ಹನಿಟ್ರ್ಯಾಪ್ ಖೆಡ್ಡಾಕ್ಕೆ ಬಿದ್ದ ಕಲಬುರಗಿಯ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು!

ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳು, ಹನಿಟ್ರ್ಯಾಪ್​​​ಗೆ ಬಡ ಕುಟುಂಬದ ಯುವತಿಯರನ್ನು ಬಳಕೆ ಮಾಡಿಕೊಳ್ಳುತ್ತಿದ್ದರು.

ಹನಿಟ್ರ್ಯಾಪ್ ಖೆಡ್ಡಾಕ್ಕೆ ಬಿದ್ದ ಕಲಬುರಗಿಯ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು!
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on: Sep 07, 2024 | 10:10 AM

ಕಲಬುರಗಿ, ಸೆಪ್ಟೆಂಬರ್​​ 07: ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ (Honey Trap)​​ ಖೆಡ್ಡಾಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ಕಲಬುರಗಿಯ (Kalaburagi) ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿದೆ. ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ ರೆಡ್ಡಿ, ಮಂಜು ಭಂಡಾರಿ ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳು ಸಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾರೆ. ನಂತರ, ಅವರ ಆರ್ಥಿಕ ಪರಿಸ್ಥ ಆರ್ಥಿಕ ಪರಸ್ಥಿತಿ ನೋಡಿಕೊಂಡು ಅವರಿಗೆ ಹಣದ ಆಮಿಷ ತೋರಿಸಿದ್ದಾರೆ. ಬಳಿಕ, ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ. ಆರೋಪಿಗಳು 10ಕ್ಕೂ ಹೆಚ್ಚು ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ಹನಿಟ್ರ್ಯಾಪ್​ ಮೂಲಕ ಶಾಸಕ ಹರೀಶ್​ಗೌಡಗೆ ಬ್ಲ್ಯಾಕ್​ ಮೇಲ್​ ಮಾಡಿದ್ದ ಆರೋಪಿಗಳ ಬಂಧನ

ನಂತರ, ದೊಡ್ಡ ದೊಡ್ಡ ಉದ್ಯಮಿ, ಅಧಿಕಾರಿಗಳನ್ನು ಟಾರ್ಗೆಟ್​​ ಮಾಡುತ್ತಿದ್ದರು. ತಾವು ಟಾರ್ಗೆಟ್​ ಮಾಡಿದವರ ಜೊತೆ ಪಲ್ಲಂಗ ಹಂಚಿಕೊಳ್ಳುವಂತೆ ಹೇಳುತ್ತಿದ್ದರು. ಅಧಿಕಾರಿಗಳು ಅಥವಾ ಉದ್ಯಮಿಗಳು ಯುವತಿಯರೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ಫೋಟೋ ತೆಗೆದುಕೊಂಡು, ವಿಡಿಯೋ  ರೆಕಾರ್ಡ್​​ ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಡುತ್ತಾರೆ.​

ಆರೋಪಿಗಳು, ಹನಿಟ್ರ್ಯಾಪ್​ ಮೂಲಕ ಕಮಲಾಪುರ ಪೊಲೀಸ್​​ ಠಾಣೆ ಪೇದೆಯನ್ನು ತಮ್ಮ ಖೆಡ್ಡಾಕ್ಕೆ ಕೆಡವಿಕೊಂಡಿದ್ದಾರೆ. ಬಳಿಕ, ಪೊಲೀಸ್​​ ಪೇದೆಗೆ ಬ್ಲ್ಯಾಕ್ ಮಾಡಿ 7 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಹೀಗೆ ಉದ್ಯಮಿಯೊಬ್ಬರಿಂದ 40 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಅಲ್ಲದೇ, ಆರೋಪಿಗಳು ಓರ್ವ ಯುವತಿಗೆ ಗರ್ಭಪಾತ ಮಾಡಿಸಿದ್ದರು. ಆರೋಪಿಗಳ ದುಷ್ಕೃತ್ಯದ ಬಗ್ಗೆ ಸಂತ್ರಸ್ತೆ ಟಿವಿ9 ಡಿಜಿಟಲ್​ ಮುಂದೆ ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭದ್ರತಾ ಪಡೆಯಿಂದ ಉಗ್ರನ ಎನ್​ಕೌಂಟರ್​, ವಿಡಿಯೋ ಸೆರೆಹಿಡಿದ ಡ್ರೋನ್
ಭದ್ರತಾ ಪಡೆಯಿಂದ ಉಗ್ರನ ಎನ್​ಕೌಂಟರ್​, ವಿಡಿಯೋ ಸೆರೆಹಿಡಿದ ಡ್ರೋನ್
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಚೆನ್ನೈನಲ್ಲಿ ಕೊಹ್ಲಿ, ರೋಹಿತ್ ಭರ್ಜರಿ ಬ್ಯಾಟಿಂಗ್ ಪ್ರಾಕ್ಟೀಸ್
ಚೆನ್ನೈನಲ್ಲಿ ಕೊಹ್ಲಿ, ರೋಹಿತ್ ಭರ್ಜರಿ ಬ್ಯಾಟಿಂಗ್ ಪ್ರಾಕ್ಟೀಸ್