AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ವಿಶ್ವ ಗುರುವಾದರೆ, ನಾವು ವಿಶ್ವ ಮಾನವರು: ನಟ ಪ್ರಕಾಶ್ ರಾಜ್​​

ಕಲಬುರಗಿ ನಗರದ ರಂಗಮಂದಿರದಲ್ಲಿ ವಿವಿಧ ಸಂಘಟನೆಗಳು ಆಯೋಜಿಸಿರುವ ಸಂವಾದ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಬಹುಭಾಷಾ ನಟ ಪ್ರಕಾಶ್ ರಾಜ್​, ಪ್ರಧಾನಿ ನರೇಂದ್ರ ಮೋದಿ ವಿಶ್ವ ಗುರುವಾದರೆ, ನಾವು ವಿಶ್ವ ಮಾನವರು ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ವಿಶ್ವ ಗುರುವಾದರೆ, ನಾವು ವಿಶ್ವ ಮಾನವರು: ನಟ ಪ್ರಕಾಶ್ ರಾಜ್​​
ಬಹುಭಾಷಾ ನಟ ಪ್ರಕಾಶ್ ರಾಜ್​
ಸಂಜಯ್ಯಾ ಚಿಕ್ಕಮಠ
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 10, 2023 | 8:44 PM

Share

ಕಲಬುರಗಿ, ಸೆಪ್ಟೆಂಬರ್​ 10: ಪ್ರಧಾನಿ ನರೇಂದ್ರ ಮೋದಿ ವಿಶ್ವ ಗುರುವಾದರೆ, ನಾವು ವಿಶ್ವ ಮಾನವರು ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj)​ ಹೇಳಿದ್ದಾರೆ. ನಗರದ ರಂಗಮಂದಿರದಲ್ಲಿ ವಿವಿಧ ಸಂಘಟನೆಗಳು ಆಯೋಜಿಸಿರುವ ಸಂವಾದ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ವಿಶ್ವಮಾನವರ ಸಂದೇಶ ಮುಖ್ಯ, ಬೇರೇನೂ ಅಲ್ಲ. ಕೆಲಸ ಇಲ್ಲದವರು ನನ್ನ ಬಗ್ಗೆ ಏನೇನೋ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

ಸಚಿವ ಉದಯನಿಧಿ ಸ್ಟಾಲಿನ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸನಾತನ ಧರ್ಮ ಡೆಂಘೀ, ಮಲೇರಿಯಾಗೆ ಹೋಲಿಸಿದರೆ ತಪ್ಪೇನು ಎಂದು ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಸಮರ್ಥಿಸಿದರು. ನಾನು ಯಾವುದೇ ಧರ್ಮದ ಪರ ಅಲ್ಲ, ಜನರ ಪರ ಇದ್ದೇನೆ ಎಂದರು.

ಇದನ್ನೂ ಓದಿ: ಬೆಳಗಾವಿ: ಹಲವರ ಖಾತೆಗೆ ಬರದ ಗೃಹಲಕ್ಷ್ಮೀ ಹಣ; ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಿಷ್ಟು?

ಧರ್ಮಯುದ್ಧ ಯಾವಾಗ ಮುಗಿಯುತ್ತೆ ಅನ್ನುವುದು ಗೊತ್ತಾಗಲ್ಲ. ಧರ್ಮಯುದ್ಧ ಎಂಬುದು ಕಾಳ್ಗಿಚ್ಚು ಇದ್ದಂತೆ. ಅದರ ಮೂಲವು ಗೊತ್ತಾಗುವುದಿಲ್ಲ ಅಂತ್ಯ ಕೂಡ ಗೊತ್ತಾಗಲ್ಲ. ರಾಜರ ಕಾಲದಲ್ಲಿ ಕೆಲವೊಮ್ಮೆ ಸಂಬಳ ಕೊಡುವುದಕ್ಕೆ ಆಗುತ್ತಿರಲಿಲ್ಲ. ರಾಜರ ಜತೆ ಕೆಲಸ ಮಾಡುವವರಿಗೆ ಸಂಬಳ ಕೊಡುವುದಕ್ಕೂ ಆಗುತ್ತಿರಲಿಲ್ಲ.

