AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಪ್ರೀತಿಸಿ ಮದುವೆಯಾಗಿದ್ದ ಯುವತಿ ವಿದ್ಯುತ್ ಶಾಕ್​ನಿಂದ ಸಾವು; ಮಗಳದ್ದು ಕೊಲೆ ಅಂತಿರೋ ಹೆತ್ತವರು, ಇಲ್ಲಿದೆ ವಿವರ

ಅವರಿಬ್ಬರದು ಬೇರೆ ಬೇರೆ ಜಾತಿ. ಆದರೂ ಕೂಡ ಇಬ್ಬರ ನಡುವೆ ಪ್ರೀತಿ ಉಂಟಾಗಿತ್ತು. ಹೀಗಾಗಿ ಇಬ್ಬರು ಮನೆ ಬಿಟ್ಟು ಓಡಿ ಹೋಗಿದ್ದರು. ಮಗಳು ಎಲ್ಲಾದ್ರು, ಚೆನ್ನಾಗಿರಲಿ ಎಂದು ಹೆತ್ತವರು ಕೂಡ ಸುಮ್ಮನಾಗಿದ್ದರು. ಆದ್ರೆ, ಮದುವೆಯಾದ ಒಂದೇ ವರ್ಷದಲ್ಲಿ ಮಗಳು ಬಾರದ ಲೋಕಕ್ಕೆ ಹೋಗಿದ್ದಾಳೆ. ತಮ್ಮ ಮಗಳನ್ನು ಪತಿ ಮತ್ತು ಆತನ ಕುಟುಂಬದವರು ಕೊಲೆ ಮಾಡಿದ್ದಾರೆಂದು ಹೆತ್ತವರು ಆರೋಪಿಸುತ್ತಿದ್ದಾರೆ.

ಕಲಬುರಗಿ: ಪ್ರೀತಿಸಿ ಮದುವೆಯಾಗಿದ್ದ ಯುವತಿ ವಿದ್ಯುತ್ ಶಾಕ್​ನಿಂದ ಸಾವು; ಮಗಳದ್ದು ಕೊಲೆ ಅಂತಿರೋ ಹೆತ್ತವರು, ಇಲ್ಲಿದೆ ವಿವರ
ಮೃತ ಮಹಿಳೆ
ಸಂಜಯ್ಯಾ ಚಿಕ್ಕಮಠ
| Edited By: |

Updated on:Sep 14, 2023 | 5:48 PM

Share

ಕಲಬುರಗಿ, ಸೆ.14: ಮೂಲತಃ ಯಾದಗಿರಿ (Yadagiri) ಜಿಲ್ಲೆಯ ಶಹಪೂರ್ ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಹತ್ತೊಂಬತ್ತು ವರ್ಷದ ಭಾಗ್ಯಶ್ರೀ ಎನ್ನುವ ಯುವತಿ ನಿನ್ನೆ(ಸೆ.13)  ವಿದ್ಯುತ್ ಶಾಕ್ (Electric Shock) ನಿಂದ ಮೃತಪಟ್ಟಿದ್ದಾಳಂತೆ. ಕಲಬುರಗಿ (Kalaburagi) ನಗರದ ಕೋಟನೂರು ಬಳಿ ಬಾಡಿಗೆ ಮನೆಯಲ್ಲಿ ಪತಿಯ ಜೊತೆ ವಾಸವಾಗಿದ್ದ ಭಾಗ್ಯಶ್ರೀ ಬಾರದ ಲೋಕಕ್ಕೆ ಹೋಗಿದ್ದಾಳೆ. ನಿನ್ನೆ ಮಧ್ಯಾಹ್ನ ಭಾಗ್ಯಶ್ರೀ ಕುಟುಂಬದವರಿಗೆ ಪತಿ ಮನೆಯವರು ಪೋನ್ ಮಾಡಿ, ಭಾಗ್ಯಶ್ರೀ ಮೃತಪಟ್ಟಿರೋದಾಗಿ ಹೇಳಿದ್ದಾರೆ. ಹೀಗಾಗಿ ಭಾಗ್ಯಶ್ರೀ ಹೆತ್ತವರು ಮತ್ತು ಕುಟುಂಬದವರು ಕಲಬುರಗಿ ನಗರಕ್ಕೆ ಧಾವಿಸಿ ಬಂದಿದ್ದರು. ಆದ್ರೆ, ಮೈ ಮೇಲೆ ಕೆಲವಡೆ ಗಾಯದ ಗುರುತುಗಳು ಇರೋದರಿಂದ, ಭಾಗ್ಯಶ್ರೀ ವಿದ್ಯುತ್ ಶಾಕ್​ನಿಂದ ಮೃತಪಟ್ಟಿಲ್ಲ, ಬದಲಾಗಿ ಆಕೆಯ ಪತಿ ಮತ್ತು ಕುಟುಂಬದವರೇ ಕೊಲೆ ಮಾಡಿ, ಕರೆಂಟ್ ಶಾಕ್ ಹೊಡಿಸಿ ಸಾಯಿಸಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.

