ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಕಲಬುರಗಿಯ 3 ಯುವಕರು ಮರಳಿ ತಾಯ್ನಾಡಿಗೆ

| Updated By: ವಿವೇಕ ಬಿರಾದಾರ

Updated on: Sep 15, 2024 | 11:51 AM

ಕೆಲಸದ ಆಸೆಗಾಗಿ ರಷ್ಯಾಗೆ ತೆರಳಿದ್ದ ಕಲಬುರಗಿ ಮೂಲದ ಮೂವರು ತಾಯ್ನಾಡಿಗೆ ಮರಳಿದ್ದಾರೆ. ಯುವಕರು ಮುಂಬೈ ಮೂಲದ ಏಜೆಂಟ್ ಮೂಲಕ ರಷ್ಯಾಗೆ ತೆರಳಿದ್ದರು. ಮುಂಬೈ ಮೂಲದ ಏಜೆಂಟ್​ ಈ ಯುವಕರಿಗೆ ರಷ್ಯಾದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಕಳುಹಿಸಿದ್ದರು. ಆದರೆ, ಅಲ್ಲಿ ನಡೆದಿದ್ದೇ ಬೇರೆ.

ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಕಲಬುರಗಿಯ 3 ಯುವಕರು ಮರಳಿ ತಾಯ್ನಾಡಿಗೆ
ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಯುವಕರು
Follow us on

ಕಲಬುರಗಿ, ಸೆಪ್ಟೆಂಬರ್​ 15: ರಷ್ಯಾದಲ್ಲಿ (Russia) ಸಿಲುಕಿಕೊಂಡಿದ್ದ ಕಲಬುರಗಿಯ (Kalburagi) ಮೂವರು ಯುವಕರು ತಾಯ್ನಾಡಿಗೆ ಮರಳಿದ್ದಾರೆ. ಕಲಬುರಗಿಯ ಮೂವರು ಸೇರಿ ಒಟ್ಟು ಆರು ಜನ ಭಾರತೀಯರು ತವರಿಗೆ ವಾಪಸ್ ಆಗಿದ್ದಾರೆ. ಕಲಬುರಗಿಯ ನೂರಾನಿ ಮೊಹಲ್ಲಾ ನಿವಾಸಿ ಸೈಯದ್ ಇಲಿಯಾಸ್ ಹುಸೇನಿ, ಇಸ್ಲಾಮಬಾದ್​​ ಕಾಲೋನಿ ನಿವಾಸಿ ಮೊಹಮ್ಮದ್ ಸಮೀರ್, ಮಿಜಗುರಿ ಪ್ರದೇಶದ ಮೊಹಮ್ಮದ್ ನಯೂಮ್ ವಾಪಸ್​ ಆದ ಯುವಕರು.

ಯುವಕರು ಮುಂಬೈ ಮೂಲದ ಏಜೆಂಟ್ ಮೂಲಕ ರಷ್ಯಾಗೆ ತೆರಳಿದ್ದರು. ಮುಂಬೈ ಮೂಲದ ಏಜೆಂಟ್​ ಈ ಯುವಕರಿಗೆ ರಷ್ಯಾದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಕಳುಹಿಸಿದ್ದರು. ಆದರೆ, ಯುವಕರನ್ನು ರಷ್ಯಾ ಸೇನೆ ಯುದ್ಧ ಭೂಮಿಯಲ್ಲಿ ಬಳಸಿಕೊಂಡಿತ್ತು. ಯುವಕರಿಗೆ ರಷ್ಯಾದ ಸೈನ್ಯದಲ್ಲಿ ಬಂಕರ್‌ ಅಗೆಯುವ ಕೆಲಸ ನೀಡಲಾಗಿತ್ತು. ಈ ಕುರಿತು ಯುವಕರು ವಿಡಿಯೋ ಮಾಡಿ ಕಷ್ಟ ತೋಡಿಕೊಂಡಿದ್ದರು.

ಇದನ್ನೂ ಓದಿ: ಗ್ರಾಮ ಪಂಚಾಯತಿ ಮಾಜಿ ಸದಸ್ಯನ ತಲೆಗೆ 3 ಗುಂಡು ಹೊಡೆದು ಬರ್ಬರ ಹತ್ಯೆ

ಬಳಿಕ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಯುವಕರನ್ನು ಮರಳಿ ತರುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದರು. ಆರೇಳು ತಿಂಗಳ ಬಳಿಕ ಯುವಕರು ತಾಯ್ನಾಡಿಗೆ ಮರಳಿದ್ದಾರೆ.