ಇದನ್ನೂ ಓದಿ: ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದಿಂದ ನಾಳೆ ಬೆಂಗಳೂರು ಬಂದ್​ಗೆ ಕರೆ: ಪರ್ಯಾಯ ಮಾರ್ಗಗಳು ಹೀಗಿವೆ

ಆಗ ಆ ಸೈನಿಕರು ಲೂಟಿ, ಅತ್ಯಾಚಾರ ದರೋಡೆ ಮಾಡುತ್ತಿದ್ದರು. ಇಂಥವರನ್ನೇ ರಾಜಕಿಯದಲ್ಲೂ ಬಳಸಿಕೊಳ್ಳುತ್ತಿದ್ದಾರೆ. ರೌಡಿಗಳನ್ನು ರಾಜಕೀಯಕ್ಕೆ ಯಾಕೆ ಸೇರಿಸಿಕೊಳ್ಳುತ್ತೀರಾ? ಮತ್ತು ಅಂತವರನ್ನೇ ಎಂಪಿ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಪ್ರಕಾಶ್​ ರೈ ಆಗಮನಕ್ಕೆ ಹಿಂದೂ ಜಾಗೃತಿ ಸೇನೆ ಸಂಘಟನೆ ವಿರೋಧ 

ಕಲಬುರಗಿ ಜಿಲ್ಲೆಗೆ ಪ್ರಕಾಶ್ ರಾಜ್ ಆಗಮನಕ್ಕೆ ಹಿಂದೂ ಜಾಗೃತಿ ಸೇನೆ ಸಂಘಟನೆ ವಿರೋಧ ಮಾಡಿದ್ದು, ಪ್ರಕಾಶ್ ರೈ ಬರುವುದನ್ನು ತಡೆಯಬೇಕು ಅಂತ ಆಗ್ರಹಿಸಿದ್ದರು. ಕಲಬುರಗಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳಿಗೆ ಸಂಘಟನೆ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಪ್ರಕಾಶ್ ರಾಜ್ ಹಿಂದೂ ಧರ್ಮದ ವಿರೋಧಿಯಾಗಿದ್ದಾರೆ. ಹಿಂದೂ ಧರ್ಮದ ವಿರುದ್ಧ ಹೇಳಿಕೆ ನೀಡುತ್ತಾರೆ. ಅವರು ಬರುವುದರಿಂದ ಕಲಬುರಗಿ ಜಿಲ್ಲೆಯಲ್ಲಿ ಕೋಮು ಭಾವನೆ ಹೆಚ್ಚಾಗುತ್ತದೆ. ಹಾಗಾಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ
ಕಂಠ ಪೂರ್ತಿ ಕುಡಿದು ಬಂದು ಶಾಲೆಯಲ್ಲಿ ಮಲಗಿದ ಮುಖ್ಯ ಶಿಕ್ಷಕ: ವಿಡಿಯೋ ನೋಡಿ
ಕಂಠ ಪೂರ್ತಿ ಕುಡಿದು ಬಂದು ಶಾಲೆಯಲ್ಲಿ ಮಲಗಿದ ಮುಖ್ಯ ಶಿಕ್ಷಕ: ವಿಡಿಯೋ ನೋಡಿ
ವಿಮಾನಯಾನ ಸಚಿವರೊಂದಿಗೆ ನಡೆದ ಸಭೆ ಅತ್ಯಂತ ಫಲಪ್ರದವಾಗಿತ್ತು: ಪಾಟೀಲ್
ವಿಮಾನಯಾನ ಸಚಿವರೊಂದಿಗೆ ನಡೆದ ಸಭೆ ಅತ್ಯಂತ ಫಲಪ್ರದವಾಗಿತ್ತು: ಪಾಟೀಲ್