ಹಣ ಕೊಟ್ಟವರಿಗೆ ಬೇಕಾಬಿಟ್ಟಿ ಅಂಕ: ಗುಲಬರ್ಗಾ ವಿವಿಯ ಕರ್ಮಕಾಂಡ ಬಯಲು

ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ನಡೆದ ಬೃಹತ್ ಅಂಕಪಟ್ಟಿ ಹಗರಣವನ್ನು ಟಿವಿ9 ಬಯಲಿಗೆಳೆದಿದೆ. ಹಣಕ್ಕಾಗಿ ಅಂಕಗಳನ್ನು ತಿದ್ದಲಾಗಿದೆ. ಈ ಕುರಿತು ಉನ್ನತ ಶಿಕ್ಷಣ ಸಚಿವರು ಸಿಐಡಿ ತನಿಖೆಗೆ ಒಪ್ಪಿಸುವುದಕ್ಕೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸದ್ಯ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಮೇಲೆ ಗಂಭೀರ ಆರೋಪಗಳು ಕೇಳಿಬಂದಿವೆ.

ಹಣ ಕೊಟ್ಟವರಿಗೆ ಬೇಕಾಬಿಟ್ಟಿ ಅಂಕ: ಗುಲಬರ್ಗಾ ವಿವಿಯ ಕರ್ಮಕಾಂಡ ಬಯಲು
ಗುಲಬರ್ಗಾ ವಿವಿ
Edited By:

Updated on: Jun 25, 2025 | 8:15 AM

ಕಲಬುರಗಿ, ಜೂನ್​ 25: ಗುಲಬರ್ಗಾ ವಿಶ್ವವಿದ್ಯಾಯಲದಲ್ಲಿ (Gulbarga University) ಹಣ (money)  ಕೊಟ್ಟರೆ ಸಾಕು ನಿಮಗೆ ಬೇಕಾದಷ್ಟು ಅಂಕ ನೀಡಲಾಗುತ್ತಿದೆ. ಅಷ್ಟೋ ಜನ ಹಣ ಕೊಟ್ಟು ರ‍್ಯಾಂಕ್​ ಕೂಡ ಪಡೆದಿದ್ದಾರೆ. ಈ ಬಗ್ಗೆ ಟಿವಿ9 ಸಾಕ್ಷ್ಯ ಸಮೇತ ಅಲ್ಲಿನ ಕರ್ಮಕಾಂಡವನ್ನು ಬಟಾಬಯಲು ಮಾಡಿದೆ. ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಉನ್ನತ ಶಿಕ್ಷಣ ಸಚಿವರು ಸಿಐಡಿ ತನಿಖೆಗೆ ವಹಿಸಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡುವುದಾಗಿ ಭರವಸೆ ನೀಡಿದ್ದಾರೆ.

ಹೌದು.. ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಬಿ.ಎಡ್ ಪರೀಕ್ಷೆಯ ಮೌಲ್ಯಮಾಪನದಲ್ಲಿ ಗೋಲ್ಮಾಲ್ ಬಗ್ಗೆ ಎರಡು ದಿನಗಳ ಹಿಂದೆ ಟಿವಿ9 ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಮೌಲ್ಯಮಾಪಕರು ನೀಡಿದ ಅಂಕಗಳನ್ನೇ ತಿದ್ದಿ ತಮಗೆ ಬೇಕಾದವರಿಗೆ ಬೇಕಾದಷ್ಟು ಅಂಕ ನೀಡಿರುವುದನ್ನು ಬಯಲಿಗೆಳೆಯಲಾಗಿತ್ತು. ಮೌಲ್ಯಮಾಪನ ವಿಭಾಗದ ಕೆಲ ಖದೀಮ ಸಿಬ್ಬಂದಿಗಳು, ಫೈನಲ್​​ ಮಾರ್ಕ್ಸ್ ಶೀಟನ್ನೇ ತಿದ್ದಿ ಹಣ ಕೊಟ್ಟವರಿಗೆ ಬೇಕಾದಷ್ಟು ಅಂಕ ನೀಡಿದ್ದನ್ನ ಟಿವಿ9 ಸಾಕ್ಷ್ಯ ಸಮೇತ ಬಿತ್ತರಿಸಿತ್ತು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಿಷ್ಟು 

ವಿಶ್ವವಿದ್ಯಾಯಲದ ಕರ್ಮಕಾಂಡ ಬಯಲಾಗುತ್ತಿದ್ದಂತೆ ಎಚ್ಚೆತ್ತ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಗುಲ್ಬರ್ಗ ವಿವಿಯಲ್ಲಿ ನಡೆದ ಅಕ್ರಮದ ಬಗ್ಗೆ ಸಮಗ್ರ ವರದಿ ತರಿಸಿಕೊಳ್ಳುತ್ತೇವೆ. ಅಲ್ಲದೇ ಶೀಘ್ರದಲ್ಲೇ ಮೌಲ್ಯಮಾಪನ ಹಗರಣವನ್ನ ಸಿಐಡಿ ತನಿಖೆಗೆ ಒಪ್ಪಿಸುವುದಕ್ಕೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ
ಮನೆಗಳ ಹಂಚಿಕೆಗೆ ಲಂಚ: ‘ಟಿವಿ9’ ರಿಯಾಲಿಟಿ ಚೆಕ್​ನಲ್ಲಿ ಬಯಲಾಯ್ತು ರಹಸ್ಯ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ರಾಮನಗರದಲ್ಲಿ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್

