AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರೆಂತಹ ದರೋಡೆಕೋರರೆಂದು ದಾಖಲೆ ಸಮೇತ ಬಹಿರಂಗ ಮಾಡುವೆ: RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಚಿತ್ತಾಪುರದಲ್ಲಿ ನಡೆದ ಪಥಸಂಚಲನ ಅಂತ್ಯವಲ್ಲ, ಆರಂಭ. ದೇವಾಲಯಗಳ ಹುಂಡಿ ಹಣವನ್ನು ಸರ್ಕಾರ ಲೆಕ್ಕ ಹಾಕುತ್ತದೆ, ಅಂಥಾದ್ದರಲ್ಲಿ ಆರ್​ಎಸ್ಎಸ್ ಹಣದ ಲೆಕ್ಕ ಕೇಳಬಾರದಾ? RSS ತೆರಿಗೆ ವಂಚನೆ ಬಗ್ಗೆ ದಾಖಲೆ ಸಮೇತ ಬಹಿರಂಗಪಡಿಸುವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರ್​​ಎಸ್ಎಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಇವರೆಂತಹ ದರೋಡೆಕೋರರೆಂದು ದಾಖಲೆ ಸಮೇತ ಬಹಿರಂಗ ಮಾಡುವೆ: RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
ಸಚಿವ ಪ್ರಿಯಾಂಕ್ ಖರ್ಗೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Nov 16, 2025 | 4:46 PM

Share

ಕಲಬುರಗಿ, ನವೆಂಬರ್​ 16: ಇಂದು ಜಿಲ್ಲೆಯ ಚಿತ್ತಾಪುರದಲ್ಲಿ ಆರ್​​​ಎಸ್​​ಎಸ್ (RSS) ಪಥಸಂಚಲನ ಆಯೋಜಿಸಲಾಗಿದೆ. ಈ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Minister Priyank Kharge) ಆರ್​​​ಎಸ್​​ಎಸ್​​ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಹಣ RSSಗೆ ಹೋಗಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡ್ತೀನಿ. ಎಷ್ಟು ಲೂಟಿ ಮಾಡಿದ್ದಾರೆನ್ನುವುದು ಗೊತ್ತಾಗುತ್ತದೆ. ಇವರೆಂತಹ ದರೋಡೆಕೋರರೆಂದು ದಾಖಲೆ ಸಮೇತ ಬಹಿರಂಗ ಮಾಡುವೆ ಎಂದು ಕಿಡಿಕಾರಿದ್ದಾರೆ.

ಆರ್​ಎಸ್ಎಸ್ ಕಥೆ ಇನ್ನೂ ಬಹಳ ಇದೆ ಮುಂದೆ ಹೇಳುತ್ತೇನೆ ಎಂದ ಪ್ರಿಯಾಂಕ್ ಖರ್ಗೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಚಿತ್ತಾಪುರದಲ್ಲಿ ಆರ್​​ಎಸ್ಎಸ್ ಪಥಸಂಚಲನ ಆಯ್ತೆಂದು ಮುಗಿದಿಲ್ಲ. ಚಿತ್ತಾಪುರದಲ್ಲಿ ಆರ್​ಎಸ್ಎಸ್ ಪಥಸಂಚಲನ ಮೂಲಕ ಶುರುವಾಗಿದೆ. ಆರ್​ಎಸ್ಎಸ್ ಕಥೆ ಇನ್ನೂ ಬಹಳ ಇದೆ ಮುಂದೆ ಹೇಳುತ್ತೇನೆ. ಚಿತ್ತಾಪುರಕ್ಕೆ 3 ಲಕ್ಷ ಜನ ಬರ್ತಾರೆ ಅಂದ್ರು, ಬಂದ್ರಾ? ಆರ್.ಅಶೋಕ್, ವಿಜಯೇಂದ್ರ ಚಿತ್ತಾಪುರಕ್ಕೆ ಬರ್ತೀವಿ ಅಂದ್ರು, ಬಂದ್ರಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: RSS ದೇಣಿಗೆ ಕುರಿತಾದ ಭಾಗವತ್ ಮಾತಿಗೆ ಪ್ರಿಯಾಂಕ್ ಖರ್ಗೆ ಟ್ವೀಟ್: 11 ಪ್ರಶ್ನೆ ಮುಂದಿಟ್ಟ ಸಚಿವ

ದೇವಾಲಯಗಳ ಹುಂಡಿ ಹಣವನ್ನು ಸರ್ಕಾರ ಲೆಕ್ಕ ಹಾಕುತ್ತದೆ, ಅಂಥಾದ್ದರಲ್ಲಿ ಆರ್​ಎಸ್ಎಸ್ ಹಣದ ಲೆಕ್ಕ ಕೇಳಬಾರದಾ? ಇವರು ಹೇಗೆ ಆದಾಯ ತೆರಿಗೆ ವಂಚಿಸುತ್ತಿದ್ದಾರೆಂದು ದಾಖಲೆ ಸಮೇತ ಬಹಿರಂಗಪಡಿಸುವೆ. ಇವರಿಗೆ ಯಾರೆಲ್ಲ ದೇಣಿಗೆ ಕೊಡುತ್ತಾರೆ, ಲೆಕ್ಕ ಹೇಗೆ ಕೊಡ್ತಾರೆ? ಆರ್​ಎಸ್ಎಸ್ ದೇಣಿಗೆ ಸಂಗ್ರಹದ ಬಗ್ಗೆ ಹೊರಗಡೆ ಬರಲಿದೆ ಎಂದು ಹೇಳಿದ್ದಾರೆ.

ಆರ್​ಎಸ್ಎಸ್​ನವರು ಏಕೆ ಪ್ರತಿಭಟನೆಯಲ್ಲಿ ಭಾಗಿಯಾಗಲ್ಲ?

ಆರ್​ಎಸ್ಎಸ್​ನವರು ಎಂದಾದರೂ ರೈತರ ಬಗ್ಗೆ ಮಾತಾಡಿದ್ದಾರಾ? ಗಣವೇಷ ಧರಿಸಿ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರಾ? ಕಬ್ಬಿಗೆ ಎಫ್ಆರ್​ಪಿ ನಿಗದಿ ಮಾಡಿ ಎಂದು ಏಕೆ ಹೋರಾಟ ಮಾಡಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: Chittapur RSS Pathsanchalan Live: ಚಿತ್ತಾಪುರದಲ್ಲಿ RSS ಪಥಸಂಚಲನ; ಲೈವ್​ ನೋಡಿ

ಇನ್ನು ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆ RSS ದೇಣಿಗೆ ವಿಚಾರವಾಗಿ ಟ್ವೀಟ್​ ಮಾಡುವ ಮೂಲಕ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗವತ್​​ಗೆ ಪ್ರಶ್ನೆ ಮಾಡಿದ್ದರು. ​

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು