AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಹನಿಟ್ರ್ಯಾಪ್ ಪ್ರಕರಣ: ತಪ್ಪೊಪ್ಪಿಕೊಂಡ ವಿಡಿಯೋ ಬಿಡುಗಡೆ ಮಾಡಿದ ಆರೋಪಿ

ಕಲಬುರಗಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ಹನಿಟ್ರ್ಯಾಪ್​ನಿಂದ ಹಣ ತೆಗೆದುಕೊಂಡಿದ್ದ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಪ್ರಕರಣದ ಆರೋಪಿ ಪ್ರಭು ಹಿರೇಮಠ ವಿಡಿಯೋ ಬಿಡುಗಡೆ ಮಾಡಿದ್ದಾನೆ. ಉದ್ಯಮಿ ವಿನೋದ್ ಗೆ ಹನಿಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡಿದ್ದು ನಿಜ. 6 ಲಕ್ಷ ನನ್ನ ಅಕೌಂಟ್ ಗೆ RTGS ಮಾಡಿದ್ದಾರೆ. ಅದಾದ ಬಳಿಕ ನಮ್ಮ ಮಾವನ ಅಕೌಂಟ್ ಗೆ 8 ಲಕ್ಷ ಹಣ ಹಾಕಲಾಗಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.

ಕಲಬುರಗಿ ಹನಿಟ್ರ್ಯಾಪ್ ಪ್ರಕರಣ: ತಪ್ಪೊಪ್ಪಿಕೊಂಡ ವಿಡಿಯೋ ಬಿಡುಗಡೆ ಮಾಡಿದ ಆರೋಪಿ
ಕಲಬುರಗಿ ಹನಿಟ್ರ್ಯಾಪ್ ಪ್ರಕರಣ: ವಿಡಿಯೋ ಬಿಡುಗಡೆ ಮಾಡಿದ ಆರೋಪಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಆಯೇಷಾ ಬಾನು|

Updated on: Sep 08, 2024 | 11:04 AM

Share

ಕಲಬುರಗಿ, ಸೆ.08: ಕಲಬುರಗಿಯ ಹನಿಟ್ರ್ಯಾಪ್ (Honeytrap) ಕಹಾನಿ ಬಗೆದಷ್ಟು ಬಯಲಾಗುತ್ತಿದೆ. ಕಷ್ಟವೆಂದು ಬರುವ ಅಮಾಯಕ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡಿ ಲಕ್ಷ ಲಕ್ಷ ವಂಚನೆ ಮಾಡುತ್ತಿದ್ದ ಗ್ಯಾಂಗ್ ಅಸಲಿಯತ್ತು ಬಯಲಾಗಿದೆ. ಸದ್ಯ ಇದೀಗ ಹನಿಟ್ರ್ಯಾಪ್​ನಿಂದ ಹಣ ತೆಗೆದುಕೊಂಡಿದ್ದ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಪ್ರಕರಣದ ಆರೋಪಿ ಪ್ರಭು ಹಿರೇಮಠ ವಿಡಿಯೋ ಬಿಡುಗಡೆ ಮಾಡಿದ್ದಾನೆ.

ಹನಿಟ್ರ್ಯಾಪ್ ಪ್ರಕರಣದ ಆರೋಪಿ ಪ್ರಭು ಹಿರೇಮಠ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾನೆ. ಉದ್ಯಮಿ ವಿನೋದ್ ಗೆ ಹನಿಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡಿದ್ದು ನಿಜ. 6 ಲಕ್ಷ ನನ್ನ ಅಕೌಂಟ್ ಗೆ RTGS ಮಾಡಿದ್ದಾರೆ. ಅದಾದ ಬಳಿಕ ನಮ್ಮ ಮಾವನ ಅಕೌಂಟ್ ಗೆ 8 ಲಕ್ಷ ಹಣ ಹಾಕಲಾಗಿದೆ. ನನ್ನ ಅಕೌಂಟ್​ಗೆ ಹಣ ಹಾಕಿ ರಾಜು ಲೆಂಗಟಿ ವಿತ್ ಡ್ರಾ ಮಾಡಿಸಿಕೊಂಡಿದ್ದಾನೆ. ಆ ಹಣವನ್ನು ಸರ್ ಗೆ ಕೊಡಬೇಕು ಅಂತಾ ಹೇಳಿ ತೆಗೆದುಕೊಂಡು ಹೋಗಿದ್ದಾನೆ. ಸದ್ಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಭು ವಿಡಿಯೋ ಮಾಡಿ ತಾನು ಹಾಗೂ ಮತ್ತೊಬ್ಬ ಆರೋಪಿ ರಾಜು ಲೆಂಗಟಿ ಹಣ ಹಾಕಿದ್ದ‌ನ್ನ ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಯಾದಗಿರಿ: ಭಾವೈಕ್ಯತೆಯ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಪ್ರತಿಷ್ಠಾಪಿಸಿ ಹಬ್ಬ ಆಚರಣೆ

