AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಯೂಟದ ಸಾಂಬಾರ್​ಗೆ​ ಬಿದ್ದು ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಸಾವು, ಇಬ್ಬರು ಅಮಾನತು

ನ.16ರಂದು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಚಿಣಮಗೇರಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ಮಹಾಂತಮ್ಮ ಎಂಬ ಬಾಲಕಿ ಬಿಸಿಯೂಟದ ಸಾಂಬಾರ್​ಗೆ​ ಬಿದ್ದು ಗಾಯಗೊಂಡಿದ್ದಳು. ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

ಬಿಸಿಯೂಟದ ಸಾಂಬಾರ್​ಗೆ​ ಬಿದ್ದು ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಸಾವು, ಇಬ್ಬರು ಅಮಾನತು
ವಿದ್ಯಾರ್ಥಿನಿ ಮಹಂತಮ್ಮ
ದತ್ತಾತ್ರೇಯ ಪಾಟೀಲ್​
| Edited By: ಆಯೇಷಾ ಬಾನು|

Updated on:Nov 19, 2023 | 10:34 AM

Share

ಕಲಬುರಗಿ, ನ.19: ಬಿಸಿಯೂಟದ ಸಾಂಬಾರ್​ಗೆ​ ಬಿದ್ದು ಗಾಯಗೊಂಡಿದ್ದ ಬಾಲಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ (Death). ಕಲಬುರಗಿ (Kalaburagi) ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ ಮಹಾಂತಮ್ಮ ಎಂಬ ಬಾಲಕಿ ಮಧ್ಯಾಹ್ನ ಊಟ ಮಾಡಲು ಎಂದು ಅಡುಗೆ ಮನೆಗೆ ಹೋಗಿದ್ದಾಗ ಬಿಸಿ ಸಾಂಬಾರ್​ ಪಾತ್ರೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಶಾಲಾ ಮುಖ್ಯೋಪಾಧ್ಯಾಯ, ಅಡುಗೆ ಮೇಲ್ವಿಚಾರಕಿ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಘಟನೆ ಹಿನ್ನೆಲೆ

ನ.16ರಂದು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಚಿಣಮಗೇರಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ಮಹಾಂತಮ್ಮ ಎಂಬ ಬಾಲಕಿ ಮಧ್ಯಾಹ್ನ 1.30ಕ್ಕೆ ಊಟದ ಸಮಯದಲ್ಲಿ ಊಟ ಮಾಡಲು ಅಡುಗೆ ಕೋಣೆಯತ್ತ ಹೋಗಿದ್ದಳು. ಈ ವೇಳೆ ಮಹಾಂತಮ್ಮ ಆಯಾತಪ್ಪಿ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದಿದ್ದಳು. ಸಾಂಬಾರ್ ಪಾತ್ರೆಗೆ ಬಿದ್ದ ಪರಿಣಾಮ ಬಾಲಕಿ ಮಹಾಂತಮ್ಮ ಗಂಭೀರ ಗಾಯಗೊಂಡಿದ್ದು, ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಬಿಸಿಯೂಟದ ಸಾಂಬರ್​ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ ಪ್ರಕರಣ: ಶಾಲಾ ಮುಖ್ಯ ಶಿಕ್ಷಕಿ ಅಮಾನತು

ಇನ್ನೂ ಘಟನೆ ನಂತರ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯದ ಪರಿಣಾಮದಿಂದಲೇ ಎರಡನೇ ತರಗತಿ ಓದುತ್ತಿದ್ದ ಬಾಲಕಿ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದಾಳೆಂದು ಪೋಷಕರು ಆಕ್ರೋಶ ಹೊರ ಹಾಕಿದ್ದರು. ಶಾಲೆಯಲ್ಲಿ ಅಡುಗೆ ಕೋಣೆ ಕಡೆ ಯಾರೊಬ್ಬ ಮಕ್ಕಳನ್ನ ಬಿಡಬಾರದು. ಮಕ್ಕಳು ಅಡುಗೆ ಕೋಣೆಯತ್ತ ಬರದಂತೆ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳು ಎಚ್ಚರಿಕೆ ವಹಿಸಬೇಕು. ಆದರೆ ಇಲ್ಲಿ ಮಾತ್ರ ಇಬ್ಬರ ನಿರ್ಲಕ್ಷ್ಯದಿಂದ ಪುಟ್ಟ ಬಾಲಕಿ ಆಯಾ ತಪ್ಪಿ ಸಾಂಬಾರ್ ಪಾತ್ರೆಗೆ ಬಿದ್ದಿದ್ದು, ತೀವ್ರ ತರದ ಸುಟ್ಟ ಗಾಯಗಳೊಂದಿಗೆ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾಳೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದರು. ಬಳಿಕ ಶಾಲಾ ಮುಖ್ಯೋಪಾಧ್ಯಾಯ, ಅಡುಗೆ ಮೇಲ್ವಿಚಾರಕಿ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು.

ಕಲಬುರಗಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:05 am, Sun, 19 November 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್