AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಕೇದಾರನಾಥ ದರ್ಶನ: ಹಿಮಾಲಯದ ಮಾದರಿ ಪೆಂಡಾಲ್‌ನಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ

ಕಲಬುರಗಿಯಲ್ಲಿ ಗಣೇಶೋತ್ಸವ ಸಂಭ್ರಮ ಮನೆಮಾಡಿದೆ. ಹಿಂದೂ ಮಹಾಗಣಪತಿ ಸಮಿತಿ ಈ ವರ್ಷ ಕೇದಾರನಾಥ ದೇವಾಲಯದ ಮಾದರಿಯಲ್ಲಿ ಪೆಂಡಾಲ್ ನಿರ್ಮಿಸಿದ್ದು, ಭಕ್ತರಿಗೆ ಕೇದಾರನಾಥ ಮತ್ತು 12 ಜ್ಯೋತಿರ್ಲಿಂಗಗಳ ದರ್ಶನದ ಅನುಭವ ನೀಡುತ್ತಿದೆ. ಕಳೆದ ವರ್ಷ ಅಯೋಧ್ಯೆ ರಾಮಮಂದಿರ, ಹಿಂದಿನ ವರ್ಷ ತಿರುಪತಿ ಮಾದರಿ ಮಾಡಿತ್ತು. ಈ ವಿಶಿಷ್ಟ ಪರಿಕಲ್ಪನೆ ಭಕ್ತರನ್ನು ಆಕರ್ಷಿಸುತ್ತಿದೆ, ಆಧ್ಯಾತ್ಮಿಕ ಅನುಭವ ನೀಡುತ್ತಿದೆ.

ಕಲಬುರಗಿಯಲ್ಲಿ ಕೇದಾರನಾಥ ದರ್ಶನ: ಹಿಮಾಲಯದ ಮಾದರಿ ಪೆಂಡಾಲ್‌ನಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ
ಕಲಬುರಗಿ ಗಣೇಶImage Credit source: Tv9 kannada
ದತ್ತಾತ್ರೇಯ ಪಾಟೀಲ್​
| Edited By: |

Updated on: Sep 15, 2026 | 7:34 AM

Share

ಕಲಬುರಗಿ, ಸೆ.15: ಬಿಸಿಲನಾಡು ಕಲಬುರಗಿಯಲ್ಲಿ ಗೌರಿ-ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದ್ದು, ನಾಡಿನಾದ್ಯಂತ ವಿಘ್ನನಿವಾರಕ ಎಕದಂತನನ್ನು ಭಕ್ತಿ-ಸಡಗರದಿಂದ ಬರಮಾಡಿಕೊಳ್ಳಲಾಗಿದೆ. ಈ ಬಾರಿ ಕಲಬುರಗಿ ನಗರದ ಕೋಟೆ ಎದುರು ಸ್ಥಾಪಿಸಲಾಗಿರುವ ‘ಹಿಂದೂ ಮಹಾಗಣಪತಿ’ ಭಕ್ತಾದಿಗಳಿಗೆ ಹಿಮಾಲಯದ ಕೇದಾರನಾಥ ಪುಣ್ಯಕ್ಷೇತ್ರದ ಅನುಭೂತಿಯನ್ನು ನೀಡುತ್ತಿದ್ದು, ಸಾರ್ವಜನಿಕರ ಕಣ್ಣುಸೆಳೆಯುತ್ತಿದೆ.

ಪ್ರತಿವರ್ಷವೂ ವಿನೂತನ ಪರಿಕಲ್ಪನೆಯೊಂದಿಗೆ ಗಣೇಶೋತ್ಸವ ಆಚರಿಸುವ ಹಿಂದೂ ಮಹಾಗಣಪತಿ ಸಮಿತಿಯ ಅಭೂತಪೂರ್ವ ಥೀಮ್, ಈ ಬಾರಿಯ ಹಬ್ಬದ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ. ಕಲಬುರಗಿಯ ಕೋಟೆ ಮುಂಭಾಗದಲ್ಲಿ ಅತ್ಯಂತ ಭವ್ಯವಾಗಿ ನಿರ್ಮಿಸಲಾಗಿರುವ ಪೆಂಡಾಲ್ ಥೇಟ್ ಹಿಮಾಲಯದ ಕೇದಾರನಾಥ ದೇವಾಲಯದ ಮಾದರಿಯಲ್ಲಿದೆ.

ಕೇದಾರನಾಥ ಮಂದಿರದ ಮಾದರಿಯ ಗರ್ಭಗುಡಿಯಲ್ಲಿ ವಿಘ್ನ ವಿನಾಶಕ ಗಣೇಶನ ಮೂರ್ತಿಯನ್ನು ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಗಿದೆ. ಕೇದಾರನಾಥ ಶಿವಲಿಂಗದ ಜೊತೆಗೆ ಪೆಂಡಾಲ್‌ನಲ್ಲಿ ಭಕ್ತಾದಿಗಳಿಗಾಗಿ 12 ಜ್ಯೋತಿರ್ಲಿಂಗಗಳ ದರ್ಶನಕ್ಕೂ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಕಲಬುರಗಿಯಲ್ಲೇ ಇದ್ದು ಹಿಮಾಲಯದ ಕೇದಾರನಾಥ ಯಾತ್ರೆ ಮಾಡಿದ ಅನುಭವವನ್ನು ಜನತೆ ಪಡೆಯುತ್ತಿದ್ದಾರೆ.

ಹಿಂದೂ ಮಹಾಗಣಪತಿ ಸಮಿತಿಯ ಸದಸ್ಯ ಬಸವರಾಜ್ ಮಾತನಾಡಿ, ಸಮಿತಿಯು ಪ್ರತಿವರ್ಷ ವಿಶಿಷ್ಟ ಪರಿಕಲ್ಪನೆಯಲ್ಲಿ ಗಣೇಶೋತ್ಸವ ಆಚರಿಸುವ ಸಂಪ್ರದಾಯ ಇಟ್ಟುಕೊಂಡಿದೆ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಅಯೋಧ್ಯೆಯ ಶ್ರೀರಾಮ ಮಂದಿರದ ಮಾದರಿ ಪೆಂಡಾಲ್. ಅದಕ್ಕೂ ಹಿಂದಿನ ವರ್ಷ ತಿರುಪತಿ ತಿಮ್ಮಪ್ಪನ ದೇವಸ್ಥಾನದ ಮಾದರಿ ಮಾಡಲಾಗಿತ್ತು. ಈ ಬಾರಿ ಬಿಸಿಲನಾಡಿನ ಜನರಿಗೆ ಹಿಮಾಲಯದ ಅನುಭವ ನೀಡಲು ಕೇದಾರನಾಥ ಮಂದಿರ ಮಾದರಿ ಮಾಡಲಾಗಿದೆ.

ಇದನ್ನೂ ಓದಿ: ರಾಜ್ಯದ ಗಾಳಿಯ ಗುಣಮಟ್ಟ ವರದಿ: ಕರಾವಳಿಯಲ್ಲಿ ಉತ್ತಮ, ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾಧಾರಣ

ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಹಾಗಣಪತಿಯನ್ನು ವೈಭವದಿಂದ ಸ್ವಾಗತಿಸಲಾಗಿದ್ದು, ಕೇದಾರನಾಥ ಗಣೇಶನ ದರ್ಶನ ಪಡೆಯಲು ಭಕ್ತರು ತಂಡೋಪತಂಡವಾಗಿ ಹರಿದುಬರುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಗಜಕೇಸರಿ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