AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಟ್ರ್ಯಾಪ್ ಖೆಡ್ಡಾಕ್ಕೆ ಬಿದ್ದ ಕಲಬುರಗಿಯ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು!

ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳು, ಹನಿಟ್ರ್ಯಾಪ್​​​ಗೆ ಬಡ ಕುಟುಂಬದ ಯುವತಿಯರನ್ನು ಬಳಕೆ ಮಾಡಿಕೊಳ್ಳುತ್ತಿದ್ದರು.

ಹನಿಟ್ರ್ಯಾಪ್ ಖೆಡ್ಡಾಕ್ಕೆ ಬಿದ್ದ ಕಲಬುರಗಿಯ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು!
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ್​
| Edited By: ವಿವೇಕ ಬಿರಾದಾರ|

Updated on: Sep 07, 2024 | 10:10 AM

Share

ಕಲಬುರಗಿ, ಸೆಪ್ಟೆಂಬರ್​​ 07: ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ (Honey Trap)​​ ಖೆಡ್ಡಾಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ಕಲಬುರಗಿಯ (Kalaburagi) ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿದೆ. ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ ರೆಡ್ಡಿ, ಮಂಜು ಭಂಡಾರಿ ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳು ಸಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾರೆ. ನಂತರ, ಅವರ ಆರ್ಥಿಕ ಪರಿಸ್ಥ ಆರ್ಥಿಕ ಪರಸ್ಥಿತಿ ನೋಡಿಕೊಂಡು ಅವರಿಗೆ ಹಣದ ಆಮಿಷ ತೋರಿಸಿದ್ದಾರೆ. ಬಳಿಕ, ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ. ಆರೋಪಿಗಳು 10ಕ್ಕೂ ಹೆಚ್ಚು ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ಹನಿಟ್ರ್ಯಾಪ್​ ಮೂಲಕ ಶಾಸಕ ಹರೀಶ್​ಗೌಡಗೆ ಬ್ಲ್ಯಾಕ್​ ಮೇಲ್​ ಮಾಡಿದ್ದ ಆರೋಪಿಗಳ ಬಂಧನ

ನಂತರ, ದೊಡ್ಡ ದೊಡ್ಡ ಉದ್ಯಮಿ, ಅಧಿಕಾರಿಗಳನ್ನು ಟಾರ್ಗೆಟ್​​ ಮಾಡುತ್ತಿದ್ದರು. ತಾವು ಟಾರ್ಗೆಟ್​ ಮಾಡಿದವರ ಜೊತೆ ಪಲ್ಲಂಗ ಹಂಚಿಕೊಳ್ಳುವಂತೆ ಹೇಳುತ್ತಿದ್ದರು. ಅಧಿಕಾರಿಗಳು ಅಥವಾ ಉದ್ಯಮಿಗಳು ಯುವತಿಯರೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ಫೋಟೋ ತೆಗೆದುಕೊಂಡು, ವಿಡಿಯೋ  ರೆಕಾರ್ಡ್​​ ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಡುತ್ತಾರೆ.​

ಆರೋಪಿಗಳು, ಹನಿಟ್ರ್ಯಾಪ್​ ಮೂಲಕ ಕಮಲಾಪುರ ಪೊಲೀಸ್​​ ಠಾಣೆ ಪೇದೆಯನ್ನು ತಮ್ಮ ಖೆಡ್ಡಾಕ್ಕೆ ಕೆಡವಿಕೊಂಡಿದ್ದಾರೆ. ಬಳಿಕ, ಪೊಲೀಸ್​​ ಪೇದೆಗೆ ಬ್ಲ್ಯಾಕ್ ಮಾಡಿ 7 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಹೀಗೆ ಉದ್ಯಮಿಯೊಬ್ಬರಿಂದ 40 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಅಲ್ಲದೇ, ಆರೋಪಿಗಳು ಓರ್ವ ಯುವತಿಗೆ ಗರ್ಭಪಾತ ಮಾಡಿಸಿದ್ದರು. ಆರೋಪಿಗಳ ದುಷ್ಕೃತ್ಯದ ಬಗ್ಗೆ ಸಂತ್ರಸ್ತೆ ಟಿವಿ9 ಡಿಜಿಟಲ್​ ಮುಂದೆ ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬಾನಿ ಮನೆಯಲ್ಲಿ ಅದ್ದೂರಿ ಗಣೇಶೋತ್ಸವ; ರಾಧಿಕಾ ಮರ್ಚೆಂಟ್​ ನೃತ್ಯ
ಅಂಬಾನಿ ಮನೆಯಲ್ಲಿ ಅದ್ದೂರಿ ಗಣೇಶೋತ್ಸವ; ರಾಧಿಕಾ ಮರ್ಚೆಂಟ್​ ನೃತ್ಯ
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