AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ಒತ್ತು‌ವರಿ ವೀಕ್ಷಿಸಲು ಕಾರು ಬಿಟ್ಟು ಬೈಕ್ ಹತ್ತಿಬಂದ ಕಲಬುರಗಿ ಜಿಲ್ಲಾಧಿಕಾರಿ

ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರು ಕೆರೆ ಒತ್ತುವರಿ ಪ್ರದೇಶ ವೀಕ್ಷಿಸಲು ಕಾರು ಬಿಟ್ಟು ಬೈಕ್​ ಏರಿ ಹೊರಟರು.

ಕೆರೆ ಒತ್ತು‌ವರಿ ವೀಕ್ಷಿಸಲು ಕಾರು ಬಿಟ್ಟು ಬೈಕ್ ಹತ್ತಿಬಂದ ಕಲಬುರಗಿ ಜಿಲ್ಲಾಧಿಕಾರಿ
ಕಾರ್​ ಬಿಟ್ಟು ಬೈಕ್​ ಹತ್ತಿ ಹೊರಟ ಜಿಲ್ಲಾಧಿಕಾರಿ
TV9 Web
| Edited By: |

Updated on:Oct 15, 2022 | 7:31 PM

Share

ಕಲಬುರಗಿ: ‌ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಅಡಿಯಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರು ಕೂಡ ಇಂದು ಅಫಜಲಪುರ ತಾಲೂಕಿನ ಅರ್ಜುಣಗಿ ಗ್ರಾಮಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಯಶವಂತ್ ಗುರುಕರ್ ಅವರು ಜಿಲ್ಲಾಧಿಕಾರಿಯಾಗೆ ಕಲಬುರಗಿ ಜಿಲ್ಲೆಗೆ ಬಂದ ಮೇಲೆ ಅನೇಕ‌ ಜನೋಪಯೋಗಿ ಕೆಲಸಗಳನ್ನು ಮಾಡುತ್ತಿದ್ದಾರೆ. ಗ್ರಾಮದಲ್ಲಿ ಜನರಿಂದ ಅಹವಾಲು ಆಲಿಸುವ ಸಂದರ್ಭದಲ್ಲಿ ಬಹುತೇಕ ಗ್ರಾಮಸ್ಥರು, ಗ್ರಾಮದ 32 ಎಕರೆ ಕೆರೆ ಪ್ರದೇಶ ಒತ್ತುವರಿಯಾಗಿದ್ದು, ಇದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಸಂಬಂಧ ಜಿಲ್ಲಾಧಿಕಾರಿಗಳು ಮಧ್ಯಾಹ್ನ ವಸತಿ ಶಾಲೆಯಲ್ಲಿ ಊಟ ಮುಗಿಸಿ ಖುದ್ದಾಗಿ ತಾವೇ ಕೆರೆ ಒತ್ತುವರಿ ಜಾಗ ವೀಕ್ಷಣೆಗೆ ಕಾರು ಹತ್ತಿ ಹೊರಟರು. ಅಧಿಕಾರಿಗಳು-ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನು ಹಿಂಬಾಲಿಸಿದರು. ಕೆರೆ ಜಮೀನು ಪ್ರದೇಶ ಮುಖ್ಯ ರಸ್ತೆಯಿಂದ ಅರ್ಧ ಕಿ.ಮೀ. ಒಳಗಡೆ ಇದ್ದು, ಈ ರಸ್ತೆ ಎತ್ತಿನ ಬಂಡಿಹೋಗುವ ರಸ್ತೆಯಾಗಿದ್ದರಿಂದ ಇಲ್ಲಿ ಕಾರು ಚಲಿಸುವಂತಿರಲಿಲ್ಲ. ಹಾಗಂತ ಜಿಲ್ಲಾಧಿಕಾರಿ ಅಲ್ಲಿಂದ ಸುಮ್ಮನೇ ಮರಳಲಿಲ್ಲ. ಬದಲಾಗಿ ತಮ್ಮ ಕಾರಿನಿಂದ ಇಳಿದು ಸ್ಥಳೀಯರೊಬ್ಬರ ಬೈಕ್ ಹತ್ತಿ ಕೆರೆ ಒತ್ತುವರಿ ಪ್ರದೇಶಕ್ಕೆ ತಲುಪಿದರು. ಅಲ್ಲಿ ಕೆರೆಯನ್ನು ಒತ್ತುವರಿ ಮಾಡದಲಾದ ಪ್ರದೇಶವನ್ನು ವೀಕ್ಷಿಸಿದರು. ನಂತರ ಆದಷ್ಟು ಬೇಗನೆ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು. ಜಿಲ್ಲಾಧಿಕಾರಿಯ ನಡೆಗೆ ಗ್ರಾಮದ ಜನರು ಸಂತೋಷ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:29 pm, Sat, 15 October 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?