ಇನ್ನು ಯಾದಗಿರಿ ಜಿಲ್ಲೆಯ ಹರಳಹಳ್ಳಿ ಗ್ರಾಮದ ಭಾಗ್ಯಶ್ರೀಯದು ಪ್ರೇಮ ವಿವಾಹ. ಅದೇ ಗ್ರಾಮದ ಶಂಕರಗೌಡ ಮತ್ತು ಭಾಗ್ಯಶ್ರೀ ನಡುವೆ ಪ್ರೀತಿ ಮೂಡಿದೆ. ಆದ್ರೆ, ಜಾತಿ ಬೇರೆ ಬೇರೆಯಾಗಿದ್ದರಿಂದ ಮನೆಯವರು ವಿರೋಧ ವ್ಯಕ್ತಪಡಿಸಿದ್ದರಂತೆ. ಇದರಿಂದ ಇಬ್ಬರು ಮನೆ ಬಿಟ್ಟು ಹೋಗಿ, ಭಾಗ್ಯಶ್ರೀಗೆ ಹದಿನೆಂಟು ವರ್ಷವಾದ ಮೇಲೆ ಬಂದಿದ್ದರಂತೆ. ಈ ಬಗ್ಗೆ ಯಾದಗಿರಿ ಜಿಲ್ಲೆಯ ಭೀಮರಾಯನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯಂತೆ. ಆಗ ಕೂಡ ಭಾಗ್ಯಶ್ರೀ ಹೆತ್ತವರು ತಮ್ಮ ಜೊತೆ ಬಂದು ಬಿಡು ಎಂದು ಮಗಳಿಗೆ ಹೇಳಿದ್ದು, ಆದರೆ ತಾನು ಬದುಕಿದ್ರೆ ಶಂಕರಗೌಡನ ಜೊತೆಯೇ ಎಂದು ಭಾಗ್ಯಶ್ರೀ ಹೇಳಿದ್ದಳಂತೆ.

ಇದನ್ನೂ ಓದಿ:ಚಾಮರಾಜನಗರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು; ಯುವಕ ಸಾವು, ಯುವತಿ ಸ್ಥಿತಿ ಚಿಂತಾಜನಕ

ಇನ್ನು ಭಾಗ್ಯಶ್ರೀ ಈಗಾಗಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೀಗಾಗಿ ಮಗಳು ಎಲ್ಲಾದ್ರು ಇರಲಿ ಚೆನ್ನಾಗಿರಲಿ ಎಂದು ಸುಮ್ಮನಾಗಿದ್ದರಂತೆ. ಇದೀಗ ಮಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಹೆತ್ತವರನ್ನು ಕಂಗಾಲು ಮಾಡಿದೆ. ಸದ್ಯ ಭಾಗ್ಯಶ್ರೀ ಸಾವಿಗೆ ಸಂಬಂಧಿಸಿದಂತೆ ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಅಸಹಹಜ ಸಾವು ಪ್ರಕರಣ ದಾಖಲಾಗಿದೆ. ಪೊಲೀಸರು ಭಾಗ್ಯಶ್ರೀ ಪತಿ ಶಂಕರಗೌಡನನ್ನು ವಶಕ್ಕೆ ಪಡೆದು ವಿಚಾರಣೆ ಕೂಡ ನಡೆಸುತ್ತಿದ್ದಾರೆ. ವಿಚಾರಣೆ ನಂತರವೇ ಭಾಗ್ಯಶ್ರೀ ಕರೆಂಟ್ ಶಾಕ್​ನಿಂದ ಮೃತಪಟ್ಟಿರೋದಾ ಅಥವಾ ಕೊಲೆಯಾ ಅನ್ನೋದು ಗೊತ್ತಾಗಲಿದೆ. ಆದ್ರೆ, ಬಾಳಿ ಬದುಕಬೇಕಿದ್ದ ಯುವತಿ, ಚಿಕ್ಕ ವಯಸ್ಸಿನಲ್ಲಿಯೇ ಬಾರದ ಲೋಕಕ್ಕೆ ಹೋಗಿದ್ದು, ಮಾತ್ರ ದುರಂತವೇ ಸರಿ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Thu, 14 September 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್