ಇದನ್ನೂ ಓದಿ: ಮನೆ ಹಂಚಿಕೆಗೆ ಹಣ: ಆಡಿಯೋ ರಿಲೀಸ್ ಮಾಡಿದ್ದ ಬಿಆರ್ ಪಾಟೀಲ್ ಕ್ಷೇತ್ರದ ವಿಡಿಯೋ ವೈರಲ್

ಅದಕ್ಕೂ ಮೊದಲು ಹಗರಣದ ಕುರಿತು ಪ್ರಾಥಮಿಕ ವರದಿಯನ್ನ ತರಿಸಿಕೊಳ್ಳುತ್ತೇವೆ. ಏಕೆಂದರೆ ಗುಲಬರ್ಗಾ, ರಾಯಚೂರು, ಶಿವಮೊಗ್ಗ ವಿಶ್ವವಿದ್ಯಾಲಯಗಳಲ್ಲಿ ಈ ಬಗ್ಗೆ ಸಮಸ್ಯೆಗಳು ಬಹಳ ಆಗುತ್ತಿವೆ. ಅಲ್ಲದೆ ತಕ್ಷಣ ಕ್ರಮ ಕೂಡ ಕೈಗೊಂಡಿದ್ದೇವೆ. ಆದರೆ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಮೌಲ್ಯ ಮಾಪನ ಹಗರಣ ದೊಡ್ಡದಿರುವುದರಿಂದ ರಾಜ್ಯಪಾಲರಿಗೆ ಶಿಫಾರಸ್ಸು ಮಾಡುತ್ತೇವೆ ಎಂದು ಹೇಳಿದ್ದಾರೆ.

ಸದ್ಯ ಮೇಲ್ನೋಟಕ್ಕೆ ಅಂಕಗಳನ್ನ ತಿದ್ದಿರುವುದು ಯಾರು ಎನ್ನೋದು ಗೊತ್ತಾಗಿದೆ. ವಿವಿ ಆಡಳಿತ ಮಂಡಳಿಗೆ ಮೌಲ್ಯಮಾಪನ ವಿಭಾಗದಲ್ಲಿ ಈ ಗೋಲ್ಮಾಲ್ ನಡೆದಿದೆ ಎನ್ನೋದು ಗೊತ್ತಿದೆ. ಆದರೂ ಇಲ್ಲಿಯವರೆಗೆ ಯಾರ ಮೇಲೂ ಕ್ರಮ ಕೈಗೊಂಡಿಲ್ಲ, ಬದಲಾಗಿ ಒಬ್ಬರ, ಮೇಲೋಬ್ಬರು ಹಾಕುವ ಪ್ರಯತ್ನ ಮಾಡುತ್ತಿದ್ದಾರೆ.

ಈ ಹಿಂದೆ ಮೌಲ್ಯಮಾಪನ ವಿಭಾಗದ ಕುಲಸಚಿವರು ಹಾಗೂ ಅಧಿಕಾರಿಗಳ ಕಡೆ ಬೊಟ್ಟು ಮಾಡಲಾಗಿತ್ತು. ಆದರೆ ಅಲ್ಲಿ ಅಂಕಗಳನ್ನ ತಿದ್ದಿ ಗೋಲ್ಮಾಲ್ ಮಾಡಿದವರ ವಿರುದ್ದ ಕ್ರಮ ತೆಗೆದುಕೊಳ್ಳುವುದಕ್ಕೆ ಹಿಂದೇಟು ಹಾಕುತ್ತಿರುವುದು ಏಕೆ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.

ಇದನ್ನೂ ಓದಿ: ಲಂಚದ ಆರೋಪ ಸಮರ್ಥಿಸಿದ ಬಿಆರ್ ಪಾಟೀಲ್: ‘ಟಿವಿ9’ ರಿಯಾಲಿಟಿ ಚೆಕ್​ನಲ್ಲಿ ಬಯಲಾಯ್ತು ಅಕ್ರಮದ ರಹಸ್ಯ

ಒಟ್ಟಿನಲ್ಲಿ ಸದ್ಯ ಗುಲಬರ್ಗಾ ಯೂನಿವರ್ಸಿಟಿ ಕರ್ಮಕಾಂಡ ಸಿಐಡಿ ಹೆಗಲೆರುವ ಸಾಧ್ಯತೆ ದಟ್ಟವಾಗಿದೆ. ಆದಷ್ಟು ಬೇಗ ರಾಜ್ಯಪಾಲರು ಒಪ್ಪಿಗೆ ಕೊಟ್ಟರೆ ಹಗರಣದ ತಿಮಿಗಿಂಲಗಳ ಬಣ್ಣ ಬಯಲಾಗುತ್ತೆ. ಉನ್ನತ ಮಟ್ಟದ ತನಿಖೆ ನಡೆದು ಕಳ್ಳ ಸಿಬ್ಬಂದಿಗಳನ್ನ ವಿವಿಯಿಂದ ಹೊರಹಾಕಲಾಗುತ್ತಾ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us