ಅಮಾಯಕ ಯುವತಿಯರು, ತಮಗೆ ಕಷ್ಟವಾಗಿದೆ ಎಂದು ಆ ಗ್ಯಾಂಗ್ ಹತ್ತಿರ ಬಂದಿದ್ದರು. ಆದರೆ ಅದನ್ನೇ ಬಂಡವಾಳ ಮಾಡಿಕೊಂಡ ಕಿರಾತಕರು ಹುಡುಗಿಯರನ್ನೆ ಇಟ್ಟುಕೊಟ್ಟು ಹನಿಟ್ರ್ಯಾಪ್ ದಂಧೆಗಿಳಿದಿದ್ದರು. ಸರ್ಕಾರಿ ಅಧಿಕಾರಿಗಳು, ಉಧ್ಯಮಿಗಳಿಗೆ ಹನಿಟ್ರ್ಯಾಪ್ ಮಾಡಿ ಲಕ್ಷ ಲಕ್ಷ ವಂಚನೆ ಮಾಡಿ ಕಿರುಕುಳ ನೀಡಿದ್ದಾರೆ. ಸಂತ್ರಸ್ತ ಯುವತಿಯರೇ ಟಿವಿಗಳ ಬಳಿ ಹನಿ ಹನಿಗ್ಯಾಂಗ್ ಕಹಾನಿ ಬಯಲು ಮಾಡಿದ್ದಾರೆ.

ತಮ್ಮ ಮನೆಯಲ್ಲಿ ಕಷ್ಟ ಇದೆ ಎಂದು ಬಂದ ಯುವತಿಯರನ್ನ ಖೆಡ್ಡಾಗೆ ಕೆಡವುತ್ತಿದ್ದ ಗ್ಯಾಂಗ್ ತಮ್ಮ ತೀಟೆ ತೀರಿಸಿಕೊಂಡು, ಬಳಿಕ ಹನಿ ಟ್ರ್ಯಾಪ್ ಮಾಡ್ತಿತ್ತು. ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನೆ ಟಾರ್ಗೇಟ್ ಮಾಡಿ ಗಾಳ ಹಾಕ್ತಿದ್ದ ಗ್ಯಾಂಗ್ ಯುವತಿರನ್ನ ಮುಂದೆ ಬಿಟ್ಟು ಲಾಡ್ಜ್ ಗೆ ಕರೆಯಿಸುತ್ತಿತ್ತು. ಬಳಿಕ ತಾವೇ ದಾಳಿ ಮಾಡಿ, ಫೋಟೋ, ವಿಡಿಯೋ ತೆಗೆದು ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡ್ತಿತ್ತು. ಬಳಿಕ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿತ್ತು. ಓರ್ವ ಕಾನ್ಸಟೇಬಲ್ ಹಾಗೂ ಉಧ್ಯಮಿಯನ್ನ ಹನಿಟ್ರ್ಯಾಪ್ ಮಾಡಿ ಬರೋಬ್ಬರಿ 47 ಲಕ್ಷ ವಸೂಲಿ ಮಾಡ್ತಿದ್ದರು. ಬಳಿಕ ಅಮಾಯಕ ಯುವತಿಯರನ್ನೂ ಹಣ ನೀಡದೇ ವಿಡಿಯೋ ಇಟ್ಟುಕೊಂಡು ವಂಚಿಸುತ್ತಿದ್ದರು. ಹೀಗಾಗೇ ಸಧ್ಯ ಸಂತ್ರಸ್ತ ಯುವತಿಯರು ನೀಡುದ ದೂರಿನ ಆಧಾರದ ಮೇಲೆ ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ರಾಜು ಲೆಂಗಟಿ, ಮಂಜು ಬಂಢಾರಿ, ಶ್ರೀಕಾಂತ ರೆಡ್ಡಿ, ಸಂತೋಷ ಸೇರಿದಂತೆ ಎಂಟು ಜನರ ವಿರುದ್ದ ಕೇಸ್ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