AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರಿನಲ್ಲಿ ಅರಳಿದ ಕಮಲ, ಕಲಬುರಗಿ ಮಹಾನಗರ ಪಾಲಿಕೆ ಬಿಜೆಪಿ ಪಾಲು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರಲ್ಲೇ ಬಿಜೆಪಿ ನಾಯಕರು ಕಮಲ ಅರಳಿಸಿದ್ದು, ಕಲಬುರಗಿ ಮಹಾನಗರ ಪಾಲಿಕೆ ಇದೀಗ ಬಿಜೆಪಿ ಪಾಲಾಗಿದೆ. ಪಾಲಿಕೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ ಬಿಜೆಪಿ ಅಭ್ಯರ್ಥಿಗಳು ಜಯಶಾಲಿಗಳಾಗಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರಿನಲ್ಲಿ ಅರಳಿದ ಕಮಲ, ಕಲಬುರಗಿ ಮಹಾನಗರ ಪಾಲಿಕೆ ಬಿಜೆಪಿ ಪಾಲು
ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರ ಹಿಡಿದ ಬಿಜೆಪಿ, ಕಾರ್ಯಕರ್ತರಿಂದ ವಿಜಯೋತ್ಸವ
Follow us
Rakesh Nayak Manchi
|

Updated on:Mar 23, 2023 | 3:00 PM

ಕಲಬುರಗಿ: ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ (Kalaburagi Municipal Corporation Mayor and Deputy Mayor Election) ಸ್ಥಾನಗಳಿಗೆ ಇಂದು (ಮಾರ್ಚ್23) ನಡೆದ ಚುನಾವಣೆಯಲ್ಲಿ ಬಿಜೆಪಿ (BJP) ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಆ ಮೂಲಕ ಮೇಯರ್ ಆಗಿ ಬಿಜೆಪಿಯ ವಿಶಾಲ್ ದರ್ಗಿ ಅವರು ಆಯ್ಕೆಯಾದರೆ ಉಪ ಮೇಯರ್ ಆಗಿ ಶಿವಾನಂದ್ ಪಿಸ್ತಿ ಆಯ್ಕೆಯಾಗಿದ್ದಾರೆ. ವಿಶಾಲ್ ದರ್ಗಿ ಅವರು 33 ಮತಗಳನ್ನು ಪಡೆದಿದ್ದು, ಎದುರಾಳಿ ಕಾಂಗ್ರೆಸ್ (Congress) ಅಭ್ಯರ್ಥಿ ಪ್ರಕಾಶ ಕಪನೂರ್ 32 ಮತಗಳನ್ನು ಪಡೆದಿದ್ದಾರೆ. ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿಯ ಶಿವಾನಂದ್ ಪಿಸ್ತಿ ಅವರು 33 ಮತಗಳನ್ನು ಪಡೆದಿದ್ದು, ಎದುರಾಳಿ ಸ್ಪರ್ಧಿ ವಿಜಯಲಕ್ಷ್ಮಿ ಅವರಿಗೆ 32 ಮತಗಳು ಚಲಾವಣೆಯಾಗಿವೆ. ಆ ಮೂಲಕ ಮೇಯರ್ ಮತ್ತು ಉಪಮೇಯರ್ ಎರಡೂ ಸ್ಥಾನಗಳು ಬಿಜೆಪಿ ಪಾಲಾಗುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ತವರಲ್ಲಿ ಕಮಲ ಅರಳಿ ನಿಂತಿದೆ. ಅಲ್ಲದೆ, ಪಾಲಿಕೆಯಲ್ಲಿ ಮೊದಲ ಬಾರಿ ಸ್ವಂತಂತ್ರವಾಗಿ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ.

