AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್ಸ್ ಆಸ್ಪತ್ರೆ ಆಕ್ಸಿಜನ್ ಸಮಸ್ಯೆ ಪ್ರಕರಣಕ್ಕೆ ಟ್ವಿಸ್ಟ್: ವಿಡಿಯೋ ವೈರಲ್ ಹಿಂದೆ ಖಾಸಗಿ ಆಸ್ಪತ್ರೆ ಕೈವಾಡ; ಸಚಿವ ಪಾಟೀಲ್

ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಕ್ಸಿಜನ್ ನೀಡುವಲ್ಲಿ ಆದ ಸಮಸ್ಯೆ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ವಿದ್ಯುತ್ ಸಮಸ್ಯೆ ಬಗ್ಗೆ ಒಪ್ಪಿಕೊಂಡಿರುವ ಅವರು, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಆದರೆ, ವಿಡಿಯೋ ವೈರಲ್ ವಿಚಾರವಾಗಿ ಖಾಸಗಿ ಆಸ್ಪತ್ರೆಗಳ ಮೇಲೆ ಆರೋಪ ಮಾಡಿದ್ದಾರೆ.

ಜಿಮ್ಸ್ ಆಸ್ಪತ್ರೆ ಆಕ್ಸಿಜನ್ ಸಮಸ್ಯೆ ಪ್ರಕರಣಕ್ಕೆ ಟ್ವಿಸ್ಟ್: ವಿಡಿಯೋ ವೈರಲ್ ಹಿಂದೆ ಖಾಸಗಿ ಆಸ್ಪತ್ರೆ ಕೈವಾಡ; ಸಚಿವ ಪಾಟೀಲ್
ರೋಗಿಗೆ ಆಸ್ಪತ್ರೆ ಸಿಬ್ಬಂದಿ ಹ್ಯಾಂಡ್​ ಪಂಪ್ ಮೂಲಕ ಆಕ್ಸಿಜನ್ ನೀಡುತ್ತಿರುವುದು (ಎಡ ಚಿತ್ರ), ಸಚಿವ ಶರಣಪ್ರಕಾಶ್ ಪಾಟೀಲ್ (ಬಲಚಿತ್ರ)
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Mar 24, 2025 | 11:31 AM

Share

ಕಲಬುರಗಿ, ಮಾರ್ಚ್ 24: ವಿದ್ಯುತ್ ಸಮಸ್ಯೆಯಿಂದ ಆಕ್ಸಿಜನ್ (Oxygen) ಸಿಗದೇ ಜಿಮ್ಸ್ ಆಸ್ಪತ್ರೆಯಲ್ಲಿ (GIMS Hospital) ರೋಗಿಗಳು ಪರದಾಡುವಂತಾದ ಘಟನೆ ಬಗ್ಗೆ ಇದೀಗ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ (Sharanprakash Patil) ಪ್ರತಿಕ್ರಿಯಿಸಿದ್ದಾರೆ. ವೈದ್ಯಕೀಯ ಸಿಬ್ಬಂದಿ ಹ್ಯಾಂಡ್ ಪಂಪ್ ಮೂಲಕ ಆಕ್ಸಿಜನ್ ಪೂರೈಕೆ ಮಾಡುವ ವಿಡಿಯೋವನ್ನು ವೈರಲ್ ಮಾಡಿದ್ದರ ಹಿಂದೆ ಖಾಸಗಿ ಆಸ್ಪತ್ರೆಗಳ ಕೈವಾಡ ಇರಬಹುದು ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ನಮ್ಮ ಸರ್ಕಾರಿ ಆಸ್ಪತ್ರೆಯ ದಕ್ಷತೆಯನ್ನು ಅವರಿಗೆ (ಖಾಸಗಿ ಆಸ್ಪತ್ರೆಗಳು) ಸಹಿಸಿಕೊಳ್ಳಲಾಗುತ್ತಿಲ್ಲ. ಹೀಗಾಗಿ ವಿಡಿಯೋ ವೈರಲ್ ಮಾಡಿದ್ದಾರೆ. ವೈರಲ್ ವಿಡಿಯೋದಲ್ಲಿ ಖಾಸಗಿ ಆಸ್ಪತ್ರೆ ಲೋಗೊ ಇದೆ ಎಂದು ಅವರು ದೂರಿದ್ದಾರೆ.

