AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ಒತ್ತು‌ವರಿ ವೀಕ್ಷಿಸಲು ಕಾರು ಬಿಟ್ಟು ಬೈಕ್ ಹತ್ತಿಬಂದ ಕಲಬುರಗಿ ಜಿಲ್ಲಾಧಿಕಾರಿ

ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರು ಕೆರೆ ಒತ್ತುವರಿ ಪ್ರದೇಶ ವೀಕ್ಷಿಸಲು ಕಾರು ಬಿಟ್ಟು ಬೈಕ್​ ಏರಿ ಹೊರಟರು.

ಕೆರೆ ಒತ್ತು‌ವರಿ ವೀಕ್ಷಿಸಲು ಕಾರು ಬಿಟ್ಟು ಬೈಕ್ ಹತ್ತಿಬಂದ ಕಲಬುರಗಿ ಜಿಲ್ಲಾಧಿಕಾರಿ
ಕಾರ್​ ಬಿಟ್ಟು ಬೈಕ್​ ಹತ್ತಿ ಹೊರಟ ಜಿಲ್ಲಾಧಿಕಾರಿ
TV9 Web
| Updated By: ವಿವೇಕ ಬಿರಾದಾರ|

Updated on:Oct 15, 2022 | 7:31 PM

Share

ಕಲಬುರಗಿ: ‌ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಅಡಿಯಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರು ಕೂಡ ಇಂದು ಅಫಜಲಪುರ ತಾಲೂಕಿನ ಅರ್ಜುಣಗಿ ಗ್ರಾಮಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಯಶವಂತ್ ಗುರುಕರ್ ಅವರು ಜಿಲ್ಲಾಧಿಕಾರಿಯಾಗೆ ಕಲಬುರಗಿ ಜಿಲ್ಲೆಗೆ ಬಂದ ಮೇಲೆ ಅನೇಕ‌ ಜನೋಪಯೋಗಿ ಕೆಲಸಗಳನ್ನು ಮಾಡುತ್ತಿದ್ದಾರೆ. ಗ್ರಾಮದಲ್ಲಿ ಜನರಿಂದ ಅಹವಾಲು ಆಲಿಸುವ ಸಂದರ್ಭದಲ್ಲಿ ಬಹುತೇಕ ಗ್ರಾಮಸ್ಥರು, ಗ್ರಾಮದ 32 ಎಕರೆ ಕೆರೆ ಪ್ರದೇಶ ಒತ್ತುವರಿಯಾಗಿದ್ದು, ಇದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಸಂಬಂಧ ಜಿಲ್ಲಾಧಿಕಾರಿಗಳು ಮಧ್ಯಾಹ್ನ ವಸತಿ ಶಾಲೆಯಲ್ಲಿ ಊಟ ಮುಗಿಸಿ ಖುದ್ದಾಗಿ ತಾವೇ ಕೆರೆ ಒತ್ತುವರಿ ಜಾಗ ವೀಕ್ಷಣೆಗೆ ಕಾರು ಹತ್ತಿ ಹೊರಟರು. ಅಧಿಕಾರಿಗಳು-ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನು ಹಿಂಬಾಲಿಸಿದರು. ಕೆರೆ ಜಮೀನು ಪ್ರದೇಶ ಮುಖ್ಯ ರಸ್ತೆಯಿಂದ ಅರ್ಧ ಕಿ.ಮೀ. ಒಳಗಡೆ ಇದ್ದು, ಈ ರಸ್ತೆ ಎತ್ತಿನ ಬಂಡಿಹೋಗುವ ರಸ್ತೆಯಾಗಿದ್ದರಿಂದ ಇಲ್ಲಿ ಕಾರು ಚಲಿಸುವಂತಿರಲಿಲ್ಲ. ಹಾಗಂತ ಜಿಲ್ಲಾಧಿಕಾರಿ ಅಲ್ಲಿಂದ ಸುಮ್ಮನೇ ಮರಳಲಿಲ್ಲ. ಬದಲಾಗಿ ತಮ್ಮ ಕಾರಿನಿಂದ ಇಳಿದು ಸ್ಥಳೀಯರೊಬ್ಬರ ಬೈಕ್ ಹತ್ತಿ ಕೆರೆ ಒತ್ತುವರಿ ಪ್ರದೇಶಕ್ಕೆ ತಲುಪಿದರು. ಅಲ್ಲಿ ಕೆರೆಯನ್ನು ಒತ್ತುವರಿ ಮಾಡದಲಾದ ಪ್ರದೇಶವನ್ನು ವೀಕ್ಷಿಸಿದರು. ನಂತರ ಆದಷ್ಟು ಬೇಗನೆ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು. ಜಿಲ್ಲಾಧಿಕಾರಿಯ ನಡೆಗೆ ಗ್ರಾಮದ ಜನರು ಸಂತೋಷ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:29 pm, Sat, 15 October 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​