AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಸಿಲಿಂಡರ್ ಕೊರತೆ: ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ

ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಕರ್ನಾಟಕದ ಮೇಲೂ ಬೀರಿದ್ದು, LPG ಸಿಲಿಂಡರ್ ಪೂರೈಕೆ ವ್ಯತ್ಯಯ ಉಂಟಾಗಿದೆ. ಇತ್ತ ಕಲಬುರಗಿಯಲ್ಲೂ ಸಿಲಿಂಡರ್ ಕೊರತೆಯಾಗಿದ್ದು ಜನ, ಹೋಟೆಲ್ ಉದ್ಯಮದಾರರು ಪರದಾಡುತ್ತಿದ್ದಾರೆ. ಹೀಗಾಗಿ ಎಲ್ಲರೂ ಸೌದೆ ಒಲೆಯತ್ತ ಮುಖ ಮಾಡಿದ್ದು, ಇಂದಿರಾ ಕ್ಯಾಂಟಿನ್​​​ಗಳಲ್ಲಿ ಸೌದೆ ಒಲೆ ಮೇಲೆ ಅಡುಗೆ ಮಾಡಲಾಗಿದೆ.

ಕಲಬುರಗಿಯಲ್ಲಿ ಸಿಲಿಂಡರ್ ಕೊರತೆ: ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ
ಸೌದೆ ಒಲೆ ಮೇಲೆ ಅಡುಗೆ
ದತ್ತಾತ್ರೇಯ ಪಾಟೀಲ್​
| Edited By: |

Updated on: Mar 13, 2026 | 4:00 PM

Share

ಕಲಬುರಗಿ, ಮಾರ್ಚ್​​ 13: ಇಸ್ರೇಲ್ ಮತ್ತು ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ ನಮ್ಮ ರಾಜ್ಯಕ್ಕೂ ಅದರ ಪರಿಣಾಮ ನೇರವಾಗಿ ತಟ್ಟಿದೆ. ಸಿಲಿಂಡರ್​ಗಳ (LPG cylinder) ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದೆ. ಇತ್ತ ಕಲಬುರಗಿಯಲ್ಲಿ ಇಂದಿರಾ ಕ್ಯಾಂಟಿನ್ (Indira Canteen)​​​ ಅಡುಗೆ ಮಾಡುವುದಕ್ಕೆ ಸೌದೆ ಒಲೆಯೇ ಗತಿ ಎನ್ನುವಂತಾಗಿದೆ.

ಕಳೆದ ಹತ್ತು ದಿನಗಳಿಂದ ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಬಿಸಿ ಭಾರತಕ್ಕೂ ತಟ್ಟಿದೆ. ಅದು ಎಲ್​ಲಿಜಿ ಸಿಲಿಂಡರ್​ಗಳ ಮೇಲೆ ನೇರ ಪರಿಣಾಮ ಬೀರಿದ. ಇರಾನ್ – ಇಸ್ರೇಲ್ ಯುದ್ದದಿಂದ ಕಲಬುರಗಿಯಲ್ಲಿಯೂ ನಿನ್ನೆಯಿಂದಲೇ ಕಮರ್ಷಿಯಲ್ ಸಿಲಿಂಡರ್ ಕೊರತೆಯಾಗಿದ್ದು ಜನ, ಹೋಟೆಲ್ ಉದ್ಯಮದಾರರು ಪರದಾಡುತ್ತಿದ್ದಾರೆ.

ಇದನ್ನೂ ಓದಿ: ಗ್ಯಾಸ್ ಬೆನ್ನಲ್ಲೇ ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

ಇಂದಿರಾ ಕ್ಯಾಂಟಿನ್​​ಗೂ ಸಿಲಿಂಡರ್ ಸಪ್ಲೈ ಬಂದ್ ಆದ ಹಿನ್ನಲೆ ಸಿಬ್ಬಂದಿ ಸೌದೆ ಒಲೆ ಮೊರೆ ಹೋಗಿದ್ದಾರೆ. ಕಲಬುರಗಿ ನಗರದ ಎಂಟು ಇಂದಿರಾ ಕ್ಯಾಂಟಿನ್​​ಗಳಿಗೂ ಸೌದೆ ಒಲೆ ಮೇಲೆಯೇ ಅಡುಗೆ ಮಾಡಲಾಗಿದೆ. ಏಕೆಂದರೆ ನಿನ್ನೆಯವರೆಗೂ ತಮ್ಮ ಬಳಿ ಇದ್ದ ಸಿಲಿಂಡರ್​​ಗಳ ಮೂಲಕ ಸಿಬ್ಬಂದಿ ಅಡುಗೆ ಮಾಡಿದ್ದಾರೆ. ಆದರೆ ಸಿಲಿಂಡರ್ ಸಿಗದ ಕಾರಣ, ಬೆಳಿಗ್ಗೆ ತಿಂಡಿ ಹಾಗೂ ಮಧ್ಯಾಹ್ನ ಮತ್ತು ರಾತ್ರಿ ಊಟವನ್ನ ಸೌದೆ ಒಲೆಯಲ್ಲಿಯೇ ಮಾಡಿದ್ದಾರೆ.

