ಚಿಕಿತ್ಸೆ ಪಡೆದುಕೊಳ್ಳಲು ಬಂದು ಎಂಬಿಬಿಎಸ್ ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌

ಕೋಲ್ಕತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯನ್ನು ರೇಪ್ ಮಾಡಿ ಕೊಲೆ ಮಾಡಿರುವ ಅಮಾನುಷ ಘಟನೆ ಮಾಸುವ ಮುನ್ನವೇ ಇತ್ತ ಕಲಬುರ್ಗಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಇದೀಗ ವಿಕೃತಿ ಮೆರೆದ ಅಪರಿಚಿತ ಯುವಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಚಿಕಿತ್ಸೆ ಪಡೆದುಕೊಳ್ಳಲು ಬಂದು ಎಂಬಿಬಿಎಸ್ ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌
ಚಿಕಿತ್ಸೆ ಪಡೆದುಕೊಳ್ಳಲು ಬಂದು ಎಂಬಿಬಿಎಸ್ ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 20, 2024 | 2:41 PM

ಕಲಬುರಗಿ, ಆ.20: ಎಂಬಿಬಿಎಸ್ ವಿದ್ಯಾರ್ಥಿನಿಯರಿಗೆ ಯುವಕನೊಬ್ಬ ಮರ್ಮಾಂಗ ತೋರಿಸಿ ಅಸಹ್ಯವಾಗಿ ವರ್ತಿಸಿದ ಘಟನೆ ಕಲಬುರಗಿಯ ಇಎಸ್​ಐ ಆಸ್ಪತ್ರೆ(Kalaburagi ESI Hospital)ಯಲ್ಲಿ ಆ.14 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಎಸ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಓಪಿಡಿ ಚೀಟಿ ತೆಗೆದುಕೊಂಡು ಬಂದಿದ್ದ ಅಪರಿಚಿತ ಯುವಕ, ಎಂಬಿಬಿಎಸ್ ವಿದ್ಯಾರ್ಥಿನಿಯರ ಓಪಿಡಿಗೆ ಎಂಟ್ರಿ ಕೊಟ್ಟಿದ್ದಾನೆ. ಬಳಿಕ ಚಿಕಿತ್ಸೆ ಪಡೆದುಕೊಳ್ಳುವ ಹಾಗೆ ಅವರ ಮುಂದೆ ಕೂತು ಮರ್ಮಾಂಗ ತೋರಿಸಿದ ವಿಕೃತಿ ಮೆರೆದಿದ್ದಾನೆ.

ಗುಲ್ಬರ್ಗಾ ವಿ.ವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು

ಅಷ್ಟೇ ಅಲ್ಲ, ಹಾಸ್ಟೆಲ್​ನಿಂದ ಆಸ್ಪತ್ರೆಗೆ ಬರುವಾಗಲು ಹಿಂಬಾಲಿಸಿದ ಈ ವ್ಯಕ್ತಿ, ಇ‌ಎಸ್​ಐ ಆಸ್ಪತ್ರೆಯ ವಿಧ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದಾನೆ. ಬಳಿಕ ಎಚ್ಚೆತ್ತ ವಿದ್ಯಾರ್ಥಿನಿಯರು ಇಎಸ್​ಐ ಆಸ್ಪತ್ರೆಯ ಡೀನ್​​ಗೆ ಘಟನೆ ಕುರಿತು ಮಾಹಿತಿ ನೀಡಿದ್ದಾರೆ. ಇದೀಗ ಈ ಕುರಿತು ಗುಲ್ಬರ್ಗಾ ವಿ.ವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ವಿಕೃತಿ ಮೆರೆದ ಅಪರಿಚಿತ ಯುವಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಲಿಫ್ಟ್‌ ಕೇಳಿದ ಯುವತಿ ಮೇಲೆ ಎರಗಿ ಅತ್ಯಾಚಾರ ಎಸಗಿದ್ದ ಕಾಮುಕ ಅರೆಸ್ಟ್, ಸಿಸಿಟಿವಿ ಆಧರಿಸಿ ಆರೋಪಿ ಬಂಧನ

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿನಿ ಮೇಲೆ ಅಪ್ರಾಪ್ತ ಬಾಲಕ ಇರಿದ ಘಟನೆ ನಡೆದಿದೆ. ಚೂರಿಯಿಂದ ಕೈಗೆ ಇರಿದ ವಿದ್ಯಾರ್ಥಿಯನ್ನ ಸಧ್ಯ ಪೊಲೀಸ್ ವಶಕ್ಕೆ ನೀಡಲಾಗಿದೆ. ಜೊತೆಗೆ ಗಾಯಗೊಂಡ ವಿದ್ಯಾರ್ಥಿನಿಯನ್ನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾರೆ. ಆಸ್ಪತ್ರೆಯ ಮುಂದೆ ಜನ ಸೇರಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us