ಏಜೆಂಟ್ ಮೂಲಕ ಅವರು ರಷ್ಯಾಗೆ ತೆರಳಿದ್ದರು: ಡಿಸಿ

ಯುವಕರು ವಾಪಸ್​ ಆದ ಬಗ್ಗೆ ಕಲಬುರಗಿಯಲ್ಲಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಮಾತನಾಡಿ, ಬಹಳ ದಿನಗಳ ನಮ್ಮ ಪ್ರಯತ್ನದ ಬಳಿಕ ನಮ್ಮ ಜಿಲ್ಲೆಯ ಮೂರು ಜನ ಯುವಕರು ವಾಪಸ್ ಬಂದಿದ್ದಾರೆ. ಏಜೆಂಟ್ ಮೂಲಕ ಅವರು ರಷ್ಯಾಗೆ ತೆರಳಿದ್ದರು. ಕೆಲಸ ಆಮೀಷ ತೋರಿಸಿ ಅವರನ್ನ ಯುದ್ಧಕ್ಕೆ ಬಳಸಿಕೊಳ್ಳಲಾಗಿತ್ತು. ಜಿಲ್ಲಾಡಳಿತ ನಿರಂತರ ಪ್ರಯತ್ನದ ಫಲವಾಗಿ ವಾಪಸ್ ಬಂದಿದ್ದಾರೆ. ಪ್ರಧಾನಿಯವರು ಖುದ್ದು ರಷ್ಯಾಗೆ ಪತ್ರ ಬರೆದಿದ್ದಾರೆ. ಜನಪ್ರತಿನಿಧಿಗಳ ಸಹಾಯದಿಂದ ವಾಪಸ್ ಬಂದಿದ್ದಾರೆ. ನಮಗೆ ಎಲ್ಲ ಜನಪ್ರತಿ‌ನಿಧಿಗಳು ಸಹಾಯ ಮಾಡಿದ್ದಾರೆ. ಆದ್ದರಿಂದ ಜಿಲ್ಲೆಯ ಯುವಕರು ಸುರಕ್ಷಿತವಾಗಿ ವಾಪಸ್ ಬಂದಿದ್ದಾರೆ. ಈ ರೀತಿ ಯಾರು ಮೋಸ ಹೋಗಬೇಡಿ. ಶೀಘ್ರದಲ್ಲೇ ನಾವು ಜಿಲ್ಲೆಯಲ್ಲಿ ಕಾರ್ಯಗಾರ ಮಾಡುತ್ತೇವೆ. ಎಮೀಗ್ರೇಷನ್ ಅವರ ಜೊತೆ ಸೇರಿ ಕಾರ್ಯಗಾರ ಮಾಡಿ ಯುವಕರಿಗೆ ಅರಿವು ಮೂಡಿಸುತ್ತೆವೆ ಎಂದು ಹೇಳಿದರು

ಮಲ್ಲಿಕಾರ್ಜುನ್​ ಖರ್ಗೆ ಪತ್ರ

ಕಲಬುರಗಿ ಜಿಲ್ಲೆಯ ಮೂವರು ಹಾಗೂ ತೆಲಂಗಾಣದ ಓರ್ವ ಯುವಕರಿಗೆ ಕೆಲಸದ ಆಮಿಷವೊಡ್ಡಿ ಅವರನ್ನು ರಷ್ಯಾಕ್ಕೆ ಕರೆಸಿಕೊಂಡು, ಬಲವಂತವಾಗಿ ಉಕ್ರೇನ್​ ವಿರುದ್ಧ ಯದ್ಧಕ್ಕೆ ತಳ್ಳಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ ಕಳೆದ ಒಂದು ವರ್ಷದಲ್ಲಿ ನೂರಕ್ಕೂ ಹೆಚ್ಚು ಯುವಕರನ್ನು ರಷ್ಯಾ ಸೇನೆ ಬಳಸಿಕೊಂಡಿದೆ ಎಂದು ಆಘಾತಕಾರಿ ವಿಷಯಗಳು ಬಿತ್ತರವಾಗಿವೆ. ರಷ್ಯಾದಲ್ಲಿ ಸಿಲುಕಿ ಸಂಕಷ್ಟ ಎದುರಿಸಯತ್ತಿರುವ ಎಲ್ಲ ಭಾರತೀಯರು ಹಾಗೂ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವಂತೆ ಪತ್ರದ ಮೂಲಕ ಮಲ್ಲಿಕಾರ್ಜು ಖರ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:31 am, Sun, 15 September 24