ಪಾಲಿಗೆ ಮೇಯರ್ ಚುನಾವಣೆ ಭಾರೀ ಕುತೂಹಲ ಮೂಡಿಸಿತ್ತು. ಅದಾಗ್ಯೂ, ಎರಡೂ ಸ್ಥಾನಗಳು ಬಹುತೇಕ ನಮಗೆ ಫಿಕ್ಸ್ ಎಂದು ಅರಿತ ಬಿಜೆಪಿ ನಾಯಕರು ಕಾರ್ಯಕರ್ತರು ವಿಜಯೋತ್ಸ ನಡೆಸಲು ಟೌನ್ ಹಾಲ್ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಅದರಂತೆ ಹೊರಬಿದ್ದ ಫಲಿತಾಂಶದಲ್ಲಿ ಮೇಯರ್, ಉಪಮೇಯರ್ ಆಗಿ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಘೋಷಣೆಯಾಗುತ್ತಿದ್ದಂತೆ ಬಿಜೆಪಿ ನಾಯಕರು, ಕಾರ್ಯಕರ್ತರು ವಿಜಯೋತ್ಸವ ಆರಂಭಿಸಿದ್ದಾರೆ.

ಇನ್ನೊಂದಡೆ ಬಿಜೆಪಿ ಕಾರ್ಯಕರ್ತರ ವಿರುದ್ಧ ಜೆಡಿಎಸ್ ಮುಖಂಡರು ಆಕ್ರೋಶ ಹೊರಹಾಕಲು ಮುಂದಾದರು. ಟೌನ್ ಹಾಲ್ ಸುತ್ತಮುತ್ತ ನಿಷೇದಾಜ್ಞೆ ಜಾರಿ ಮಾಡಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ನಾಯಕರು ಜಮಾಯಿಸಿದ್ದರಿಂದ ಟೌನ್ ಹಾಲ್ ಸುತ್ತಮುತ್ತ ನಿಷೇದಾಜ್ಞೆ ಇದೆ, ಇಲ್ಲಿ ಹೇಗೆ ಬಿಜೆಪಿಯುವರು ಇಷ್ಟೊಂದು ಜನ ಸೇರುತ್ತೀರಿ? ನೀವು ನಿಮ್ಮ ಪಕ್ಷದ ಬಾವುಟ ಹಿಡಿದರೆ ನಾವು ನಮ್ಮ ಪಕ್ಷದ ಬಾವುಟ ಹಿಡಿಯುತ್ತೇವೆ ಅಂತ ಕೃಷ್ಣಾ ರೆಡ್ಡಿ ಆಕ್ರೋಶ ಹೊರಹಾಕಿದರು.

2021ರ ಸೆಪ್ಟೆಂಬರ್​​ ತಿಂಗಳಲ್ಲಿ ಕಲಬುರಗಿ ಪಾಲಿಕೆ ಚುನಾವಣೆ ನಡೆದಿತ್ತು. BJP 23, ಕಾಂಗ್ರೆಸ್ 27, JDS 4, ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಇರಲಿಲ್ಲ. ಅದರಂತೆ ಅಧಿಕಾರಕ್ಕೆ ಬರಲು MLCಗಳ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿತ್ತು. ಅಧಿಕಾರ ಚುಕ್ಕಾಣಿ ಹಿಡಿಯಲು ಜೆಡಿಎಸ್ ಬೆಂಬಲದೊಂದಿಗೆ ಅಧಿಕಾರಕ್ಕೇರಲು ಕಾಂಗ್ರೆಸ್ ಕೂಡ ತಂತ್ರ ರೂಪಿಸಿತ್ತು.

