AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆ ಪಡೆದುಕೊಳ್ಳಲು ಬಂದು ಎಂಬಿಬಿಎಸ್ ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌

ಕೋಲ್ಕತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯನ್ನು ರೇಪ್ ಮಾಡಿ ಕೊಲೆ ಮಾಡಿರುವ ಅಮಾನುಷ ಘಟನೆ ಮಾಸುವ ಮುನ್ನವೇ ಇತ್ತ ಕಲಬುರ್ಗಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಇದೀಗ ವಿಕೃತಿ ಮೆರೆದ ಅಪರಿಚಿತ ಯುವಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಚಿಕಿತ್ಸೆ ಪಡೆದುಕೊಳ್ಳಲು ಬಂದು ಎಂಬಿಬಿಎಸ್ ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌
ಚಿಕಿತ್ಸೆ ಪಡೆದುಕೊಳ್ಳಲು ಬಂದು ಎಂಬಿಬಿಎಸ್ ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌
ದತ್ತಾತ್ರೇಯ ಪಾಟೀಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 20, 2024 | 2:41 PM

Share

ಕಲಬುರಗಿ, ಆ.20: ಎಂಬಿಬಿಎಸ್ ವಿದ್ಯಾರ್ಥಿನಿಯರಿಗೆ ಯುವಕನೊಬ್ಬ ಮರ್ಮಾಂಗ ತೋರಿಸಿ ಅಸಹ್ಯವಾಗಿ ವರ್ತಿಸಿದ ಘಟನೆ ಕಲಬುರಗಿಯ ಇಎಸ್​ಐ ಆಸ್ಪತ್ರೆ(Kalaburagi ESI Hospital)ಯಲ್ಲಿ ಆ.14 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಎಸ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಓಪಿಡಿ ಚೀಟಿ ತೆಗೆದುಕೊಂಡು ಬಂದಿದ್ದ ಅಪರಿಚಿತ ಯುವಕ, ಎಂಬಿಬಿಎಸ್ ವಿದ್ಯಾರ್ಥಿನಿಯರ ಓಪಿಡಿಗೆ ಎಂಟ್ರಿ ಕೊಟ್ಟಿದ್ದಾನೆ. ಬಳಿಕ ಚಿಕಿತ್ಸೆ ಪಡೆದುಕೊಳ್ಳುವ ಹಾಗೆ ಅವರ ಮುಂದೆ ಕೂತು ಮರ್ಮಾಂಗ ತೋರಿಸಿದ ವಿಕೃತಿ ಮೆರೆದಿದ್ದಾನೆ.

ಗುಲ್ಬರ್ಗಾ ವಿ.ವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು

ಅಷ್ಟೇ ಅಲ್ಲ, ಹಾಸ್ಟೆಲ್​ನಿಂದ ಆಸ್ಪತ್ರೆಗೆ ಬರುವಾಗಲು ಹಿಂಬಾಲಿಸಿದ ಈ ವ್ಯಕ್ತಿ, ಇ‌ಎಸ್​ಐ ಆಸ್ಪತ್ರೆಯ ವಿಧ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದಾನೆ. ಬಳಿಕ ಎಚ್ಚೆತ್ತ ವಿದ್ಯಾರ್ಥಿನಿಯರು ಇಎಸ್​ಐ ಆಸ್ಪತ್ರೆಯ ಡೀನ್​​ಗೆ ಘಟನೆ ಕುರಿತು ಮಾಹಿತಿ ನೀಡಿದ್ದಾರೆ. ಇದೀಗ ಈ ಕುರಿತು ಗುಲ್ಬರ್ಗಾ ವಿ.ವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ವಿಕೃತಿ ಮೆರೆದ ಅಪರಿಚಿತ ಯುವಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಲಿಫ್ಟ್‌ ಕೇಳಿದ ಯುವತಿ ಮೇಲೆ ಎರಗಿ ಅತ್ಯಾಚಾರ ಎಸಗಿದ್ದ ಕಾಮುಕ ಅರೆಸ್ಟ್, ಸಿಸಿಟಿವಿ ಆಧರಿಸಿ ಆರೋಪಿ ಬಂಧನ

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿನಿ ಮೇಲೆ ಅಪ್ರಾಪ್ತ ಬಾಲಕ ಇರಿದ ಘಟನೆ ನಡೆದಿದೆ. ಚೂರಿಯಿಂದ ಕೈಗೆ ಇರಿದ ವಿದ್ಯಾರ್ಥಿಯನ್ನ ಸಧ್ಯ ಪೊಲೀಸ್ ವಶಕ್ಕೆ ನೀಡಲಾಗಿದೆ. ಜೊತೆಗೆ ಗಾಯಗೊಂಡ ವಿದ್ಯಾರ್ಥಿನಿಯನ್ನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾರೆ. ಆಸ್ಪತ್ರೆಯ ಮುಂದೆ ಜನ ಸೇರಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!