AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಬೃಹತ​​ ಶೋಭಾ ಯಾತ್ರೆ, ಭಾಷಣಕ್ಕೆ ಅವಕಾಶ ಕೊಟ್ಟಿಲ್ಲವೆಂದು ಜಿಲ್ಲಾಡಳಿತ ವಿರುದ್ಧ ಗರಂ ಆದ ಸಿದ್ದಲಿಂಗ ಸ್ವಾಮೀಜಿ

ಅಂಗಡಿ ಮುಗ್ಗಟ್ಟು ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಶೋಭಾ ಯಾತ್ರೆಯಲ್ಲಿ ಹಿಂದೂಗಳು ಭಾಗಿಯಾಗಿದ್ದು, ಕೇಸರಿ ಧ್ವಜ ಹಿಡಿಕೊಂಡು ಜೈ ಶ್ರೀರಾಮ ಘೋಷಣೆಯೊಂದಿಗೆ ಡಿಜೆ ಸೌಂಡ್​ಗೆ ಯುವಕರು ಹೆಜ್ಜೆ ಹಾಕಿದ್ದಾರೆ.

ಕಲಬುರಗಿ: ಬೃಹತ​​ ಶೋಭಾ ಯಾತ್ರೆ, ಭಾಷಣಕ್ಕೆ ಅವಕಾಶ ಕೊಟ್ಟಿಲ್ಲವೆಂದು ಜಿಲ್ಲಾಡಳಿತ ವಿರುದ್ಧ ಗರಂ ಆದ ಸಿದ್ದಲಿಂಗ ಸ್ವಾಮೀಜಿ
ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ
TV9 Web
| Edited By: |

Updated on:Apr 24, 2022 | 7:49 PM

Share

ಕಲಬುರಗಿ: ಇಂದು‌ ಶೋಭಾಯಾತ್ರೆಯಲ್ಲಿ ಭಾಷಣಕ್ಕೆ ಅವಕಾಶ ಕೊಟ್ಟಿಲ್ಲ. ಇಂದು ಜಿಲ್ಲಾಡಳಿತ ನನ್ನ ಭಾಷಣಕ್ಕೆ ನಿರ್ಬಂಧವನ್ನು ಹೇರಿದೆ ಎಂದು ಜಿಲ್ಲೆಯ ಆಳಂದದಲ್ಲಿ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಗರಂ ಆದರು. ಭಾರತದದ ಸಂವಿಧಾನವೆ ಹೇಳಿದೆ ವಾಕ್ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಆದರೂ ಕೂಡಾ ನಮ್ಮ‌ ಭಾಷಣಕ್ಕೆ ಪೊಲೀಸರು ಅಡ್ಡಿಪಡಿಸಿದ್ದಾರೆ ಇದನ್ನ ಖಂಡಿಸುವೆ. ಆಳಂದ ಕಾಶ್ಮೀರ ಅಥವಾ ಕೇರಳದಲ್ಲಿಲ್ಲ. ಆಳಂದ ಇರೋದು ಕರ್ನಾಟಕದಲ್ಲಿ. 2023ರ ಜ.23ರಂದು ಬೃಹತ್ ಹಿಂದೂ ಇಲ್ಲಿಯೇ ಹಮ್ಮಿಕೊಂಡಿದ್ದೇವೆ. ಅದನ್ನ ತಡೆಯಲು ಯಾವ ಶಕ್ತಿಯಿಂದಲೂ‌ ಸಾಧ್ಯವಿಲ್ಲ. 1 ಲಕ್ಷ ಜನ‌ರನ್ನು ಸೇರಿ ಬೃಹತ್ ಸಮಾವೇಶ ಮಾಡುತ್ತೇವೆ ಎಂದು ಹೇಳಿದರು.

ಶ್ರೀರಾಮನವಮಿ ಅಂಗವಾಗಿ ಶ್ರೀರಾಮಸೇನೆ ನೇತೃತ್ವದಲ್ಲಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಬೃಹತ​​ ಶೋಭಾ ಯಾತ್ರೆ ನಡೆಯಿತು. ಪಟ್ಟಣದ ರಾಮ ಮಾರುಕಟ್ಟೆಯಲ್ಲಿ ಯಾತ್ರೆಗೆ ಚಾಲನೆ ನೀಡಿದ್ದು, ಸಂಜೆ ಗಣೇಶ್ ಮಂದಿರ ಬಳಿ ಅಂತ್ಯವಾಯಿತು. ಯಾತ್ರೆಯಲ್ಲಿ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ವಿವಿಧ ಮಠಗಳ ಸ್ವಾಮೀಜಿಗಳು, ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದರು. ಶೋಭಾ ಯಾತ್ರೆ ಮಾರ್ಗದಲ್ಲಿರುವ ಮಸೀದಿ, ದರ್ಗಾಗಳಿಗೂ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿತ್ತು. ಅಂಗಡಿ ಮುಗ್ಗಟ್ಟು ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಶೋಭಾ ಯಾತ್ರೆಯಲ್ಲಿ ಹಿಂದೂಗಳು ಭಾಗಿಯಾಗಿದ್ದು, ಕೇಸರಿ ಧ್ವಜ ಹಿಡಿಕೊಂಡು ಜೈ ಶ್ರೀರಾಮ ಘೋಷಣೆಯೊಂದಿಗೆ ಡಿಜೆ ಸೌಂಡ್​ಗೆ ಯುವಕರು ಹೆಜ್ಜೆ ಹಾಕಿದ್ದಾರೆ. ಕಳೆದ ಮಾರ್ಚ್ 1 ರಂದು ಲಾಡ್ಲೆ ಮಸಾಕ್ ದರ್ಗಾದಲ್ಲಿರುವ ಶಿವನ ಲಿಂಗ ಶುದ್ದೀಕರಣ ವೇಳೆ ಆಳಂದ ಪಟ್ಟಣದಲ್ಲಿ ಗಲಾಟೆ ನಡೆದಿತ್ತು. ಈ ಹಿನ್ನಲೆ ಇಂದು ಕೂಡ ಆಳಂದ ಪಟ್ಟಣದಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಿದೆ.

ಇದನ್ನೂ ಓದಿ:

ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರದ 3ಡಿ ದೃಶ್ಯ ನೋಡಿ ವಿಮರ್ಶೆ ನೀಡಿದ ಆರ್​ಜಿವಿ

Virat Kohli: ವಿರಾಟ್ ಕೊಹ್ಲಿ ಕಳಪೆ ಫಾರ್ಮ್​ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ RCB ಮಾಜಿ ನಾಯಕ

Published On - 4:43 pm, Sun, 24 April 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?