ಅಷ್ಟೆ ಅಲ್ಲದೇ ಚಪಾತಿಯನ್ನ ಹೊರಗಡೆಯಿಂದ ಖರೀದಿ ಮಾಡಿ ಜನರಿಗೆ ನೀಡಿದ್ದಾರೆ. ಇನ್ನು ಆಸ್ಪತ್ರೆಗಳ ಪಕ್ಕ ಇರುವ ಇಂದಿರಾ ಕ್ಯಾಂಟಿನ್​ನಲ್ಲಿ ಇಡ್ಲಿ, ಸಾಂಬರ್​ಗೆ ಹೆಚ್ಚಿನ ಬೇಡಿಕೆಯಿದೆ. ಆದರೆ ಸಿಲಿಂಡರ್ ಇಲ್ಲದ ಪರಿಣಾಮ ಕೇವಲ ಉಪ್ಪಿಟ್ಟು, ಅವಲಕ್ಕಿ ಮಾಡಲಾಗುತ್ತಿದೆಯಂತೆ. ಸೌದೆ ಒಲೆ ಮೇಲೆ ಅಡುಗೆ ಮಾಡುವುದಕ್ಕೆ ಕೆಲಸಗಾರರು ಮುಂದೆ ಬರ್ತಿಲ್ಲ, ಆದರೆ ಬಡವರು ಉಪವಾಸ ಇರಬಾರದು ಎನ್ನುವ ಕಾರಣಕ್ಕೆ ನಾವೇ ಅಡುಗೆ ಮಾಡುತ್ತಿದ್ದೇವೆ ಎಂದು ಸಿಬ್ಬಂದಿ ಬಸವರಾಜ್​​ ಹೇಳುತ್ತಾರೆ.

ರಾಜ್ಯದಲ್ಲಿ ಯಾವಾಗ ಸಿಲಿಂಡರ್​​ಗಳ ಸಮಸ್ಯೆ ಉದ್ಭವವಾಯ್ತೋ, ಅಲ್ಲಿಗೆ ಹೋಟೆಲ್, ಢಾಬಾ ಹಾಗೂ ಮದುವೆ ಕಾರ್ಯಕ್ರಮಗಳಿಗೆ ಕೇಟರಿಂಗ್​​ನವರು ಸೌದೆ ಒಲೆಯತ್ತ ಮುಖ ಮಾಡಿದ್ದಾರೆ. ಅದಕ್ಕಾಗಿ ನಗರದಲ್ಲಿ ಕಟ್ಟಿಗೆ ಅಡ್ಡೆಗಳಲ್ಲಿ ಸೌದೆ ಖರೀದಿ ಮಾಡುವುದಕ್ಕೆ ಮುಗಿಬಿದ್ದಿದ್ದಾರೆ. ವಿವಿಧ ಕಾರ್ಯಕ್ರಮಗಳಿಗೆ ಅಡುಗೆ ಗುತ್ತಿಗೆ ಹಿಡಿದಿರುವ ಕೇಟರಿಂಗ್​​ನವರಿಗೆ ಗ್ಯಾಸ್ ಟ್ರಬಲ್ ಎದುರಾಗಿದೆ. ಹೀಗಾಗಿ ಸೌದೆ ಒಲೆಯಲ್ಲೇ ಅಡುಗೆ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ.

ಇದನ್ನೂ ಓದಿ: ಇದೆಂಥಾ ಕಾಲ ಬಂತಪ್ಪಾ… ಹೋಟೆಲ್​ಗಳ ಬಿಲ್​ನಲ್ಲಿ ಜಿಎಸ್​ಟಿ ಜತೆ ಸೇರ್ಪಡೆಯಾಯ್ತು ಗ್ಯಾಸ್ ಶುಲ್ಕ!

ಒಟ್ಟಿನಲ್ಲಿ ಸದ್ಯ ಕಲಬುರಗಿಯಲ್ಲಿಯೂ ಸಿಲಿಂಡರ್ ಹಾಹಾಕಾರ ಶುರುವಾಗಿದೆ. ಮುಂದೆ ಅದ್ಯಾವ ಮಟ್ಟಕ್ಕೆ ಹೋಗುತ್ತೋ ಕಾದುನೋಡಬೇಕು. ಏಕೆಂದರೆ ಸಿಲಿಂಡರ್​​ ಸಿಗದಿದ್ದರೆ ಮತ್ತಷ್ಟು ಸಂಕಷ್ಟ ಎದುರಾಗೋದು ಕಟ್ಟಿಟ್ಟ ಬುತ್ತಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