AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಕಾರ್ಯಚರಣೆ: 4 ಕಳ್ಳತನ ಪ್ರಕರಣ ಭೇದಿಸಿದ ಕಲಬುರಗಿ ಪೊಲೀಸ್; 6 ಖದೀಮರ ಬಂಧನ

ಕಲಬುರಗಿ ಜಿಲ್ಲೆಯ ಪೊಲೀಸರು ಭರ್ಜರಿ ಕಳ್ಳರ ಬೇಟೆ ಆಡಿದ್ದಾರೆ. ಜಿಲ್ಲೆಯ ಶಹಾಬಾದ್ ಹಾಗೂ ಜೇವರ್ಗಿ ಠಾಣೆಯಲ್ಲಿ ದಾಖಲಾಗಿದ್ದ 4 ಪ್ರತ್ಯೇಕ ಕಳ್ಳತನದಲ್ಲಿ 6 ಆರೋಪಿಗಳನ್ನು ಬಂಧಿಸುವ ಮೂಲಕ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ಸದ್ಯ ಬಂಧಿತ ಆರೋಪಿಗಳಿಂದ ಚಿನ್ನಾಭರಣ ಸೇರಿದಂತೆ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಭರ್ಜರಿ ಕಾರ್ಯಚರಣೆ: 4 ಕಳ್ಳತನ ಪ್ರಕರಣ ಭೇದಿಸಿದ ಕಲಬುರಗಿ ಪೊಲೀಸ್; 6 ಖದೀಮರ ಬಂಧನ
ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Dec 15, 2025 | 4:35 PM

Share

ಕಲಬುರಗಿ, ಡಿಸೆಂಬರ್​ 15: ಕಲಬುರಗಿ (Kalaburagi) ಜಿಲ್ಲೆಯ ಶಹಾಬಾದ್ ಮತ್ತು ಜೇವರ್ಗಿ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ಕು ಪ್ರತ್ಯೇಕ ಕಳ್ಳತನ (theft) ಪ್ರಕರಣದಲ್ಲಿ 6 ಆರೋಪಿಗಳನ್ನು ಬಂಧಿಸಿದ್ದಾರೆ. ಅಂತಾರಾಜ್ಯ ಕಳ್ಳ ಚಿರಾಗ್ ರಾಠೋಡ್, ಸುನೀಲ್, ಮೊಹಮ್ಮದ್ ಯೂನಸ್ ಮತ್ತು ಇನ್ನು ಮೂವರು ಬಂಧಿತರು. ಸದ್ಯ ಬಂಧಿತರಿಂದ ಕಳ್ಳತನವಾದ ಚಿನ್ನಾಭರಣ ಸೇರಿದಂತೆ ಎಲ್ಲಾ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಶಹಾಬಾದ್ ಹಾಗೂ ಜೇವರ್ಗಿ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

ಅಂತಾರಾಜ್ಯ ಕಳ್ಳ ಅಂದರ್​​: ಚಿನ್ನದ ಸರ ವಶಕ್ಕೆ

ಕಲಬುರಗಿ ಜಿಲ್ಲೆಯ ಹೊನಗುಂಟಾ ಗ್ರಾಮದ ಪ್ರಸಿದ್ಧ ಚಂದ್ರಲಾ ಪರವೇಶ್ವರಿ ದೇವಸ್ಥಾನ ಕಳ್ಳತನ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಅಂತಾರಾಜ್ಯ ಕಳ್ಳನನ್ನು ಶಹಾಬಾದ್ ಪೋಲಿಸರು‌ ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲಕ ಚಿರಾಗ್ ರಾಠೋಡ್ ಬಂಧಿತ ಆರೋಪಿ‌. ಬಂಧಿತನಿಂದ ಪೊಲೀಸರು ಚಿನ್ನದ ಸರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಲಾಭದ ಹಣ ದಾನ ಮಾಡುವುದಕ್ಕೆಂದು ಹೂಡಿಕೆ ಮಾಡಿದ ಉದ್ಯಮಿಗೆ ಕಾದಿತ್ತು ಶಾಕ್: 8 ಕೋಟಿ ರೂ. ಖತಂ!

ಮತ್ತೊಂದು ಪ್ರಕರಣದಲ್ಲಿ ಶಹಾಬಾದ್​ನಲ್ಲಿ ದ್ವಿಚಕ್ರ ವಾಹನ ಕದ್ದಿದ್ದ ಮೂವರು ಆರೋಪಿಗಳನ್ನು ಅರೆಸ್ಟ್​ ಮಾಡಲಾಗಿದೆ. ಬಂಧಿತ ಆರೋಪಿಗಳಿಂದ 3 ದ್ವಿಚಕ್ರ ವಾಹನ, 90 ಸಾವಿರ ರೂ. ನಗದು ಜಪ್ತಿ ಮಾಡಲಾಗಿದೆ.

ಬೀಗ ಮುರಿದು ಮನೆಗೆ ಕನ್ನ ಹಾಕಿದ್ದವರು ಅರೆಸ್ಟ್​​

ಜಿಲ್ಲೆಯ ಜೇವರ್ಗಿ ತಾಲೂಕಿನ ಎಸ್​​.ಎನ್​. ಗುಡೂರು, ಇಜೇರಿ ಗ್ರಾಮದ ಮನೆಗಳ್ಳತನ ಆರೋಪಿಗಳನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಗುಡೂರಿನಲ್ಲಿ ಮನೆ ಬೀಗ ಮುರಿದು ಕಳವು ಮಾಡಿದ್ದ ಸುನೀಲ್​​​ನನ್ನು ಬಂಧಿಸಲಾಗಿದ್ದು, 51 ಗ್ರಾಂ ಚಿನ್ನಾಭರಣ, 212 ಗ್ರಾಂ ಬೆಳ್ಳಿ ಆಭರಣ, 6 ಲಕ್ಷ ರೂ ಹಣ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಸಂಜೆಯಾದ್ರೆ ಸಾಕು ಒಂಟಿಯಾಗಿ ಓಡಾಡೋ ಹೆಣ್ಣು ಮಕ್ಕಳೇ ಈತನ ಟಾರ್ಗೆಟ್: ಬೆಂಗಳೂರಿನಲ್ಲೊಬ್ಬ ವಿಚಿತ್ರ ಸೈಕೋ‌!

ಇನ್ನು ಅದೇ ಗ್ರಾಮದ ಸಂಬಂಧಿಕರ ಮನೆಗೆ ನುಗ್ಗಿ ಸುಲಿಗೆ ಮಾಡಿದ್ದ ಮೊಹಮ್ಮದ್ ಯೂನಸ್​​ ಎಂಬಾತನನ್ನು ಪೊಲೀಸರ ಅರೆಸ್ಟ್​ ಮಾಡಿದ್ದಾರೆ. ಮುಖಕ್ಕೆ ಮಾಸ್ಕ್ ಧರಿಸಿ, ಚಾಕು ತೋರಿಸಿ ಸುಲಿಗೆ ಮಾಡಿದ್ದ. ಸದ್ಯ ಬಂಧಿತ ಮೊಹಮ್ಮದ್ ಯೂನಸ್​ನಿಂದ 16 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:34 pm, Mon, 15 December 25

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು