AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ವಿವಿ ಗ್ರಂಥಾಲಯದಲ್ಲಿ ಸರಸ್ವತಿ ಪೂಜೆಗೆ ವಿರೋಧ; ವಿದ್ಯಾರ್ಥಿ ನಡೆಗೆ ತೀವ್ರ ಆಕ್ರೋಶ

ರಾಜ್ಯದಲ್ಲಿ ಶಾಲಾ-ಕಾಲೇಜುಗಳಿಗೆ ಹಿಜಾಬ್​ ಹಾಕಿಕೊಂಡು ಬರುವಂತಿಲ್ಲ ಎಂಬುದು ದೊಡ್ಡ ಮಟ್ಟದ ವಿವಾದವನ್ನು ಸೃಷ್ಟಿಸಿತ್ತು. ಇದೀಗ ಕಲಬುರಗಿ ಕೇಂದ್ರೀಯ ವಿಶ್ವ ವಿದ್ಯಾಲಯದ ಗ್ರಂಥಾಲಯದಲ್ಲಿ ಏರ್ಪಡಿಸಿದ್ದ ಸರಸ್ವತಿ ಪೂಜೆಗೆ ವಿದ್ಯಾರ್ಥಿಯೊಬ್ಬ ವಿರೋಧ ವ್ಯಕ್ತಪಡಿಸಿದ್ದಾನೆ.

ಕಲಬುರಗಿ ವಿವಿ ಗ್ರಂಥಾಲಯದಲ್ಲಿ ಸರಸ್ವತಿ ಪೂಜೆಗೆ ವಿರೋಧ; ವಿದ್ಯಾರ್ಥಿ ನಡೆಗೆ ತೀವ್ರ ಆಕ್ರೋಶ
ಕಲಬುರಗಿ ವಿಶ್ವ ವಿದ್ಯಾಲಯ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Feb 14, 2024 | 4:40 PM

Share

ಕಲಬುರಗಿ, ಫೆ.14: ಕಲಬುರಗಿ ಕೇಂದ್ರೀಯ ವಿಶ್ವ ವಿದ್ಯಾಲಯದ(Kalaburagi central university)ಗ್ರಂಥಾಲಯದಲ್ಲಿ ವಿದ್ಯಾರ್ಥಿಯೊಬ್ಬ ಸರಸ್ವತಿ ಪೂಜೆಗೆ ವಿರೋಧ ಮಾಡಿದ ಘಟನೆ ನಡೆದಿದೆ. ವಸಂತ ಪಂಚಮಿ ಹಿನ್ನಲೆ ಗ್ರಂಥಾಲಯದಲ್ಲಿರುವ ಸರಸ್ವತಿ ಮೂರ್ತಿಗೆ ಇಂದು(ಫೆ.14) ಪೂಜೆ ಸಲ್ಲಿಕೆ‌ಗೆ ತಯಾರು ಮಾಡಲಾಗಿತ್ತು. ಅದರಂತೆ ವಿವಿಯ ಸಿಬ್ಬಂದಿಗಳು ಪೂಜೆ ಸಲ್ಲಿಸಿದರು. ಆಗ ಮಧ್ಯಪ್ರವೇಶಿಸಿದ ಸಂಶೋಧನಾ ವಿದ್ಯಾರ್ಥಿ ನಂದಕುಮಾರ್​ ಎಂಬಾತ ಇದಕ್ಕೆ ಅಡ್ಡಿಪಡಿಸಿದ್ದಾನೆ.‌

ವಿದ್ಯಾರ್ಥಿ ನಂದಕುಮಾರ ನಡೆಗೆ ತೀವ್ರ ಆಕ್ರೋಶ

ಈ ವೇಳೆ ಮಾತನಾಡಿದ ವಿದ್ಯಾರ್ಥಿ ನಂದಕುಮಾರ್​, ‘ಇದೇನೂ ದೇವಸ್ಥಾನವೋ, ವಿಶ್ವವಿದ್ಯಾಲಯವೋ ಎಂದು ವಿದ್ಯಾ ದೇವತೆ ಸರಸ್ವತಿ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದಾನೆ. ವಿದ್ಯಾದೇವತೆ ಸರಸ್ವತಿಯ ಮೂರ್ತಿಗೆ ಪೂಜೆಗೆ ಅಡ್ಡಿ ಪಡಿಸಿರುವ ಎಡಪಂಥಿಯ ವಿಚಾರ ಧಾರೆಯ ವಿದ್ಯಾರ್ಥಿ ನಂದಕುಮಾರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿದ್ಯಾರ್ಥಿ ಪೂಜೆಗೆ ಅಡ್ಡಿಪಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಂಶೋಧನಾ ವಿದ್ಯಾರ್ಥಿ ನಂದಕುಮಾರ ನಡೆಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದಲ್ಲದೇ, ಈ ಕುರಿತು ಪರ ವಿರೋಧ ಚರ್ಚೆ ಶುರುವಾಗಿದೆ.

ಇದನ್ನೂ ಓದಿ:ಹಿಂದೂ, ಜೈನ ಸಮುದಾಯದ ಹೆಣ್ಣುಮಕ್ಕಳಿಗೆ ಹಿಜಾಬ್​ ಧರಿಸುವಂತೆ ಒತ್ತಾಯಿಸುವಂತಿಲ್ಲ: ಮಧ್ಯಪ್ರದೇಶ ಹೈಕೋರ್ಟ್​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಡೇಟ್​ ಆಗುತ್ತಿದೆ…

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More