AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಭೂಮಿ ಕಂಪಿಸಿದ ಗ್ರಾಮಗಳಿಗೆ NGRI ತಂಡ ಭೇಟಿ; ಜನರಿಗೆ ಶೆಡ್ ಮತ್ತು ಕಾಳಜಿ ಕೇಂದ್ರ ಓಪನ್

Kalaburagi Earthquake: ಭೂಮಿ ಕಂಪಿಸಿದ ಗ್ರಾಮಗಳಿಗೆ ಎನ್​ಜಿಆರ್​ಐ ತಂಡ ಭೌಗೋಳಿಕ ಸರ್ವೆ ಮಾಡಲಿದೆ. ಗ್ರಾಮಗಳಲ್ಲಿ ಜನರಿಗೆ ಶೆಡ್ ಮತ್ತು ಕಾಳಜಿ ಕೇಂದ್ರ ಓಪನ್ ಮಾಡಲಿರುವ ಬಗ್ಗೆಯೂ ಜಿಲ್ಲಾಧಿಕಾರಿ ಹೇಳಿಕೆ ನೀಡಿದ್ದಾರೆ.

ಕಲಬುರಗಿ: ಭೂಮಿ ಕಂಪಿಸಿದ ಗ್ರಾಮಗಳಿಗೆ NGRI ತಂಡ ಭೇಟಿ; ಜನರಿಗೆ ಶೆಡ್ ಮತ್ತು ಕಾಳಜಿ ಕೇಂದ್ರ ಓಪನ್
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on: Oct 16, 2021 | 10:12 PM

Share

ಕಲಬುರಗಿ: ಜಿಲ್ಲೆಯ ಹಲವೆಡೆ ಪದೇಪದೆ ಭೂಕಂಪ ಹಿನ್ನೆಲೆ ಭೂಮಿ ಕಂಪಿಸಿದ ಗ್ರಾಮಗಳಿಗೆ ಭಾನುವಾರ (ಅಕ್ಟೋಬರ್ 17) ಎನ್​ಜಿಆರ್​ಐ (NGRI) ತಂಡ ಭೇಟಿ ನೀಡಲಿದೆ. ಹೊಸಳ್ಳಿ ಹೆಚ್ ಗ್ರಾಮದಲ್ಲಿ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ಯಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹೊಸಳ್ಳಿ ಹೆಚ್, ಚಿಂಚೋಳಿ ಹಾಗೂ ಕಾಳಗಿ ತಾಲೂಕಿನ ಹಲವೆಡೆ ಕಂಪನ ಉಂಟಾಗಿತ್ತು. ಕಳೆದ 10 ದಿನಗಳಿಂದ 5-6 ಬಾರಿ ಭೂ ಕಂಪನವಾಗಿತ್ತು. ಈ ಹಿನ್ನೆಲೆಯಲ್ಲಿ ಎನ್​ಜಿಆರ್​ಐ ತಂಡ ಭೌಗೋಳಿಕ ಸರ್ವೆ ಮಾಡಲಿದೆ. ಗ್ರಾಮಗಳಲ್ಲಿ ಜನರಿಗೆ ಶೆಡ್ ಮತ್ತು ಕಾಳಜಿ ಕೇಂದ್ರ ಓಪನ್ ಮಾಡಲಿರುವ ಬಗ್ಗೆಯೂ ಜಿಲ್ಲಾಧಿಕಾರಿ ಹೇಳಿಕೆ ನೀಡಿದ್ದಾರೆ.

ಜಿಲ್ಲೆಯ ಹಲವೆಡೆ ಪದೇಪದೆ ಭೂಕಂಪ ವಿಚಾರಕ್ಕೆ ಸಂಬಂಧಿಸಿ ಪರಿಶೀಲನೆ ನಡೆಸಲು ಭೂಕಂಪ ಪೀಡಿತ ಗ್ರಾಮಗಳಿಗೆ ಭೂವಿಜ್ಞಾನಿಗಳ ತಂಡ ಭೇಟಿ ಅಕ್ಟೋಬರ್ 13 ರಂದು ನೀಡಿದ್ದರು. ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ತಂಡದಿಂದ ಪರಿಶೀಲನೆ ಮಾಡಲಾಗಿತ್ತು. ಕಿರಿಯ ಭೂವಿಜ್ಞಾನಿ ರಮೇಶ್ ದಿಕ್ಬಾಲ್, ವೈಜ್ಞಾನಿಕ ಸಹಾಯಕ ಸಂತೋಷ್ ಸೇರಿ ಆರು ಜನರು ಭೇಟಿ ಮಾಡಿದ್ದರು. ಗಡಿಕೇಶ್ವರ, ಹಲಚೇರಾ, ಹೊಸಳ್ಳಿ ಸೇರಿ ಕೆಲ ಗ್ರಾಮಕ್ಕೆ ಭೇಟಿ ಕೊಟ್ಟಿದ್ದಾರೆ. ಭೂಕಂಪದ ಕೇಂದ್ರ ಬಿಂದುವಿಗೂ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು.

ಕಾಳಗಿ, ಚಿಂಚೋಳಿ ತಾಲೂಕಿನ ಅನೇಕ ಹಳ್ಳಿಗಳಲ್ಲಿ ಭೂಕಂಪನ ಆಗಿತ್ತು. ಕಳೆದ ಕೆಲವು ದಿನಗಳಲ್ಲಿ ಕೆಲವು ಬಾರಿ ಭೂಕಂಪನ ಉಂಟಾಗಿತ್ತು. ಇದರಿಂದ ಜನರು ಬಹಳಷ್ಟು ಆತಂಕಕ್ಕೆ ಒಳಗಾಗಿದ್ದರು. ಗಡಿಕೇಶ್ವರ ಗ್ರಾಮದಲ್ಲಿ ನಿರಂತರವಾಗಿ ಭೂಕಂಪನ ಹಿನ್ನೆಲೆ ಸ್ಥಳೀಯ ಜನರು ಗ್ರಾಮ ತೊರೆದು ಹೋಗಲು ಶುರುಮಾಡಿದ್ದಾರೆ. ಇಂದು ಕೂಡಾ ಜನರು ಗ್ರಾಮ ತೊರೆದು ಹೋಗುತ್ತಿರುವ ದೃಶ್ಯ ಕಂಡುಬಂದಿತ್ತು. ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಭೂಕಂಪ ಭಯ ಹಿನ್ನೆಲೆಯಲ್ಲಿ ಜನರು ಮನೆ ತೊರದು ಬೇರಡೆ ಹೋಗುತ್ತಿದ್ದಾರೆ. ಸಂಬಂಧಿಕರ ಬೇರೆ ಬೇರೆ ಗ್ರಾಮಗಳಿಗೆ ಜನ ತೆರಳಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಜಿಲ್ಲೆಯ ಹಲವೆಡೆ ಭೂಕಂಪ ವಿಚಾರ; ಪರಿಶೀಲನೆ ನಡೆಸಲು ಭೂವಿಜ್ಞಾನಿಗಳ ತಂಡ ಭೇಟಿ

ಇದನ್ನೂ ಓದಿ: Kalaburagi Earthquake: ಕಲಬುರಗಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗಲೇ ಭೂಮಿಯಿಂದ ಕೇಳಿ ಬಂದ ಭಾರಿ ಸದ್ದು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