AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ಒತ್ತು‌ವರಿ ವೀಕ್ಷಿಸಲು ಕಾರು ಬಿಟ್ಟು ಬೈಕ್ ಹತ್ತಿಬಂದ ಕಲಬುರಗಿ ಜಿಲ್ಲಾಧಿಕಾರಿ

ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರು ಕೆರೆ ಒತ್ತುವರಿ ಪ್ರದೇಶ ವೀಕ್ಷಿಸಲು ಕಾರು ಬಿಟ್ಟು ಬೈಕ್​ ಏರಿ ಹೊರಟರು.

ಕೆರೆ ಒತ್ತು‌ವರಿ ವೀಕ್ಷಿಸಲು ಕಾರು ಬಿಟ್ಟು ಬೈಕ್ ಹತ್ತಿಬಂದ ಕಲಬುರಗಿ ಜಿಲ್ಲಾಧಿಕಾರಿ
ಕಾರ್​ ಬಿಟ್ಟು ಬೈಕ್​ ಹತ್ತಿ ಹೊರಟ ಜಿಲ್ಲಾಧಿಕಾರಿ
TV9 Web
| Edited By: ವಿವೇಕ ಬಿರಾದಾರ|

Updated on:Oct 15, 2022 | 7:31 PM

Share

ಕಲಬುರಗಿ: ‌ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಅಡಿಯಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರು ಕೂಡ ಇಂದು ಅಫಜಲಪುರ ತಾಲೂಕಿನ ಅರ್ಜುಣಗಿ ಗ್ರಾಮಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಯಶವಂತ್ ಗುರುಕರ್ ಅವರು ಜಿಲ್ಲಾಧಿಕಾರಿಯಾಗೆ ಕಲಬುರಗಿ ಜಿಲ್ಲೆಗೆ ಬಂದ ಮೇಲೆ ಅನೇಕ‌ ಜನೋಪಯೋಗಿ ಕೆಲಸಗಳನ್ನು ಮಾಡುತ್ತಿದ್ದಾರೆ. ಗ್ರಾಮದಲ್ಲಿ ಜನರಿಂದ ಅಹವಾಲು ಆಲಿಸುವ ಸಂದರ್ಭದಲ್ಲಿ ಬಹುತೇಕ ಗ್ರಾಮಸ್ಥರು, ಗ್ರಾಮದ 32 ಎಕರೆ ಕೆರೆ ಪ್ರದೇಶ ಒತ್ತುವರಿಯಾಗಿದ್ದು, ಇದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಸಂಬಂಧ ಜಿಲ್ಲಾಧಿಕಾರಿಗಳು ಮಧ್ಯಾಹ್ನ ವಸತಿ ಶಾಲೆಯಲ್ಲಿ ಊಟ ಮುಗಿಸಿ ಖುದ್ದಾಗಿ ತಾವೇ ಕೆರೆ ಒತ್ತುವರಿ ಜಾಗ ವೀಕ್ಷಣೆಗೆ ಕಾರು ಹತ್ತಿ ಹೊರಟರು. ಅಧಿಕಾರಿಗಳು-ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನು ಹಿಂಬಾಲಿಸಿದರು. ಕೆರೆ ಜಮೀನು ಪ್ರದೇಶ ಮುಖ್ಯ ರಸ್ತೆಯಿಂದ ಅರ್ಧ ಕಿ.ಮೀ. ಒಳಗಡೆ ಇದ್ದು, ಈ ರಸ್ತೆ ಎತ್ತಿನ ಬಂಡಿಹೋಗುವ ರಸ್ತೆಯಾಗಿದ್ದರಿಂದ ಇಲ್ಲಿ ಕಾರು ಚಲಿಸುವಂತಿರಲಿಲ್ಲ. ಹಾಗಂತ ಜಿಲ್ಲಾಧಿಕಾರಿ ಅಲ್ಲಿಂದ ಸುಮ್ಮನೇ ಮರಳಲಿಲ್ಲ. ಬದಲಾಗಿ ತಮ್ಮ ಕಾರಿನಿಂದ ಇಳಿದು ಸ್ಥಳೀಯರೊಬ್ಬರ ಬೈಕ್ ಹತ್ತಿ ಕೆರೆ ಒತ್ತುವರಿ ಪ್ರದೇಶಕ್ಕೆ ತಲುಪಿದರು. ಅಲ್ಲಿ ಕೆರೆಯನ್ನು ಒತ್ತುವರಿ ಮಾಡದಲಾದ ಪ್ರದೇಶವನ್ನು ವೀಕ್ಷಿಸಿದರು. ನಂತರ ಆದಷ್ಟು ಬೇಗನೆ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು. ಜಿಲ್ಲಾಧಿಕಾರಿಯ ನಡೆಗೆ ಗ್ರಾಮದ ಜನರು ಸಂತೋಷ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:29 pm, Sat, 15 October 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