AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ನಗರ ಪೊಲೀಸ್ ಕಮಿಷನರ್ ಪತ್ನಿ ವಿರುದ್ಧ ಹಣಕ್ಕೆ ಬೇಡಿಕೆ; ಬಿಜೆಪಿ ಮುಖಂಡನಿಂದ ಆರೋಪ

ಕಲಬುರಗಿ ನಗರ ಪೊಲೀಸ್ ಕಮಿಷನರ್ ಡಾ.ವೈ.ಎಸ್ ರವಿಕುಮಾರ್ ಅವರ ಪತ್ನಿ ರೂಪಾಲಿ ಅವರಿಂದ ಮೂರು ಲಕ್ಷ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಅವರು ಆರೋಪ ಮಾಡಿದ್ದಾರೆ.

ಕಲಬುರಗಿ: ನಗರ ಪೊಲೀಸ್ ಕಮಿಷನರ್ ಪತ್ನಿ ವಿರುದ್ಧ ಹಣಕ್ಕೆ ಬೇಡಿಕೆ; ಬಿಜೆಪಿ ಮುಖಂಡನಿಂದ ಆರೋಪ
ರೂಪಾಲಿ, ಮಣಿಕಂಠ ರಾಠೋಡ್
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Dec 03, 2022 | 7:56 AM

Share

ಕಲಬುರಗಿ: ನಗರ ಪೊಲೀಸ್​ ಕಮಿಷನರ್​ ಡಾ.ವೈ.ಎಸ್ ರವಿಕುಮಾರ್ ಅವರ ಪತ್ನಿ ರೂಪಾಲಿ ಅವರು 3 ಲಕ್ಷ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದರು. ಹಣ ಕೊಡದೇ ಇದ್ದಿದ್ದಕ್ಕಾಗಿ ನನ್ನನ್ನು ಗಡಿಪಾರು ಮಾಡಿದ್ದಾರೆ ಎಂದು ಚಿತ್ತಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಣಿಕಂಠ ರಾಠೋಡ್ ಆರೋಪ ಮಾಡಿದ್ದಾರೆ.

ಸೆಪ್ಟೆಂಬರ್ 30 ರಂದು ರೂಪಾಲಿ ಸೇರಿದಂತೆ ಅವರ ತಂಡದಿಂದ ದಾಂಡಿಯಾ ನೈಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಂಬೈ ಮೂಲದ ಇವೆಂಟ್ ಕಂಪನಿಗೆ ಮೂರು ಲಕ್ಷ ನೀಡಿದ್ದೆ. ಅದರ ಹಣವನ್ನು ಇನ್ನು ನೀಡಿಲ್ಲ. ಅನಂತರ ಮತ್ತೆ ಮೂರು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು, ತಾನು ಹಣ ಕೊಡದೇ ಇದ್ದಾಗ ಅವರ ಪತಿ ನಗರ ಪೊಲೀಸ್​ ಕಮಿಷನರ್​ ಡಾ.ವೈ ಎಸ್ ರವಿಕುಮಾರ್ ನನ್ನನ್ನು ಸುಳ್ಳು ಪ್ರಕರಣ ದಾಖಲಿಸಿ ಗಡಿಪಾರು ಆದೇಶ ಮಾಡಿದ್ದರು. ನನ್ನ ಹಣ ನನಗೆ ನೀಡಬೇಕು, ಇಲ್ಲದಿದ್ದರೆ ಮೇಲಾಧಿಕಾರಿಗಳಿಗೆ ದೂರು ನೀಡುತ್ತೇನೆ ಎನ್ನುತ್ತಿದ್ದಾರೆ ಮಣಿಕಂಠ ರಾಠೋಡ್.

ಇದನ್ನೂ ಓದಿ:ವನ್ಯ ಜೀವಿಗಳನ್ನು ಬೇಟೆಯಾಡುತ್ತಿದ್ದ ದುಷ್ಕರ್ಮಿಗಳನ್ನೇ ಬಲೆಗೆ ಬೀಳಿಸಿದ ಕಲಬುರಗಿ ಪೊಲೀಸರು, ನವಿಲು, ಕೃಷ್ಣಮೃಗ ಮಾಂಸ ನೋಡಿ ಶಾಕ್

ಇನ್ನು ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕಲಬುರಗಿ ನಗರ ಪೊಲೀಸ್ ಕಮಿಷನರ್ ಡಾ.ವೈ ಎಸ್ ರವಿಕುಮಾರ್ ಅವರು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರ ಆರೋಪವನ್ನು ತಳ್ಳಿಹಾಕಿದ್ದಾರೆ. ರವಿಕುಮಾರ್  ನನ್ನ ಪತ್ನಿ ದಾಂಡಿಯಾ ನೈಟ್ ಕಾರ್ಯಕ್ರಮ ಮಾಡಿದ್ದು ನಿಜ, ಅದಕ್ಕೆ ಅನೇಕರಿಂದ ಸ್ಪಾನ್ಸರ್ ಕೇಳಿದ್ದಾರೆ. ಅದೇ ರೀತಿ ಮಣಿಕಂಠ ರಾಠೋಡ್​ರಿಗೂ ಕೂಡಾ ಸಹಾಯ ಕೇಳಿರಬಹುದು ಆದರೆ ಹಣಕ್ಕಾಗಿ ಒತ್ತಾಯ ಮಾಡಿದ್ದಾರೆ ಎನ್ನುವುದು ಸುಳ್ಳು, ಮಣಿಕಂಠ ರಾಠೋಡ್ ಪ್ರಚಾರಕ್ಕಾಗಿ ಸುಳ್ಳು ಆರೋಪ ಮಾಡುತ್ತಿದ್ದಾನೆ. ಆತನ ಮೇಲೆ ಮೊದಲೇ ಯಾದಗಿರಿ ಜಿಲ್ಲೆಯಲ್ಲಿ ರೌಡಿಸೀಟ್ ಓಪನ್ ಆಗಿದ್ದು, ಆತನ ಮೇಲೆ ಮೂವತ್ತು ಕೇಸ್ ಇದ್ದಾವೆ. ಹೀಗಾಗಿ ಆತನಿಗೆ ಗಡಿಪಾರು ಆದೇಶ ಮಾಡಲಾಗಿದೆ ಎಂದಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು