AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಟ್ರ್ಯಾಪ್ ಖೆಡ್ಡಾಕ್ಕೆ ಬಿದ್ದ ಕಲಬುರಗಿಯ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು!

ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳು, ಹನಿಟ್ರ್ಯಾಪ್​​​ಗೆ ಬಡ ಕುಟುಂಬದ ಯುವತಿಯರನ್ನು ಬಳಕೆ ಮಾಡಿಕೊಳ್ಳುತ್ತಿದ್ದರು.

ಹನಿಟ್ರ್ಯಾಪ್ ಖೆಡ್ಡಾಕ್ಕೆ ಬಿದ್ದ ಕಲಬುರಗಿಯ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು!
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Sep 07, 2024 | 10:10 AM

Share

ಕಲಬುರಗಿ, ಸೆಪ್ಟೆಂಬರ್​​ 07: ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ (Honey Trap)​​ ಖೆಡ್ಡಾಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ಕಲಬುರಗಿಯ (Kalaburagi) ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿದೆ. ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ ರೆಡ್ಡಿ, ಮಂಜು ಭಂಡಾರಿ ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳು ಸಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾರೆ. ನಂತರ, ಅವರ ಆರ್ಥಿಕ ಪರಿಸ್ಥ ಆರ್ಥಿಕ ಪರಸ್ಥಿತಿ ನೋಡಿಕೊಂಡು ಅವರಿಗೆ ಹಣದ ಆಮಿಷ ತೋರಿಸಿದ್ದಾರೆ. ಬಳಿಕ, ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ. ಆರೋಪಿಗಳು 10ಕ್ಕೂ ಹೆಚ್ಚು ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ಹನಿಟ್ರ್ಯಾಪ್​ ಮೂಲಕ ಶಾಸಕ ಹರೀಶ್​ಗೌಡಗೆ ಬ್ಲ್ಯಾಕ್​ ಮೇಲ್​ ಮಾಡಿದ್ದ ಆರೋಪಿಗಳ ಬಂಧನ

ನಂತರ, ದೊಡ್ಡ ದೊಡ್ಡ ಉದ್ಯಮಿ, ಅಧಿಕಾರಿಗಳನ್ನು ಟಾರ್ಗೆಟ್​​ ಮಾಡುತ್ತಿದ್ದರು. ತಾವು ಟಾರ್ಗೆಟ್​ ಮಾಡಿದವರ ಜೊತೆ ಪಲ್ಲಂಗ ಹಂಚಿಕೊಳ್ಳುವಂತೆ ಹೇಳುತ್ತಿದ್ದರು. ಅಧಿಕಾರಿಗಳು ಅಥವಾ ಉದ್ಯಮಿಗಳು ಯುವತಿಯರೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ಫೋಟೋ ತೆಗೆದುಕೊಂಡು, ವಿಡಿಯೋ  ರೆಕಾರ್ಡ್​​ ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಡುತ್ತಾರೆ.​

ಆರೋಪಿಗಳು, ಹನಿಟ್ರ್ಯಾಪ್​ ಮೂಲಕ ಕಮಲಾಪುರ ಪೊಲೀಸ್​​ ಠಾಣೆ ಪೇದೆಯನ್ನು ತಮ್ಮ ಖೆಡ್ಡಾಕ್ಕೆ ಕೆಡವಿಕೊಂಡಿದ್ದಾರೆ. ಬಳಿಕ, ಪೊಲೀಸ್​​ ಪೇದೆಗೆ ಬ್ಲ್ಯಾಕ್ ಮಾಡಿ 7 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಹೀಗೆ ಉದ್ಯಮಿಯೊಬ್ಬರಿಂದ 40 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಅಲ್ಲದೇ, ಆರೋಪಿಗಳು ಓರ್ವ ಯುವತಿಗೆ ಗರ್ಭಪಾತ ಮಾಡಿಸಿದ್ದರು. ಆರೋಪಿಗಳ ದುಷ್ಕೃತ್ಯದ ಬಗ್ಗೆ ಸಂತ್ರಸ್ತೆ ಟಿವಿ9 ಡಿಜಿಟಲ್​ ಮುಂದೆ ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