ಇದನ್ನೂ ಓದಿ: ಪ್ರಧಾನಿ ಮೋದಿ ರಿಮೋಟ್​ ಕಂಟ್ರೋಲ್​ ಹೇಳಿಕೆಗೆ ತಿರುಗೇಟು ನೀಡಿದ ಮಲ್ಲಿಕಾರ್ಜುನ ಖರ್ಗೆ

ಆದರೆ, ಎರಡು ರಾಷ್ಟ್ರೀಯ ಪಕ್ಷಗಳಿಗೆ ಬಹುಮತಕ್ಕೆ ಸಂಖ್ಯೆ ಬಲ ಕಡಿಮೆ ಇದ್ದಿದ್ದರಿಂದ ಎಲ್ಲರ ಚಿತ್ತನ ನಾಲ್ವರು ಜೆಡಿಎಸ್​ ಸದಸ್ಯರ ಮೇಲಿತ್ತು. ಕಾಂಗ್ರೆಸ್​ಗೆ ಬೆಂಬಲಿಸುತ್ತೇವೆ ಎಂದು ಜೆಡಿಎಸ್ ಪಾಲಿಕೆ ಸದಸ್ಯರು ಹೇಳಿದ್ದರು. ನಾಲ್ವರ ಪೈಕಿ ಒಬ್ಬರನ್ನಾದರೂ ಮತದಾನಕ್ಕೆ ಬರದಂತೆ ನೋಡಿಕೊಳ್ಳಲು ಬಿಜೆಪಿ ನಾಯಕರು ಕಸರತ್ತು ನಡೆಸಿದ್ದರು. ಒಬ್ಬರು ಮತದಾನದಿಂದ ದೂರ ಉಳಿದರೆ ಬಿಜೆಪಿ ಮೇಯರ್ ಚುಕ್ಕಾಣಿ ಹಿಡಿಯಲಿದೆ. ಹೀಗಾಗಿ ನಾಲ್ವರು ಜೆಡಿಎಸ್ ಪಾಲಿಕೆ ಸದಸ್ಯರ ಮೇಲೆ ಎಲ್ಲರ ಕಣ್ಣು ಬಿದ್ದಿತ್ತು. ಕೊನೆಗೂ ಬಿಜೆಪಿ ತಂತ್ರಗಾರಿಗೆ ಫಲಿಸಿ ಸ್ವತಂತ್ರವಾಗಿ ಪಾಲಿಕೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಯಿತು.

ಅಧಿಕಾರ ಪಡೆಯಲು ಬಿಜೆಪಿ ಜಿಲ್ಲೆಗೆ ಸಂಬಂಧಿಸಿದೇ ಇದ್ದ ವಿಧಾನ ಪರಿಷತ್ ಸದಸ್ಯರನ್ನು ಪಾಲಿಕೆಯ ಮೇಯರ್ ಚುನಾವಣೆಯ ಮತದಾರರ ಪಟ್ಟಿಗೆ ಸೇರಿಸಿದ್ದರು. ಲಕ್ಷ್ಮಣ್ ಸವದಿ, ಬಾರತಿ ಶೆಟ್ಟಿ,ಲೆಹರಸಿಂಗ್ ಸೇರಿದಂತೆ ಅನೇಕ ಹೆಸರನ್ನು ಸೇರಿಸಿದ್ದರು. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ನ್ಯಾಯಾಲಯದ ಮೊರೆ ಹೋಗಿತ್ತು. ಹೈಕೋರ್ಟ್ ಪರಿಷತ್ ಸದಸ್ಯರಿಗೆ ಕೂಡಾ ಮತದಾನಕ್ಕೆ ಅವಕಾಶ ನೀಡಿತ್ತು. ಸದ್ಯ ಪಾಲಿಕೆ ಸದಸ್ಯರು, ಶಾಸಕರು, ಸಂಸದ, ಇಬ್ಬರು ರಾಜ್ಯಸಭೆ ಸದಸ್ಯರು, ಪರಿಷತ್ ಸದಸ್ಯರು ಸೇರಿ ಒಟ್ಟು ಮತದಾರರ ಸಂಖ್ಯೆ 68 ಆಗಿದ್ದು, ಅಧಿಕಾರಕ್ಕೆ ಬರಲು ಮ್ಯಾಜಿಕ್ ನಂಬರ್ 35 ಬೇಕಿತ್ತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:51 pm, Thu, 23 March 23

ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