AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಿ ಹೊರಬಂದ ಹಿಂದೂಗಳು

ವಿವಾದಿತ ಲಾಡ್ಲೆ ಮಶಾಕ್ ದರ್ಗಾದ ಒಳಗಡೆ ಇರುವ ರಾಘವ ಚೈತನ್ಯ ಶಿವಲಿಂಗಕ್ಕೆ ಹಿಂದೂಗಳು ಪೂಜೆ ಸಲ್ಲಿಸಿ ಹೊರಬಂದಿದ್ದಾರೆ. ​ಹೈಕೋರ್ಟ್ ಪೀಠದ ಆದೇಶದಂತೆ ಶ್ರೀ ಸಿದ್ದಲಿಂಗ ಸ್ವಾಮೀಜಿ , ಕಡಗಂಚಿ ಶಿವಯೋಗಿಗಳು , ಬಿಜೆಪಿ ಶಾಸಕ ಅವಿನಾಶ್ ಜಾಧವ್ ಸೇರಿದಂತೆ 15 ಜನ ಪೂಜೆಗೆ ತೆರಳಿದ್ದರು. ಸುಮಾರು ಒಂದು ಗಂಟೆಗಳ ಕಾಲ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಹಿಂದೂ ಮುಖಂಡರು ಪೂಜೆ ಸಲ್ಲಿಸಿದ್ದಾರೆ.

ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಿ ಹೊರಬಂದ ಹಿಂದೂಗಳು
ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಹಿಂದೂಗಳು
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Mar 08, 2024 | 7:15 PM

Share

ಕಲಬುರಗಿ, ಮಾ.08: ಜಿಲ್ಲೆಯ ಆಳಂದ ಪಟ್ಟಣದಲ್ಲಿರುವ ವಿವಾದಿತ ಲಾಡ್ಲೆ ಮಶಾಕ್ ದರ್ಗಾದ (ladle mashak darga)ಒಳಗಡೆ ಇರುವ ರಾಘವ ಚೈತನ್ಯ ಶಿವಲಿಂಗಕ್ಕೆ ಹಿಂದೂಗಳು ಪೂಜೆ ಸಲ್ಲಿಸಿ ಹೊರಬಂದಿದ್ದಾರೆ. ​ಹೈಕೋರ್ಟ್ ಪೀಠದ ಆದೇಶದಂತೆ ಶ್ರೀ ಸಿದ್ದಲಿಂಗ ಸ್ವಾಮೀಜಿ , ಕಡಗಂಚಿ ಶಿವಯೋಗಿಗಳು , ಬಿಜೆಪಿ ಶಾಸಕ ಅವಿನಾಶ್ ಜಾಧವ್, ಹರ್ಷಾನಂದ ಗುತ್ತೆದಾರ್, ಚಂದು ಪಾಟೀಲ್, ಶಿವರಾಜ್ ಪಾಟೀಲ್ ರದ್ದೆವಾಡಗಿ ಸೇರಿದಂತೆ 15 ಜನ ಪೂಜೆಗೆ ತೆರಳಿದ್ದರು. ಸುಮಾರು ಒಂದು ಗಂಟೆಗಳ ಕಾಲ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಹಿಂದೂ ಮುಖಂಡರು ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ ಶಾಂತಿಯುತವಾಗಿ ರಾಘವಚೈತನ್ಯ ಶಿವಲಿಂಗ ಮಹಾಪೂಜೆ‌ ಮುಗಿದಿದೆ.

ಇನ್ನು ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಿ ಬಂದ ನಂತರ ಮಾತನಾಡಿದ ಆಂದೋಲಾ ಸಿದ್ದಲಿಂಗ ಸ್ವಾಮಿಜಿ, ‘ ನ್ಯಾಯಾಲಯದ ಅನುಮತಿ ಪಡೆದುಕೊಂಡು ಯಶಸ್ವಿಯಾಗಿ ಪೂಜೆ ಸಲ್ಲಿಸಿದ್ದೇವೆ‌. ಗಂಗಾಪೂಜೆ, ವಿಜ್ಞೇಶ್ವರ ಪೂಜೆ ಹಾಗೂ ರುದ್ರಪೂಜೆ ನೆರವೇರಿದ್ದೇವೆ. ಆದರೆ, ರಾಘವ ಚೈತನ್ಯ ಶಿವಲಿಂಗ ಆಕ್ರಮಣದ ಯತ್ನಗಳು ನಡೆಯುತ್ತಿವೆ. ಶಿವಲಿಂಗ ಇರುವ ಸ್ಥಳವನ್ನು ಗೋರಿಯಾಗಿ ಪರಿವರ್ತಿಸಲು ಚಾದರ್ ಹಾಕಿ ಆಕ್ರಮಣಕ್ಕೆ ಜಿಹಾದಿಗಳು ಯತ್ನಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ:ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವರಾತ್ರಿಯಂದು ಹಿಂದೂಗಳಿಗೆ ಪೂಜೆ ಸಲ್ಲಿಸಲು ಸಿಕ್ತು ಅವಕಾಶ

ಲ್ಯಾಂಡ್ ಜಿಹಾದ್​ಗೆ ಪೊಲೀಸರಿಂದ ಸಪೋರ್ಟ್ ಆರೋಪ

ಪೊಲೀಸರೂ ಸಹ ಲ್ಯಾಂಡ್ ಜಿಹಾದ್​ಗೆ ಸಪೋರ್ಟ್ ಮಾಡುತ್ತಿರುವಂತೆ ಕಾಣುತ್ತಿದೆ‌. ರಾಘವ ಚೈತನ್ಯ ಶಿವಲಿಂಗ ಇರುವ ಸ್ಥಳದಲ್ಲಿ ಸಿಕ್ಕ ಸಿಕ್ಕಲ್ಲಿ ಬ್ಯಾರಿಕೇಡಗಳನ್ನು ಹಾಕಿ ಪೂಜೆಗೆ ಅಡ್ಡಿಪಡಿಸುವ ಯತ್ನ ಮಾಡಿದ್ದಾರೆ. ನ್ಯಾಯಾಲಯವೇ ಅನುಮತಿ ನೀಡಿರುವ ಕಾರಣ ಶಾಂತಿಯುತವಾಗಿ ಪೂಜೆ ಸಲ್ಲಿಸಲು ಪೊಲೀಸರು ನಮಗೆ ಅನುಕೂಲ ಮಾಡಬೇಕಿತ್ತು. ಪೊಲೀಸರೂ ಸಹ ಮುಸ್ಲಿಂರ ತುಷ್ಠಿಕರಣಕ್ಕಾಗಿ ನಮಗೆ ಇಕ್ಕಟ್ಟು ಸೃಷ್ಟಿಸಿದ್ದಾರೆ. ಇದೆಲ್ಲವನ್ನೂ ನಾವು ನ್ಯಾಯಾಲಯದ ಗಮನಕ್ಕೆ ತರುತ್ತೇವೆ‌. ನ್ಯಾಯಾಂಗ ಹೋರಾಟದ ಮೂಲಕ ಮಂದಿರ ನಿರ್ಮಾಣ ಮಾಡಿಯೇ ಮಾಡುತ್ತೇವೆ ಎಂದು ಕಿಡಿಕಾರಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್