ಆಕ್ಸಿಜನ್ ಕೊರತೆ ಇಲ್ಲ: ಸಚಿವ ಪಾಟೀಲ್ ಸ್ಪಷ್ಟನೆ

ಮೊನ್ನೆ ಐಸಿಯೂ ವಾರ್ಡ್​ನಲ್ಲಿ ವಿದ್ಯುತ್ ಸಮಸ್ಯೆ ಆಗಿತ್ತು. ತಕ್ಷಣವೇ ವಿದ್ಯುತ್ ಬಂದಿದೆ. ಹೀಗಾಗಿ ಯಾವುದೇ ತೊಂದರೆಯಾಗಿಲ್ಲ. ತಾಂತ್ರಿಕ ದೋಷದಿಂದ ವಿದ್ಯುತ್ ಟ್ರಿಪ್ ಆಗಿತ್ತು. ಆದರೆ ಅಕ್ಸಿಜನ್ ಕೊರತೆಯಿರಲಿಲ್ಲ. ವಿದ್ಯುತ್ ಸಮಸ್ಯೆ ಬಗ್ಗೆ ಜೆಸ್ಕಾಂ ಎಂಡಿ ಜೊತೆ ಮಾತನಾಡಿದ್ದೇನೆ. ಜಿಮ್ಸ್​​ಗೆ ಪ್ರತ್ಯೆಕ ಎಇಇ ನೇಮಕ ಮಾಡುವಂತೆ ಸೂಚನೆ ನೀಡಿದ್ದೇನೆ. ವಿದ್ಯುತ್ ಸಮಸ್ಯೆ ಬಗೆಹರಿಸಲು ನಮಗೆ ಖಾಯಂ ಎಇಇ ಅವಶ್ಯಕತೆಯಿದೆ ಎಂದು ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಜಿಮ್ಸ್​ ಆಸ್ಪತ್ರೆಯಲ್ಲಿ ಏನಾಗಿತ್ತು?

ಜಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲುಕಿನ ರೇವಣಸಿದ್ದಪ್ಪ, ದೇವೆಂದ್ರಪ್ಪ, ಯಾದಗೀರಿ ಜಿಲ್ಲೆಯ ಶಹಾಪುರದ ಒಂದು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಆ ಸಂದರ್ಭದಲ್ಲಿ ಏಕಾಏಕಿ ವಿದ್ಯುತ್ ಕೈಕೊಟ್ಟಿತ್ತು. ಎಲ್ಲಾ ರೋಗಿಗಳ ಕುಟುಂಬಸ್ಥರಲ್ಲಿ ಆತಂಕ ಹೆಚ್ಚಾಗಿತ್ತು. ವಿದ್ಯುತ್ ಇಲ್ಲದಾಗ ರೋಗಿಗಳಿಗೆ ಆಕ್ಸಿಜನ್ ನೀಡಲು ಪರ್ಯಾಯ ವ್ಯವಸ್ಥೆ ಜಿಮ್ಸ್ ಆಸ್ಪತ್ರೆಯಲ್ಲಿ ಇರಲಿಲ್ಲ. ಹೀಗಾಗಿ ಆಸ್ಪತ್ರೆ ಸಿಬ್ಬಂದಿ ಕಾರಣ ಹ್ಯಾಂಡ್ ಪಂಪ್​ನಿಂದ ಆಕ್ಸಿಜನ್ ಪೂರೈಕೆ ಮಾಡಿದ್ದರು. ಹತ್ತರಿಂದ ಹದಿನದು ನಿಮಿಷದಲ್ಲಿ ವಿದ್ಯುತ್ ಬಂದಿದ್ದರಿಂದ ಭಾರಿ ದುರಂತ ತಪ್ಪಿತ್ತು.

ಇದನ್ನೂ ಓದಿ
Image
ಆಯಸ್ಸು ಮುಗಿದರೂ ಬದಲಾಗದ ತುಂಗಭದ್ರಾ ಡ್ಯಾಂ ಕ್ರೆಸ್ಟ್​ಗೇಟ್​ಗಳು!
Image
ಕೋಳಿ, ಸಿಗರೇಟು, ಹೆಂಡ ನೈವೇದ್ಯ! ಕಾರವಾರದ ಖಾಪ್ರಿ ದೈವದ ಹಿನ್ನೆಲೆಯೇ ರೋಚಕ
Image
ಬಾಗಲಕೋಟೆ: ಕುಸಿದ ಬಿಳಿಜೋಳದ ಬೆಲೆ, ರೈತರು ಕಂಗಾಲು
Image
ಜಿಮ್ಸ್​ನಲ್ಲಿ ಆಕ್ಸಿಜನ್​ಗಾಗಿ ರೋಗಿಗಳ ನರಳಾಟ, ವಿಡಿಯೋ ವೈರಲ್

ಇದನ್ನೂ ಓದಿ: ಕಲಬುರಗಿ: ಜಿಮ್ಸ್​ನಲ್ಲಿ ಆಕ್ಸಿಜನ್​ಗಾಗಿ ರೋಗಿಗಳ ನರಳಾಟ, ವೈದ್ಯಕೀಯ ಶಿಕ್ಷಣ ಸಚಿವರ ತವರಲ್ಲೇ ಅಧ್ವಾನ

ಒಂದು ವೇಳೆ ಗಂಟೆಗಟ್ಟಲೆ ವಿದ್ಯತ್ ಇಲ್ಲವಾಗಿದ್ದರೆ ಆಗ ರೋಗಿಗಳು ಏನು ಮಾಡಬೇಕಿತ್ತು ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲವು ದಿನಗಳ ಹಿಂದಷ್ಟೇ ಇದೇ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಒಂದೇ ಒಂದು ಗಂಟೆಯ ಅವಧಿಯಲ್ಲಿ ಇಬ್ಬರು ರೋಗಿಗಳು ಸಾವನ್ನಪ್ಪಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:29 am, Mon, 24 March 25

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು