯುದ್ಧ ಯಾವಾಗ ಮುಗಿಯುತ್ತೆ ಅನ್ನುವುದು ಗೊತ್ತಾಗಲ್ಲ. ಧರ್ಮಯುದ್ಧ ಎಂಬುದು ಕಾಳ್ಗಿಚ್ಚು ಇದ್ದಂತೆ. ಅದರ ಮೂಲವು ಗೊತ್ತಾಗುವುದಿಲ್ಲ ಅಂತ್ಯ ಕೂಡ ಗೊತ್ತಾಗಲ್ಲ. ರಾಜರ ಕಾಲದಲ್ಲಿ ಕೆಲವೊಮ್ಮೆ ಸಂಬಳ ಕೊಡುವುದಕ್ಕೆ ಆಗುತ್ತಿರಲಿಲ್ಲ. ರಾಜರ ಜತೆ ಕೆಲಸ ಮಾಡುವವರಿಗೆ ಸಂಬಳ ಕೊಡುವುದಕ್ಕೂ ಆಗುತ್ತಿರಲಿಲ್ಲ.

ಇದನ್ನೂ ಓದಿ: ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದಿಂದ ನಾಳೆ ಬೆಂಗಳೂರು ಬಂದ್​ಗೆ ಕರೆ: ಪರ್ಯಾಯ ಮಾರ್ಗಗಳು ಹೀಗಿವೆ

ಆಗ ಆ ಸೈನಿಕರು ಲೂಟಿ, ಅತ್ಯಾಚಾರ ದರೋಡೆ ಮಾಡುತ್ತಿದ್ದರು. ಇಂಥವರನ್ನೇ ರಾಜಕಿಯದಲ್ಲೂ ಬಳಸಿಕೊಳ್ಳುತ್ತಿದ್ದಾರೆ. ರೌಡಿಗಳನ್ನು ರಾಜಕೀಯಕ್ಕೆ ಯಾಕೆ ಸೇರಿಸಿಕೊಳ್ಳುತ್ತೀರಾ? ಮತ್ತು ಅಂತವರನ್ನೇ ಎಂಪಿ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಪ್ರಕಾಶ್​ ರೈ ಆಗಮನಕ್ಕೆ ಹಿಂದೂ ಜಾಗೃತಿ ಸೇನೆ ಸಂಘಟನೆ ವಿರೋಧ 

ಕಲಬುರಗಿ ಜಿಲ್ಲೆಗೆ ಪ್ರಕಾಶ್ ರಾಜ್ ಆಗಮನಕ್ಕೆ ಹಿಂದೂ ಜಾಗೃತಿ ಸೇನೆ ಸಂಘಟನೆ ವಿರೋಧ ಮಾಡಿದ್ದು, ಪ್ರಕಾಶ್ ರೈ ಬರುವುದನ್ನು ತಡೆಯಬೇಕು ಅಂತ ಆಗ್ರಹಿಸಿದ್ದರು. ಕಲಬುರಗಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳಿಗೆ ಸಂಘಟನೆ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಪ್ರಕಾಶ್ ರಾಜ್ ಹಿಂದೂ ಧರ್ಮದ ವಿರೋಧಿಯಾಗಿದ್ದಾರೆ. ಹಿಂದೂ ಧರ್ಮದ ವಿರುದ್ಧ ಹೇಳಿಕೆ ನೀಡುತ್ತಾರೆ. ಅವರು ಬರುವುದರಿಂದ ಕಲಬುರಗಿ ಜಿಲ್ಲೆಯಲ್ಲಿ ಕೋಮು ಭಾವನೆ ಹೆಚ್ಚಾಗುತ್ತದೆ. ಹಾಗಾಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್